ತಮ್ಮ ಪಿತೃಗಳ ದೇವರಾದ ಕರ್ತನನ್ನು ಹುಡುಕಲೂ ನ್ಯಾಯಪ್ರಮಾಣವನ್ನು ಆಜ್ಞೆಯನ್ನು ಕೈಕೊಳ್ಳಲೂ ಯೆಹೂದ್ಯರಿಗೆ ಆಜ್ಞಾಪಿ ಸಿದನು.
Cross references
ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.
ತನ್ನ ಕುಮಾರರು ತಮ್ಮ ಭ್ರಷ್ಟತ ನಕ್ಕೆ ಈಡಾದಾಗ ಅವರನ್ನು ಹತೋಟಿಗೆ ತರಲಿಲ್ಲ. ಆದದರಿಂದ ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯ ತೀರಿಸುವೆನು ಎಂದು ಹೇಳಿದ್ದೇನೆ.
ಇವರ ತರುವಾಯ ಇಸ್ರಾಯೇಲಿನ ಕರ್ತನಾದ ದೇವರನ್ನು ಹುಡುಕಲು ತಮ್ಮ ಹೃದಯ ಗಳನ್ನು ಕೊಟ್ಟು ತಮ್ಮ ಪಿತೃಗಳ ದೇವರಾದ ಕರ್ತನಿಗೆ ಬಲಿ ಅರ್ಪಿಸಲು ಇಸ್ರಾಯೇಲಿನ ಸಮಸ್ತ ಗೋತ್ರ ಗಳಿಂದ ಯೆರೂಸಲೇಮಿಗೆ ಬಂದರು.
ಅವರು ರಾಜ್ಯಕ್ಕೋಸ್ಕರವೂ ಪರಿಶುದ್ಧ ಸ್ಥಾನಕ್ಕೋಸ್ಕರವೂ ಯೆಹೂದಕ್ಕೋಸ್ಕರವೂ ಪಾಪದ ಬಲಿಯಾಗಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಮೇಕೆ ಗಳನ್ನೂ ತಂದರು. ಆಗ ಕರ್ತನ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಆರೋನನ ಮಕ್ಕಳಾದ ಯಾಜಕರಿಗೆ ಹೇಳಿದನು.
ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿ ಯನ್ನು ಅರ್ಪಿಸಲು ಹೇಳಿದನು. ದಹನಬಲಿಯನ್ನು ಅರ್ಪಿಸಲು ಆರಂಭಿಸಿದಾಗ ತುತೂರಿಗಳಿಂದಲೂ ಇಸ್ರಾಯೇಲಿನ ಅರಸನಾದ ದಾವೀದನ ವಾದ್ಯಗ ಳಿಂದಲೂ ಕರ್ತನ ಹಾಡು ಆರಂಭವಾಯಿತು.
ಇದಲ್ಲದೆ ಅರಸನಾದ ಹಿಜ್ಕೀಯನೂ ಪ್ರಧಾ ನರೂ ದಾವೀದನ ಮತ್ತು ಪ್ರವಾದಿಯಾದ ಆಸಾಫನ ಮಾತುಗಳಿಂದ ಕರ್ತನನ್ನು ಸ್ತುತಿಸಬೇಕೆಂದು ಲೇವಿ ಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಬೊಗ್ಗಿಕೊಂಡು ಆರಾಧಿಸಿದರು.
ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು.
ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ ತನ್ನ ಪಿತೃಗಳ ಕರ್ತನಾದ ದೇವರಾಗಿರುವ ದೇವರನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಮಾಡುವವನ ಪಾಪವನ್ನು ದಯವುಳ್ಳ ಕರ್ತನು ಮುಚ್ಚಲಿ ಎಂದು ಹೇಳಿದನು.
ಅವನು ಕರ್ತನ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಸಮಾಧಾನದ ಬಲಿಗಳನ್ನೂ ಸ್ತೋತ್ರದ ಬಲಿಗಳನ್ನೂ ಅರ್ಪಿಸಿ ಇಸ್ರಾಯೇಲಿನ ದೇವರಾದ ಕರ್ತನನ್ನು ಸೇವಿಸಲು ಯೆಹೂದದವರಿಗೆ ಆಜ್ಞಾಪಿಸಿ ದನು.
ಇದಲ್ಲದೆ ಅವನು ಯೆರೂಸಲೇಮಿ ನಲ್ಲಿಯೂ ಬೆನ್ಯಾವಿಾನಿನಲ್ಲಿಯೂ ಸಿಕ್ಕಿದವರೆಲ್ಲರನ್ನು ಅದಕ್ಕೆ ಒಪ್ಪುವಂತೆ ಮಾಡಿದನು. ಹಾಗೆಯೇ ಯೆರೂ ಸಲೇಮಿನ ನಿವಾಸಿಗಳು ತಮ್ಮ ಪಿತೃಗಳ ದೇವರ ಒಡಂಬಡಿಕೆಯ ಪ್ರಕಾರ ಮಾಡಿದರು.ಹೀಗೆಯೇ ಯೋಷೀಯನು ಇಸ್ರಾಯೇಲ್ ಮಕ್ಕಳಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದು ಹಾಕಿ ಇಸ್ರಾಯೇಲಿನಲ್ಲಿ ಉಳಿದಿರುವರೆಲ್ಲರೂ ತಮ್ಮ ದೇವರಾದ ಕರ್ತನನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವ ರಾದ ಕರ್ತನನ್ನು ಹಿಂಬಾಲಿಸುವದನ್ನು ಬಿಡದೆ ಇದ್ದರು.
ಆಗ ಸೆರೆಯ ಮಕ್ಕಳೆಲ್ಲರೂ ಯೆರೂಸಲೇಮಿಗೆ ಕೂಡಿ ಬರಬೇಕೆಂದು ಯೆಹೂದ ಮತ್ತು ಯೆರೂಸ ಲೇಮಿನಲ್ಲಿ ಎಲ್ಲೆಲ್ಲಿಯೂ ಪ್ರಕಟಿಸಿದರು.
ಇವರು ತಮ್ಮ ಸಹೋದರರಾದ ತಮ್ಮ ಮುಖ್ಯಸ್ಥರ ಸಂಗಡ ಕೂಡಿಕೊಂಡು--ದೇವರ ಸೇವಕನಾದ ಮೋಶೆಯ ಕೈಯಿಂದ ಕೊಟ್ಟ ದೇವರ ನ್ಯಾಯಪ್ರಮಾಣದಲ್ಲಿ ನಡೆಯುತ್ತೇವೆಂದೂ ಕರ್ತ ನಾದ ನಮ್ಮ ದೇವರ ಆಜ್ಞೆಗಳನ್ನೂ ಆತನ ನ್ಯಾಯ ಗಳನ್ನೂ ಆತನ ಕಟ್ಟಳೆಗಳನ್ನೂ ಎಲ್ಲವನ್ನೂ ಕೈಕೊಂಡು ಮಾಡುತ್ತೇವೆಂದೂ;
ಆಗ ನಾನು ಹೇಳಿದ್ದ ರಿಂದ ಅವರು ಕೊಠಡಿಗಳನ್ನು ಶುಚಿಮಾಡಿದರು. ತರುವಾಯ ದೇವರ ಆಲಯದ ಸಾಮಾನುಗಳನ್ನೂ ಅಪಾರ ಸಮರ್ಪಣೆಗಳನ್ನೂ ಧೂಪವರ್ಗವನ್ನೂ ತಿರಿಗಿ ಅಲ್ಲಿಗೆ ತಂದು ಇಡಿಸಿದೆನು.
ಆದಕಾರಣ ಸಬ್ಬತ್ ಆಗುವದಕ್ಕಿಂತ ಮುಂಚೆ ಯೆರೂಸಲೇಮಿನ ಬಾಗಲು ಗಳಲ್ಲಿ ಕತ್ತಲು ಆಗಲಾರಂಭಿಸಿದಾಗ ಬಾಗಲುಗಳನ್ನು ಹಾಕುವ ಹಾಗೆಯೂ ಸಬ್ಬತ್ ದಿವಸವು ತೀರುವ ವರೆಗೆ ಅವುಗಳನ್ನು ತೆರೆಯದೆ ಇರುವ ಹಾಗೆಯೂ ನಾನು ಅವರಿಗೆ ಹೇಳಿದೆನು. ಮತ್ತು ಸಬ್ಬತ್ ದಿವಸದಲ್ಲಿ ಹೊರೆ ಏನಾದರೂ ಒಳಗೆ ತಾರದ ಹಾಗೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಲುಗಳ ಬಳಿಯಲ್ಲಿ ಇಟ್ಟೆನು.
ಸಂಪೂರ್ಣವಾದ ಮಾರ್ಗದಲ್ಲಿ ಬುದ್ಧಿ ಯಿಂದ ನಡೆದು ಕೊಳ್ಳುವೆನು; ಯಾವಾಗ ನನ್ನ ಬಳಿಗೆ ಬರುವಿ? ನನ್ನ ಹೃದಯದ ಸಂಪೂರ್ಣತೆಯಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು.
ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು.
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
ಕರ್ತನು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾನೆ--ನೀವು ನನ್ನನ್ನು ಹುಡುಕಿ ಜೀವಿಸಿರಿ.