ಇದಲ್ಲದೆ ಯೆಹೂದದ ಮನುಷ್ಯರು ಆರ್ಭಟಿಸಿದರು; ಯೆಹೂದದ ಮನುಷ್ಯರು ಆರ್ಭಟಿ ಸಿದಾಗ ಏನಾಯಿತಂದರೆ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮ ನನ್ನೂ ಸಮಸ್ತ ಇಸ್ರಾಯೇಲನ್ನೂ ಹೊಡೆದನು.
Cross references
ಕರ್ತನು ಇಸ್ರಾಯೇಲ್ಯರ ಸಭೆಯ ಮುಂದೆ ಹೊಡೆದ ದೇಶವೂ ಪಶುಗಳ ದೇಶವಾಗಿದೆ; ನಿನ್ನ ಸೇವಕರಿಗೆ ಪಶುಗಳು ಉಂಟು.
ಏಳನೇ ಸಾರಿ ಯಾಜಕರು ತುತೂರಿಗಳನ್ನು ಊದುವಾಗ ಆದದ್ದೇನಂದರೆ, ಯೆಹೋಶುವನು ಜನರಿಗೆ--ಆರ್ಭಟಿಸಿರಿ; ಕರ್ತನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ ಅಂದನು.
ಹೀಗೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತ್ತೂರಿಯ ಶಬ್ದವನ್ನು ಜನರು ಕೇಳಿದಾಗ ಮಹಾ ಆರ್ಭಟವಾಗಿ ಆರ್ಭಟಿಸುತ್ತಲೇ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು; ಹೀಗೆ ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಏರಿಹೋದನು. ಆಗ ಪಟ್ಟಣವು ಅವರಿಗೆ ಸ್ವಾಧೀನ ವಾಯಿತು.
ಕರ್ತನು ಅವರನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಅವರನ್ನು ಹೊಡೆದು ದೊಡ್ಡ ಚೀದೋನಿನವರೆಗೂ ಮಿಸ್ರೆಫೋತ್ಮಯೀಮಿನ ವರೆಗೂ ಮೂಡಲಲ್ಲಿರುವ ಮಿಚ್ಪೆಯ ತಗ್ಗಿನ ವರೆಗೂ ಹಿಂದಟ್ಟಿ ಅವರಲ್ಲಿ ಒಬ್ಬನ ನ್ನಾದರೂ ಉಳಿಸದೆ ಅವರನ್ನು ಹೊಡೆದುಬಿಟ್ಟರು.
ಕರ್ತನು ಸೀಸೆರನನ್ನೂ ಅವನ ಎಲ್ಲಾ ರಥಗಳನ್ನೂ ಎಲ್ಲಾ ಸೈನ್ಯವನ್ನೂ ಬಾರಾಕನ ಮುಂದೆ ಕತ್ತಿಯಿಂದ ಚದರಿಸಿದನು.
ನಾನೂ ನನ್ನ ಸಂಗಡ ಇರುವವ ರೆಲ್ಲರೂ ತುತೂರಿಯನ್ನು ಊದುವಾಗ ನೀವೆಲ್ಲರೂ ದಂಡಿನ ಸುತ್ತಲೂ ಎಲ್ಲಾ ಕಡೆಯಲ್ಲೂ ತುತೂರಿಗಳನ್ನು ಊದಿ ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಹೇಳಿರಿ ಅಂದನು.
ಅರಾಮ್ಯರ ಅರಸನ ಸೈನ್ಯಾಧಿಪತಿಯಾದ ನಾಮಾನನು ತನ್ನ ಯಜಮಾನನ ಮುಂದೆ ದೊಡ್ಡವನಾಗಿಯೂ ಘನವುಳ್ಳವನಾಗಿಯೂ ಇದ್ದನು. ಕರ್ತನು ಅವನಿಂದ ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದನು; ಇದಲ್ಲದೆ ಅವನು ಪರಾಕ್ರಮ ಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾ ಗಿದ್ದನು.
ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.
ಆಗ ಕರ್ತನು ಕೂಷಿಯರನ್ನು ಆಸನ ಮುಂದೆಯೂ ಯೆಹೂ ದದವರ ಮುಂದೆಯೂ ಹೊಡೆದನು. ಆದದರಿಂದ ಕೂಷಿಯರು ಓಡಿಹೋದರು.
ಅವನು ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಸೈನ್ಯದ ಮುಂದೆ ಅವರು ಹೊರಡುವಾಗ ಪರಿಶುದ್ಧತ್ವದ ಪ್ರಭೆಯನ್ನು ಸ್ತುತಿಸುವದಕ್ಕೆ ಕರ್ತನನ್ನು ಕೊಂಡಾಡಿರಿ, ಯಾಕಂದರೆ ಆತನ ಕೃಪೆಯು ಯುಗ ಯುಗಕ್ಕೂ ಇರುವದೆಂದು ಹೇಳುವದಕ್ಕೆ ಕರ್ತ ನಿಗೆ ಸಂಗೀತಗಾರರನ್ನು ನೇಮಿಸಿದನು.
ಅವರು ಹಾಡುವದಕ್ಕೂ ಸ್ತುತಿಸುವದಕ್ಕೂ ಆರಂಭಿಸಿದಾಗಲೇ ಕರ್ತನು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯಾರ್ ಪರ್ವತಗಳ ಮಕ್ಕಳಿಗೆ ವಿರೋಧವಾಗಿ ಹೊಂಚಿಕೊಳ್ಳುವವರನ್ನು ಇಟ್ಟಿದ್ದ ರಿಂದ ಅವರು ಹೊಡೆಯಲ್ಪಟ್ಟಿದ್ದರು.
ಎಲ್ಲಾ ಜನರೇ, ನೀವು ನಿಮ್ಮ ಕೈಗಳನ್ನು ತಟ್ಟಿರಿ; ಜಯಾರ್ಭಟದಿಂದ ದೇವರಿಗೆ ಧ್ವನಿಗೈಯಿರಿ.
ದೇವರು ಮಹಾಧ್ವನಿಯಿಂದ, ಕರ್ತನು ತುತೂ ರಿಯ ಶಬ್ದದಿಂದ, ಮೇಲೆ ಹೋಗಿದ್ದಾನೆ.
ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಕರ್ತನಿಗೆ ಭಯಪಡುವವರು ಹೇಳಲಿ.
ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.