Home Bibles 2 ದಿನವೃತ್ತಾಂತ 13:5 · ಕನ್ನಡ ಬೈಬಲ್
2 ದಿನವೃತ್ತಾಂತ 13:5 · ಕನ್ನಡ ಬೈಬಲ್

ಇಸ್ರಾಯೇಲಿನ ದೇವರಾದ ಕರ್ತನು ಇಸ್ರಾ ಯೇಲಿನ ಮೇಲೆ ರಾಜ್ಯವನ್ನು ಎಂದೆಂದಿಗೂ ದಾವೀ ದನಿಗೆ, ಅವನಿಗೂ ಅವನ ಮಕ್ಕಳಿಗೂ ಉಪ್ಪಿನ ಒಡಂಬಡಿಕೆಯಿಂದ ಕೊಟ್ಟನೆಂದು ನೀವು ತಿಳಿಯ ತಕ್ಕ ದ್ದಲ್ಲವೋ?

Cross references

ಲೇವ್ಯಕಾಂಡ 2:13

ನಿನ್ನ ಪ್ರತಿ ಯೊಂದು ಆಹಾರ ಸಮರ್ಪಣೆಯೂ ಉಪ್ಪಿನಲ್ಲಿ ಬೆರಿಕೆ ಯಾಗಿರಬೇಕು; ನಿನ್ನ ದೇವರ ಒಡಂಬಡಿಕೆಯನ್ನು ಸೂಚಿಸುವ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು; ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು.

ಅಂಕೆಗಳ ಪುಸ್ತಕ 18:19

ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಎತ್ತುವ ಪರಿಶುದ್ಧವಾದ ಅರ್ಪಣೆಗಳನ್ನೆಲ್ಲಾ ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ನಿತ್ಯ ಕಟ್ಟಳೆ ಯಾಗಿ ಕೊಟ್ಟಿದ್ದೇನೆ; ಇದು ಕರ್ತನ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ನಿತ್ಯವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು.

ನ್ಯಾಯಾಧಿಪತಿಗಳು 11:21

ಆಗ ಇಸ್ರಾಯೇಲಿನ ದೇವರಾದ ಕರ್ತನು ಸೀಹೋನನನ್ನೂ ಅವನ ಸಕಲ ಜನರನ್ನೂ ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಹೊಡೆದುಬಿಟ್ಟರು. ಹಾಗೆಯೇ ಇಸ್ರಾಯೇ ಲ್ಯರು ಆ ದೇಶದಲ್ಲಿ ವಾಸಿಸಿದ್ದ ಅಮೋರಿಯರ ದೇಶ ವನ್ನೆಲ್ಲಾ ಸ್ವಾಧೀನಮಾಡಿಕೊಂಡರು.

1 ಸಮುವೇಲ 16:1

ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.

1 ಸಮುವೇಲ 16:12

ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು.

2 ಸಮುವೇಲ 7:12

ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.

2 ಸಮುವೇಲ 10:13

ಆಗ ಯೋವಾಬನೂ ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ಯುದ್ಧ ಮಾಡುವದಕ್ಕೆ ಸವಿಾಪಕ್ಕೆ ಬಂದರು. ಅವರು ಅವನ ಎದುರಿನಿಂದ ಓಡಿಹೋದರು.

1 ಅರಸುಗಳು 8:20

ಈಗ ಕರ್ತನು ತಾನು ಹೇಳಿದ ವಾಕ್ಯ ವನ್ನು ಪೂರೈಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು, ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಿಸಿದ್ದೇನೆ.

1 ದಿನವೃತ್ತಾಂತ 17:11

ನಿನ್ನ ದಿವಸಗಳು ತೀರಿದ ಮೇಲೆ ನೀನು ನಿನ್ನ ಪಿತೃಗಳ ಬಳಿಗೆ ಸೇರಿದಾಗ ಆಗುವದೇ ನಂದರೆ, ನಾನು ನಿನ್ನ ತರುವಾಯ ನಿನ್ನ ಪುತ್ರರಿಂದಾ ಗುವ ನಿನ್ನ ಸಂತತಿಯನ್ನು ಎಬ್ಬಿಸಿ ಅವನಿಗೆ ರಾಜ್ಯವನ್ನು ಸ್ಥಿರಮಾಡುವೆನು.

1 ದಿನವೃತ್ತಾಂತ 17:14

ಅವನ ಸಿಂಹಾಸನವು ಯುಗ ಯುಗಕ್ಕೂ ಸ್ಥಿರವಾಗಿರುವದು.

1 ದಿನವೃತ್ತಾಂತ 28:4

ಆದರೆ ಇಸ್ರಾಯೇಲಿನ ಕರ್ತನಾದ ದೇವರು ಎಂದೆಂದಿಗೂ ಇಸ್ರಾಯೇಲಿನ ಮೇಲೆ ಅರಸನಾಗಿರಲು ನನ್ನ ತಂದೆಯ ಮನೆಯ ಸಮಸ್ತರಿಂದ ನನ್ನನ್ನು ಆದುಕೊಂಡನು. ಯಾಕಂದರೆ ನಾನು ನಾಯಕನಾಗಿರಲು ಯೆಹೂದನನ್ನೂ ಯೆಹೂ ದನ ಮನೆಯಲ್ಲಿ ನನ್ನ ತಂದೆಯ ಮನೆಯನ್ನೂ ಆದು ಕೊಂಡು ನನ್ನ ತಂದೆಯ ಕುಮಾರರಲ್ಲಿ ನನ್ನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗ ಮಾಡಲು ಚಿತ್ತ ವುಳ್ಳವನಾಗಿದ್ದನು;

2 ದಿನವೃತ್ತಾಂತ 6:16

ಆದಕಾರಣ ಇಸ್ರಾಯೇಲಿನ ದೇವರಾದ ಓ ಕರ್ತನೇ,--ನಿನ್ನ ಮಕ್ಕಳು ತಮ್ಮ ಮಾರ್ಗಕ್ಕೆ ಜಾಗ್ರತೆಯಾಗಿದ್ದು ನೀನು ನನ್ನ ಮುಂದೆ ನಡೆದ ಹಾಗೆ ಅವರು ನನ್ನ ನ್ಯಾಯ ಪ್ರಮಾಣದ ಪ್ರಕಾರ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ಕುಳಿತುಕೊ ಳ್ಳಲು ನಿನಗೆ ಮನುಷ್ಯನು ಕೊರತೆಯಾಗುವದಿಲ್ಲವೆಂದು ನೀನು ನನ್ನ ತಂದೆಯೂ ನಿನ್ನ ಸೇವಕನೂ ದಾವೀದನಿಗೆ ಹೇಳಿದ್ದನ್ನು ನಡಿಸು.

ನೆಹೆಮ್ಯ 5:9

ನಾನು ಅವರಿಗೆನೀವು ಮಾಡುವುದು ಒಳ್ಳೇದಲ್ಲ; ನಮ್ಮ ಶತ್ರುಗಳಾದ ಅನ್ಯರ ನಿಂದೆಯ ನಿಮಿತ್ತ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲಾ.

ಕೀರ್ತನೆಗಳು 89:19

ಆಗ ದರ್ಶನದಲ್ಲಿ ನಿನ್ನ ಪರಿಶುದ್ಧನ ಸಂಗಡ ಮಾತಾಡಿ ಹೇಳಿದ್ದೇನಂದರೆ --ಪರಾಕ್ರಮಶಾಲಿಯ ಮೇಲೆ ಸಹಾಯವನ್ನು ಇಟ್ಟಿ ದ್ದೇನೆ. ಆಯಲ್ಪಟ್ಟವನನ್ನು ಜನರೊಳಗಿಂದ ಉನ್ನತಕ್ಕೇರಿ ಸಿದ್ದೇನೆ.

ಸಾಮೇತಿಗಳು 1:29

ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ

ಯೆರೆಮಿಯ 27:5

ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ--

ಯೆರೆಮಿಯ 33:21

ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ನಿಮ್ಮನ್ನು ಬಿಟ್ಟು ಹೋಗಿರುವ ಬಾಬೆಲಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.

ಯೆಹೆಜ್ಕೇಲ 43:24

ನೀನು ಅವುಗಳನ್ನು ಕರ್ತನ ಮುಂದೆ ಅರ್ಪಿಸಬೇಕು; ಯಾಜಕರು ಅವುಗಳ ಮೇಲೆ ಉಪ್ಪನ್ನು ಹಾಕಿ ಅವುಗಳನ್ನು ಕರ್ತನಿಗೆ ದಹನಬಲಿಯಾಗಿ ಅರ್ಪಿಸಬೇಕು.

ದಾನಿಯೇಲ 4:25

ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿ ಬಿಡುವರು; ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು; ನಿನಗೆ ಎತ್ತುಗಳ ಸಂಗಡ ಹುಲ್ಲನ್ನು ಮೇಯಿಸುವರು. ಆಕಾಶದ ಮಂಜಿನಿಂದ ನಿನ್ನನ್ನು ತೇವ ಮಾಡುವರು. ಮಹೋನ್ನತನು ಮನುಷ್ಯರ ರಾಜ್ಯವನ್ನು ಆಳುವನೆಂದೂ ತನ್ನ ಮನಸ್ಸಿಗೆ ಸರಿಬಂದ ವರಿಗೆ ಅದನ್ನು ಕೊಡುತ್ತಾನೆಂದೂ ನೀನು ತಿಳಿಯುವ ವರೆಗೂ ಆ ಏಳು ಕಾಲಗಳು ಕಳೆದು ಹೋಗುವವು.

ದಾನಿಯೇಲ 5:18

ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು.

ಮಾರ್ಕ 9:49

ಯಾಕಂದರೆ ಪ್ರತಿಯೊಬ್ಬನಿಗೂ ಬೆಂಕಿಯಿಂದ ಸಾರವಾಗಬೇಕು; ಮತ್ತು ಪ್ರತಿಯೊಂದು ಯಜ್ಞಕ್ಕೆ ಉಪ್ಪಿ ನಿಂದ ಸಾರವಾಗಬೇಕು.ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.

ಲೂಕ 1:31

ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು.

2 ಪೇತ್ರ 3:5

ಅವರು ಇದನ್ನು ಬೇಕೆಂದು ತಿಳಿಯಲಾರರು; ಅದೇನಂದರೆ ಪೂರ್ವದಲ್ಲಿದ್ದ ಆಕಾಶಗಳೂ ನೀರಿನ ಹೊರಗೆ ಮತ್ತು ನೀರಿನ ಒಳಗೆ ನಿಂತಿರುವ ಭೂಮಿಯೂ ದೇವರ ವಾಕ್ಯದಿಂದ ಉಂಟಾಗಿ

Interlinear

Choose Theme