ಇದಲ್ಲದೆ ಅವನು ಯೆಹೂದದಲ್ಲಿ ಕೋಟೆ ಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ದೇಶವು ಶಾಂತವಾ ಗಿತ್ತು. ಕರ್ತನು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರುಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ.
Cross references
ಕರ್ತನು ಇಸ್ರಾಯೇಲನ್ನು ಸುತ್ತಲಿರುವ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಕೊಟ್ಟ ಬಹಳ ದಿನಗಳ ತರುವಾಯ ಯೆಹೋಶುವನ ದಿನಗಳು ತುಂಬಿ ವೃದ್ಧನಾದನು.
ದೇಶವು ನಾಲ್ವತ್ತು ವರುಷದ ವರೆಗೆ ವಿಶ್ರಾಂತಿಯಿಂದಿತ್ತು. ಕೆನಜನ ಮಗನಾದ ಒತ್ನೀಯೇಲನು ಸತ್ತನು.
ಹೀಗೆ ಆ ದಿನದಲ್ಲಿ ಮೋವಾಬ್ ಇಸ್ರಾಯೇಲಿನ ಕೈಕೆಳಗೆ ತಗ್ಗಿಸಲ್ಪಟ್ಟಿತು; ದೇಶವು ಎಂಭತ್ತು ವರುಷ ವಿಶ್ರಾಂತಿಗೊಂಡಿತು.ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.
ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
ಆದರೆ ಈಗ ನನ್ನ ದೇವರಾದ ಕರ್ತನು ಶತ್ರುವಿನಿಂದ ತಗಲುವ ಕೇಡು ಒಂದಾದರೂ ಇಲ್ಲದ ಹಾಗೆ ಸಮಸ್ತ ದಿಕ್ಕುಗಳಲ್ಲಿ ನನಗೆ ಸಮಾಧಾನವನ್ನು ಕೊಟ್ಟಿದ್ದಾನೆ.
ಇಗೋ, ಸಮಾ ಧಾನವುಳ್ಳ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು; ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ಸಮಾಧಾನವನ್ನು ಕೊಡುವೆನು. ಅವ ನಿಗೆ ಸೊಲೊಮೋನನೆಂಬ ಹೆಸರಾಗುವದು; ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಸಮಾಧಾನ ವನ್ನೂ ವಿಶ್ರಾಂತಿಯನ್ನೂ ಕೊಡುವೆನು.
ಕರ್ತನು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನೇಮಗಳನ್ನೂ ನ್ಯಾಯಗಳನ್ನೂ ಕೈಕೊ ಳ್ಳಲು ನೀನು ಜಾಗ್ರತೆಯಾಗಿರು; ಆಗ ಸಫಲವನ್ನು ಹೊಂದುವಿ. ಬಲವಾಗಿರು, ದೃಢವಾಗಿರು; ಭಯಪಡ ಬೇಡ, ಹೆದರಬೇಡ.
ಹೂರಾ ಮನು ಸೊಲೊಮೋನನಿಗೆ ತಿರಿಗಿ ಕೊಟ್ಟ ಪಟ್ಟಣಗ ಳನ್ನು ಸೊಲೊಮೋನನು ಕಟ್ಟಿಸಿ ಇಸ್ರಾಯೇಲ್ ಮಕ್ಕಳನ್ನು ಅಲ್ಲಿ ನಿವಾಸವಾಗಿರುವಂತೆ ಮಾಡಿದನು.
ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸಮಾಡಿ ಯೆಹೂದದಲ್ಲಿ ಕಾವಲು ಪಟ್ಟಣಗಳನ್ನು ಕಟ್ಟಿಸಿದನು.
ಇದಲ್ಲದೆ ಯೆಹೂದದವರೆಲ್ಲರೂ ಪ್ರಮಾಣಕ್ಕೆ ಸಂತೋಷಪಟ್ಟರು. ಅವರು ತಮ್ಮ ಪೂರ್ಣಹೃದಯ ದಿಂದ ಆಣೆ ಇಟ್ಟು ತಮ್ಮ ಪೂರ್ಣ ಇಷ್ಟದಿಂದ ಆತನನ್ನು ಹುಡುಕಲು ಆತನು ಅವರಿಗೆ ಸಿಕ್ಕಿದನು. ಕರ್ತನು ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು.
ತನ್ನ ತಂದೆಯ ದೇವರನ್ನು ಹುಡುಕಿ ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ ಆತನ ಆಜ್ಞೆಗಳಲ್ಲಿ ನಡೆದನು.
ಆದದರಿಂದ ಯೆಹೋಷಾಫಾಟನ ರಾಜ್ಯವು ಶಾಂತವಾಗಿತ್ತು; ಅವನ ದೇವರು ಸುತ್ತಲೂ ಅವನಿಗೆ ವಿಶ್ರಾಂತಿ ಕೊಟ್ಟನು.
ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾಗಿದ್ದ ಜೆಕರೀಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಕರ್ತನನ್ನು ಹುಡು ಕುವ ದಿವಸಗಳ ಮಟ್ಟಿಗೂ ದೇವರು ಅವನನ್ನು ಅಭಿ ವೃದ್ಧಿಪಡಿಸಿದನು.
ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.
ಅವನು ಇನ್ನೂ ಹುಡುಗನಾಗಿರುವಾಗ ತನ್ನ ಆಳ್ವಿಕೆಯ ಎಂಟನೇ ವರುಷದಲ್ಲಿ ತನ್ನ ಪಿತೃವಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕಹೊಯಿದ ವಿಗ್ರಹಗಳನ್ನೂ ತೆಗೆದುಹಾಕಿ ಯೆಹೂದ ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.
ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.
ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ.