ಆದದರಿಂದ ಇಸ್ರಾಯೇಲಿನ ಪ್ರಧಾನರೂ ಅರಸನೂ ತಮ್ಮನ್ನು ತಗ್ಗಿಸಿಕೊಂಡುಕರ್ತನು ನೀತಿವಂತನು ಅಂದರು.
Cross references
ಆಗ ಫರೋಹನು ಮೋಶೆ ಆರೋನರನ್ನು ಕರೇ ಕಳುಹಿಸಿ ಅವರಿಗೆ--ಈ ಸಾರಿ ನಾನು ಪಾಪಮಾಡಿ ದ್ದೇನೆ. ಕರ್ತನು ನೀತಿವಂತನು, ನಾನೂ ನನ್ನ ಜನರೂ ದುಷ್ಟರಾಗಿದ್ದೇವೆ.
ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.
ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ
ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ
ಆಗ ಅದೋನೀಬೆಜೆಕನು--ನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು; ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು. ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು; ಅವನು ಅಲ್ಲಿ ಸತ್ತನು.
ದೇಶದಲ್ಲಿ ಬರವೂ ಉರಿಗಾಳಿಯೂ ಕಾಡಿ ಗೆಯೂ ಬಾಣತಿ ರೋಗವಾದರೂ ಮಿಡಿತೆಯಾದರೂ ಕಂಬಳಿ ಹುಳವಾದರೂ ಅವರ ಶತ್ರುಗಳು ಅವರ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ ಯಾವ ಬಾಧೆ, ಯಾವ ಬೇನೆ ಇದ್ದರೂ
ಆದಾಗ್ಯೂ ಹಿಜ್ಕೀಯನೂ ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ ಹಿಜ್ಕೀಯನ ದಿವಸಗಳಲ್ಲಿ ಕರ್ತನ ರೌದ್ರವು ಅವರ ಮೇಲೆ ಬರಲಿಲ್ಲ.
ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು.
ಇದಲ್ಲದೆ ಅವನ ಪ್ರಾರ್ಥನೆಯೂ ಅವನು ದೇವ ರಿಗೆ ಭಿನ್ನವಿಸಿದ್ದೂ ಅವನ ಸಮಸ್ತ ಪಾಪವೂ ಅವನ ಅಪರಾಧವೂ ಅವನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಉನ್ನತ ಸ್ಥಳಗಳಲ್ಲಿ ಕಟ್ಟಿಸಿದ ತೋಪುಗಳೂ ಕೆತ್ತಿಸಿದ ವಿಗ್ರಹಗಳೂ ಸ್ಥಾಪಿಸಿದ ಸ್ಥಳಗಳೂ ಇಗೋ, ಪ್ರವಾದಿ ಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿವೆ.
ತನ್ನ ತಂದೆಯಾದ ಮನಸ್ಸೆಯು ತನ್ನನ್ನು ತಗ್ಗಿಸಿಕೊಂಡ ಹಾಗೆ ಆಮೋನನು ಕರ್ತನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ; ಆದರೆ ಆಮೋನನು ಅಧಿಕ ವಾಗಿ ಅಪರಾಧ ಮಾಡಿದನು.
ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ;
ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ
ಕರ್ತನು ನೀತಿವಂತನು; ದುಷ್ಟರ ಹಗ್ಗಗಳನ್ನು ಕೊಯಿದುಬಿಟ್ಟಿದ್ದಾನೆ.
ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.
ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.
ಕರ್ತನು ನೀತಿವಂತನು, ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿಬಿದ್ದಿದ್ದೇನೆ; ಎಲ್ಲಾ ಜನರೇ, ಕೇಳಿರಿ, ನಾನು ನಿಮ್ಮನ್ನು ಕೇಳಿ ಕೊಳ್ಳುತ್ತೇನೆ; ನನ್ನ ದುಃಖವನ್ನು ನೋಡಿರಿ, ನನ್ನ ಕನ್ಯೆಯರೂ ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.
ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ
ಆದದರಿಂದ ಕರ್ತನು ಕೇಡಿ ಗಾಗಿ ಕಾದುಕೊಂಡು ಅದನ್ನು ನಮ್ಮ ಮೇಲೆ ತಂದಿ ದ್ದಾನೆ. ನಮ್ಮ ದೇವರಾದ ಕರ್ತನು ತಾನು ಮಾಡುವ ಎಲ್ಲಾ ಕೆಲಸಗಳಲ್ಲೂ ನೀತಿವಂತನೇ; ನಾವಾದರೋ ಆತನ ಸ್ವರಕ್ಕೆ ವಿಧೇಯರಾಗಲಿಲ್ಲ.
ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.
ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.