ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.
Cross references
ಫರೋಹನು ಸವಿಾಪಕ್ಕೆ ಬರುತ್ತಿರಲು ಇಗೋ, ಇಸ್ರಾಯೇಲ್ ಮಕ್ಕಳು ತಮ್ಮ ಕಣ್ಣುಗಳನ್ನೆತ್ತಿ ಹಿಂದೆ ಬರುತ್ತಿರುವ ಐಗುಪ್ತ್ಯರನ್ನು ಕಂಡು ಇಸ್ರಾಯೇಲ್ ಮಕ್ಕಳು ಬಹಳವಾಗಿ ಭಯಪಟ್ಟು ಕರ್ತನಿಗೆ ಮೊರೆಯಿ ಟ್ಟರು.
ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ನಿಮ್ಮ ಮುಂದೆ ಕತ್ತಿಯಿಂದ ಬೀಳುವರು.
ಅವರ ಶತ್ರುಗಳು--ನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು.
ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.
ಓ ಕರ್ತನೇ, ಈಗ ನಾನೇನು ಹೇಳಲಿ? ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಬೆನ್ನು ತಿರುಗಿಸಿದ್ದಾರಲ್ಲಾ.
ಆಗ ಕರ್ತನು ಗಿದ್ಯೋನನಿಗೆ--ನೆಕ್ಕಿ ಕುಡಿದ ಆ ಮುನ್ನೂರು ಜನರಿಂದ ನಾನು ನಿಮ್ಮನ್ನು ರಕ್ಷಿಸಿ ಮಿದ್ಯಾನ್ಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು; ಇತರ ಜನರೆಲ್ಲಾ ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ ಅಂದನು.
ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.
ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು.
ಆಗ ನಾನು ಅದರ ಹಿಂದೆ ಹೋಗಿ ಅದನ್ನು ಹೊಡೆದು ಆ ಕುರಿಮರಿಯನ್ನು ಅದರ ಬಾಯಿಂದ ತಪ್ಪಿಸಿದೆನು. ಅದು ನನ್ನ ಮೇಲೆ ಹಿಂತಿರುಗಿ ಬಿದ್ದಾಗ ನಾನು ಅದರ ಗಡ್ಡವನ್ನು ಹಿಡಿದು ಹೊಡೆದು ಕೊಂದುಹಾಕಿದೆನು.
ಆಗ ದಾವೀದನು ಫಿಲಿಷ್ಟಿಯನಿಗೆ--ನೀನು ಕತ್ತಿ ಈಟಿಯ ಗುರಾಣಿಯ ಸಂಗಡ ನನ್ನ ಬಳಿಗೆ ಬರುತ್ತೀ; ಆದರೆ ನೀನು ನಿಂದಿಸಿದ ಇಸ್ರಾಯೇ ಲಿನ ಸೈನ್ಯಗಳ ದೇವರಾದಂಥ ಸೈನ್ಯಗಳ ಕರ್ತನ ಹೆಸರಿ ನಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ.
ಆದದರಿಂದ ಇಸ್ರಾಯೇಲಿನ ಮಕ್ಕಳು ಲೆಕ್ಕ ಮಾಡಲ್ಪಟ್ಟು ಬೇಕಾದದ್ದನ್ನು ಸಿದ್ಧಮಾಡಿಕೊಂಡು ಅವರಿಗೆ ಎದುರಾಗಿ ಹೊರಟರು. ಇಸ್ರಾಯೇಲಿನ ಮಕ್ಕಳು ಅವರಿಗೆದುರಾಗಿ ದಂಡಿಳಿದಿರುವಾಗ ಅವರು ಮೇಕೆ ಮರಿಗಳ ಎರಡು ಮಂದೆಗಳ ಹಾಗಿದ್ದರು; ಆದರೆ ಅರಾಮ್ಯರು ದೇಶವನ್ನು ತುಂಬಿಕೊಂಡಿದ್ದರು.
ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು.
ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು.
ಯೆಹೂದದವರು ಹಿಂದಕ್ಕೆ ನೋಡಿದಾಗ ಇಗೋ, ಯುದ್ಧವು ಅವರ ಮುಂದೆಯೂ ಹಿಂದೆಯೂ ಇತ್ತು. ಆಗ ಅವರು ಕರ್ತನಿಗೆ ಕೂಗಿದರು, ಯಾಜಕರು ತುತೂರಿಗಳನ್ನು ಊದಿದರು.
ಇದಲ್ಲದೆ ಯೆಹೂದದ ಮನುಷ್ಯರು ಆರ್ಭಟಿಸಿದರು; ಯೆಹೂದದ ಮನುಷ್ಯರು ಆರ್ಭಟಿ ಸಿದಾಗ ಏನಾಯಿತಂದರೆ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮ ನನ್ನೂ ಸಮಸ್ತ ಇಸ್ರಾಯೇಲನ್ನೂ ಹೊಡೆದನು.
ಹೀಗೆ ಆ ಕಾಲದಲ್ಲಿ ಇಸ್ರಾಯೇಲಿನ ಮಕ್ಕಳು ತಗ್ಗಿಸಲ್ಪಟ್ಟರು. ಯೆಹೂದನ ಮಕ್ಕಳು ತಮ್ಮ ಪಿತೃಗಳ ದೇವರಾದ ಕರ್ತನ ಮೇಲೆ ಆತುಕೊಂಡಿದ್ದರಿಂದ ಜಯಹೊಂದಿದರು.
ಆದದರಿಂದ ರಥಗಳ ಅಧಿಪತಿ ಗಳು ಯೆಹೋಷಾಫಾಟನನ್ನು ನೋಡಿದಾಗ--ನಿಶ್ಚ ಯವಾಗಿ ಇವನೇ ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಳ್ಳಲು ಕರ್ತನು ಅವ ನಿಗೆ ಸಹಾಯಕೊಟ್ಟನು. ಇದಲ್ಲದೆ ದೇವರು ಅವರನ್ನು ಅವನ ಕಡೆಯಿಂದ ತೊಲಗಿಸಿದನು.
ಓ ನಮ್ಮ ದೇವರೇ, ನೀನು ಅವರಿಗೆ ನ್ಯಾಯತೀರಿಸುವದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾಗುಂಪನ್ನು ಎದು ರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯಲಿಲ್ಲ. ಆದರೆ ನಮ್ಮ ಕಣ್ಣುಗಳು ನಿನ್ನ ಮೇಲೆ ಅವೆ ಅಂದರು.
ಅವನು ತನ್ನ ತಂದೆಯಾದ ಆಸನ ಮಾರ್ಗ ದಲ್ಲಿ ನಡೆದು ಅದನ್ನು ಬಿಟ್ಟುಬಿಡದೆ ಕರ್ತನ ಸಮ್ಮುಖ ದಲ್ಲಿ ಸರಿಯಾದದ್ದನ್ನು ಮಾಡಿದನು.
ಇದ ಲ್ಲದೆ ಫಿಲಿಷ್ಟಿಯರ ಮೇಲೆಯೂ ಗೂರ್ಬಾಳಿನಲ್ಲಿ ವಾಸವಾಗಿದ್ದ ಅರಬ್ಬಿಯರ ಮೇಲೆಯೂ ಮೆಗೂನ್ಯರ ಮೇಲೆಯೂ ಅವನು ಯುದ್ಧಮಾಡಿ ದಾಗ ದೇವರು ಅವನಿಗೆ ಸಹಾಯಕೊಟ್ಟನು.
ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು.
ಇದರ ನಿಮಿತ್ತ ಅರಸನಾದ ಹಿಜ್ಕೀಯನೂ ಆಮೋ ಚನ ಮಗನಾಗಿರುವ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.
ಓ ಕರ್ತನೇ, ಏಳು; ಮನುಷ್ಯನು ಬಲಗೊಳ್ಳದೆ ಇರಲಿ; ನಿನ್ನ ಸಮ್ಮುಖದಲ್ಲಿ ಜನಾಂಗಗಳಿಗೆ ನ್ಯಾಯ ತೀರ್ವಿಕೆ ಆಗಲಿ.ಓ ಕರ್ತನೇ, ಅವರಿಗೆ ಭಯವನ್ನು ಹುಟ್ಟಿಸು; ಆಗ ಜನಾಂಗಗಳು ತಾವು ಮನುಷ್ಯರೇ ಎಂದು ತಿಳುಕೊಳ್ಳುವರು. ಸೆಲಾ.
ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು.
ನಾವು ನಿನ್ನ ರಕ್ಷಣೆಯಲ್ಲಿ ಹರ್ಷಿಸಿ ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು; ಕರ್ತನು ನಿನ್ನ ಬಿನ್ನಹಗಳನ್ನೆಲ್ಲಾ ಪೂರೈ ಸಲಿ.
ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ.
ಅವರು ಬೊಗ್ಗಿ ಬೀಳುತ್ತಾರೆ; ಆದರೆ ನಾವು ಎದ್ದು ನಿಂತುಕೊಳ್ಳುತ್ತೇವೆ.ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.
ನಿನಗೆ ಅವರು ಮೊರೆ ಇಟ್ಟದ್ದರಿಂದ ತಪ್ಪಿಸ ಲ್ಪಟ್ಟರು; ನಿನ್ನಲ್ಲಿ ಭರವಸವಿಟ್ಟದ್ದರಿಂದ ಅವರು ನಾಚಿಕೆ ಪಡಲಿಲ್ಲ.
ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ.
ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
ನಿನ್ನ ಮಾರ್ಗವನ್ನು ಕರ್ತನಿಗೆ ಒಪ್ಪಿಸು; ಆತನಲ್ಲಿ ಭರವಸ ವಿಡು; ಆತನು ಅದನ್ನು ನೆರವೇರಿಸುವನು.
ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
ಓ ನಮ್ಮ ರಕ್ಷಣೆಯ ದೇವರೇ, ನಿನ್ನ ಹೆಸರಿನ ಘನದ ನಿಮಿತ್ತ ನಮಗೆ ಸಹಾಯ ಮಾಡು; ನಿನ್ನ ಹೆಸರಿಗಾಗಿ ನಮ್ಮನ್ನು ಬಿಡಿಸಿ ನಮ್ಮ ಪಾಪಗಳನ್ನು ತೊಳೆದುಬಿಡು.
ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು.
ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
ಓ ಕರ್ತನೇ, ನಮ್ಮ ದೇವರೇ, ನಿನ್ನ ಬದಲು ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು. ಆದರೆ ನಿನ್ನಿಂದ ಮಾತ್ರವೇ ನಿನ್ನ ನಾಮವನ್ನು ನಾವು ಜ್ಞಾಪಿಸಿ ಕೊಳ್ಳುವಂತಾಯಿತು.