ಇದಲ್ಲದೆ ಅರಸನಾಗಿರುವ ಆಸನ ತಾಯಿಯಾದ ಮಾಕಳನ್ನು ಕುರಿತು ಏನಂದರೆ, ಅವಳು ಒಂದು ವಿಗ್ರಹವನ್ನು ಮಾಡಿಸಿ ತೋಪಿನಲ್ಲಿ ಇರಿಸಿದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿದನು. ಇದಲ್ಲದೆ ಆಸನು ಅವಳ ವಿಗ್ರಹವನ್ನು ಕಡಿದುಹಾಕಿ ಅದನ್ನು ತುಳಿದು ಕಿದ್ರೋನ್ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
Cross references
ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು ಅದನ್ನು ಬೆಂಕಿಯಲ್ಲಿ ಸುಟ್ಟು ಪುಡಿಯಾಗುವ ವರೆಗೆ ಅರೆಸಿ ನೀರಿನ ಮೇಲೆ ಚೆಲ್ಲಿ ಆ ನೀರನ್ನು ಇಸ್ರಾಯೇಲ್ ಮಕ್ಕಳು ಕುಡಿಯುವಂತೆ ಮಾಡಿದನು.
ಅವನು ಅವರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಳಗಿನಿಂದ ಹೊರಕ್ಕೆ ದ್ವಾರದಿಂದ ದ್ವಾರಕ್ಕೆ ಹೋಗಿ ತನ್ನ ಸಹೋದರನನ್ನೂ ತನ್ನ ಜೊತೆಗಾರನನ್ನೂ ತನ್ನ ನೆರೆಯವನನ್ನೂ ಕೊಲ್ಲಲಿ ಎಂದು ಹೇಳಿದನು.
ಆದರೆ ನೀವು ಅವರ ಯಜ್ಞ ವೇದಿಗಳನ್ನು ಹಾಳುಮಾಡಿ ವಿಗ್ರಹಗಳನ್ನು ಒಡೆದು (ಅಶೇರ) ವಿಗ್ರಹ ಸ್ತಂಭಗಳನ್ನು ಕಡಿದುಹಾಕಬೇಕು.
ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು; ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು.
ಅವರಿಗೆ ಮಾಡಬೇಕಾದ ದ್ದೇನಂದರೆ ಅವರ ಬಲಿಪೀಠಗಳನ್ನು ಒಡೆದುಹಾಕ ಬೇಕು; ಅವರ ವಿಗ್ರಹಗಳನ್ನು ಮುರಿದುಹಾಕಬೇಕು; ಅವರ ತೋಪುಗಳನ್ನು ಕಡಿದುಹಾಕಬೇಕು; ಅವರು ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು.
ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು; ಅವುಗಳ ಮೇಲಿರುವ ಬೆಳ್ಳಿ ಬಂಗಾರವನ್ನು ಆಶಿಸಿ ನೀನು ತಕ್ಕೊಳ್ಳಬಾರದು; ಅದು ನಿನಗೆ ಉರ್ಲಾ ದೀತು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
ಇದಲ್ಲದೆ ನೀವು ಮಾಡಿದ ಪಾಪವಾಗಿರುವ ಆ ಕರುವನ್ನು ತಕ್ಕೊಂಡು ಬೆಂಕಿಯಲ್ಲಿ ಸುಟ್ಟು ತುಳಿದು ಅದು ಧೂಳಿ ನಂತೆ ಪುಡಿಯಾಗುವ ವರೆಗೆ ಚೆನ್ನಾಗಿ ಅರೆದು ಅದರ ಧೂಳನ್ನು ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ನಾನು ಹಾಕಿದೆನು.
ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು
ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.
ಅವನು ಯೆರೂಸಲೇಮಿನಲ್ಲಿ ಮೂರು ವರುಷ ಆಳಿದನು. ಅವನ ತಾಯಿ ಅಬೀಷಾಲೋಮನ ಮಗ ಳಾಗಿದ್ದು ಮಾಕಾ ಎಂಬ ಹೆಸರುಳ್ಳವಳಾಗಿದ್ದಳು.
ನಾಲ್ವತ್ತೊಂದು ವರುಷ ಅವನು ಯೆರೂ ಸಲೇಮಿನಲ್ಲಿ ಆಳಿದನು. ಅವನ ತಾಯಿ ಅಬೀಷಾ ಲೋಮನ ಮಗಳಾಗಿದ್ದು ಮಾಕಾಳೆಂಬ ಹೆಸರುಳ್ಳವ ಳಾಗಿದ್ದಳು.
ಇದಲ್ಲದೆ ಆಸನು ತನ್ನ ತಾಯಿಯಾದ ಮಾಕಾ ತೋಪಿನಲ್ಲಿ ಒಂದು ವಿಗ್ರಹವನ್ನು ಮಾಡಿಸಿ ಇಟ್ಟದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿ ಅವಳ ವಿಗ್ರಹ ವನ್ನು ಕಡಿದುಬಿಟ್ಟು ಕಿದ್ರೋನೆಂಬ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
ಅರ ಸನು--ಬಾಳನಿಗೋಸ್ಕರವೂ ವಿಗ್ರಹದ ತೋಪುಗಳಿ ಗೋಸ್ಕರವೂ ಆಕಾಶದ ಸೈನ್ಯಕ್ಕೋಸ್ಕರವೂ ಮಾಡ ಲ್ಪಟ್ಟಿದ್ದ ಎಲ್ಲಾ ಪಾತ್ರೆಗಳನ್ನು ಕರ್ತನ ಆಲಯದಿಂದ ಹೊರಗೆ ತಕ್ಕೊಂಡು ಬರಬೇಕೆಂದು ಪ್ರಧಾನ ಯಾಜಕ ನಾದ ಹಿಲ್ಕೀಯನಿಗೂ ಎರಡನೇ ತರಗತಿಯ ಯಾಜಕ ರಿಗೂ ದ್ವಾರಪಾಲಕರಿಗೂ ಆಜ್ಞಾಪಿಸಿದನು ಮತ್ತು ಅವನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಸುಡಿಸಿ ಅವುಗಳ ಬೂದಿ ಯನ್ನು ಬೇತೇಲಿಗೆ ತರುವಂತೆ ಮಾಡಿದನು.
ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು.
ಯೆಹೂದದ ಅರಸರು ಉಂಟು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ ಮನಸ್ಸೆಯು ಕರ್ತನ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠ ಗಳನ್ನೂ ಅರಸನು ಕೆಡವಿಸಿ ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.
ಇದಲ್ಲದೆ ಬೇತೇಲಿನಲ್ಲಿದ್ದ ಬಲಿಪೀಠವನ್ನೂ ಇಸ್ರಾಯೇಲ್ಯರು ಪಾಪಮಾಡಲು ಪ್ರೇರೇಪಿಸಿದ ನೆಬಾ ಟನ ಮಗನಾದ ಯಾರೊಬ್ಬಾಮನು ಮಾಡಿದ ಉನ್ನತ ಸ್ಥಳವನ್ನೂ ಅವನು ಕೆಡವಿಹಾಕಿ ಸುಟ್ಟ್ಟು ಅದನ್ನು ಧೂಳಾ ಗಲು ಪುಡಿಮಾಡಿ ವಿಗ್ರಹದ ತೋಪನ್ನು ಸುಡಿಸಿದನು.
ಆಸನು ತನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡಿದನು.
ಯಾಜ ಕರು ಕರ್ತನ ಆಲಯವನ್ನು ಶುಚಿಮಾಡಲು ಅದರ ಒಳಭಾಗದಲ್ಲಿ ಪ್ರವೇಶಿಸಿ ಕರ್ತನ ಮಂದಿರದಲ್ಲಿ ಕಂಡ ಮೈಲಿಗೆಯನ್ನು ಕರ್ತನ ಮನೆಯ ಅಂಗಳದೊಳಗೆ ತಂದರು; ಆಗ ಲೇವಿಯರು ಅದನ್ನು ತೆಗೆದುಕೊಂಡು ಕಿದ್ರೋನು ಹಳ್ಳದಲ್ಲಿ ಹಾಕಲು ಹೊರಗೆ ಒಯ್ದರು.
ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ತೆಗೆದುಹಾಕಿದರು ಮತ್ತು ಧೂಪಪೀಠಗಳನ್ನೆಲ್ಲಾ ತೆಗೆದು ಬಿಟ್ಟು ಕಿದ್ರೋನ್ ಹಳ್ಳದಲ್ಲಿ ಹಾಕಿದರು.
ಅವನು ಬಲಿಪೀಠಗಳನ್ನೂ ತೋಪುಗಳನ್ನೂ ಕೆಡವಿ ಹಾಕಿ ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿ ಮಾಡಿ ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡಿಸಿದ ತರುವಾಯ ಯೆರೂಸಲೇಮಿಗೆ ಹಿಂತಿರುಗಿದನು.
ಆಗುವದೇನಂದರೆ, ಯಾವನಾದರೂ ಇನ್ನು ಪ್ರವಾದಿ ಸಿದರೆ ಅವನ ಹೆತ್ತವರಾದ ತಂದೆತಾಯಿಗಳು ಅವ ನಿಗೆ--ನೀನು ಬದುಕಬಾರದು, ಕರ್ತನ ಹೆಸರಿನಲ್ಲಿ ಸುಳ್ಳು ಹೇಳುತ್ತೀ ಎಂದು ಹೇಳುವರು; ಅವನು ಪ್ರವಾದಿಸುವಾಗ ಅವನ ಹೆತ್ತವರಾದ ತಂದೆತಾಯಿ ಗಳು ಅವನನ್ನು ನೂಕಿಬಿಡುವರು.
ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.
ತರುವಾಯ ಆತನ ಸಹೋದರರೂ ತಾಯಿಯೂ ಅಲ್ಲಿಗೆ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೇಕಳುಹಿಸಿದರು.
ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,