ಈಗ ದಾವೀದನ ಕುಮಾರರ ಕೈಯಲ್ಲಿರುವ ಕರ್ತನ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿ ಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೋಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು.
Cross references
ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.
ಅವನು ಒಂದನ್ನು ಬೇತೇಲಿನಲ್ಲಿಯೂ ಮತ್ತೊಂದನ್ನು ದಾನಿನಲ್ಲಿಯೂ ಇಟ್ಟನು.
ನೀನು ಹೋಗಿ ನನಗೆ ಕೋಪ ವನ್ನೆಬ್ಬಿಸುವ ಅನ್ಯ ದೇವರುಗಳನ್ನೂ ಎರಕ ಹೊಯ್ಯ ಲ್ಪಟ್ಟ ವಿಗ್ರಹಗಳನ್ನೂ ನಿನಗೆ ಮಾಡಿಕೊಂಡು ನನ್ನನ್ನು ನಿನ್ನ ಬೆನ್ನಿನ ಹಿಂದಕ್ಕೆ ಹಾಕಿದಿ.
ನಿನ್ನ ಕರ್ತನಾದ ದೇವರಿಗೋಸ್ಕರ ಅರಸ ನಾಗಿರಲು ತನ್ನ ಸಿಂಹಾಸನದ ಮೇಲೆ ನಿನ್ನನ್ನು ಇರಿ ಸಲು ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ನಿನ್ನ ದೇವರು ಇಸ್ರಾಯೇಲನ್ನು ಯುಗ ಯುಗಕ್ಕೂ ನಿಲ್ಲಿಸಲು ಅವರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅವರ ಮೇಲೆ ಅರಸನಾಗಿರಲು ಮಾಡಿದನು ಅಂದಳು.
ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.
ಆದರೆ ಕೂಷಿಯನಾದ ಜೆರಹನು ಅವರಿಗೆ ವಿರೋ ಧವಾಗಿ ಹೊರಟು ಮಾರೇಷದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ರಾಣುವೆಯೂ ಮುನ್ನೂರು ರಥಗಳೂ ಇದ್ದವು.
ಓ ಕರ್ತನೇ, ಪರಲೋಕದಲ್ಲಿರುವ ದೇವರು ನೀನಲ್ಲವೋ? ನೀನು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀಯಲ್ಲವೋ? ಯಾವನೂ ನಿನ್ನನ್ನು ಎದುರಿಸಕೂಡದ ಹಾಗೆ ನಿನ್ನ ಕೈಯಲ್ಲಿ ಶಕ್ತಿಯೂ ಪರಾಕ್ರಮವೂ ಇಲ್ಲವೋ?
ಓ ನಮ್ಮ ದೇವರೇ, ನೀನು ಅವರಿಗೆ ನ್ಯಾಯತೀರಿಸುವದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾಗುಂಪನ್ನು ಎದು ರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯಲಿಲ್ಲ. ಆದರೆ ನಮ್ಮ ಕಣ್ಣುಗಳು ನಿನ್ನ ಮೇಲೆ ಅವೆ ಅಂದರು.
ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?
ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ.
ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಓ ಸಮಾ ರ್ಯವೇ, ನಿನ್ನ ಬಸವನನ್ನು ನಾನು ತಳ್ಳಿಹಾಕಿದ್ದೇನೆ; ನನ್ನ ಕೋಪವು ಅವರ ಮೇಲೆ ಉರಿಯುತ್ತದೆ; ಅವರು ನಿರಪರಾಧಿಗಳಾಗದೆ ಇರುವದು ಎಷ್ಟರ ವರೆಗೆ?
ಅದು ಇಸ್ರಾಯೇಲ್ಯರಿಂದಲೂ ಆಗಿದೆ; ಕೆಲಸಗಾರನು ಅದನ್ನು ಮಾಡಿದನು, ಆದ್ದರಿಂದ ಅದು ದೇವರಲ್ಲ; ಆದರೆ ಸಮಾರ್ಯದ ಕರುವು ಪುಡಿಪುಡಿಯಾಗಿ ಮುರಿಯಲ್ಪಡುವದು.
ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.
ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.