ಆಸನು ತನ್ನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ತನ್ನ ಕಾಲುಗಳಲ್ಲಿ ರೋಗವುಳ್ಳವನಾ ಗಿದ್ದನು. ಅವನ ರೋಗವು ಅತಿಘೋರವಾಯಿತು. ಅವನು ತನ್ನ ರೋಗದಲ್ಲಿ ಕರ್ತನನ್ನು ಹುಡುಕದೆ ವೈದ್ಯರನ್ನು ಹುಡುಕಿದನು.
Cross references
ಯೋಸೇಫನು ತನ್ನ ತಂದೆಗೆ ಸುಗಂಧ ದ್ರವ್ಯವನ್ನು ಹಾಕಬೇಕೆಂದು ತನ್ನ ದಾಸರಾದ ವೈದ್ಯರಿಗೆ ಅಪ್ಪಣೆಕೊಡಲು ಅವರು ಇಸ್ರಾಯೇಲನಿಗೆ ಸುಗಂಧ ದ್ರವ್ಯವನ್ನು ಹಾಕಿದರು.
ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.
ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು.
ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರೂ ವ್ಯರ್ಥ ವೈದ್ಯರೇ.
ಕರ್ತನು ಹೀಗೆ ಅನ್ನುತ್ತಾನೆ--ಮಾತನಾಡು, ಏನಂದರೆ ಮನು ಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳು ವವು; ಧಾನ್ಯ ಕೊಯ್ಯುವವನು ಉಳಿಸಿದ ಕೈ ಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವವು.
ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
ಆದರೆ ಯೇಸು ಅದನ್ನು ಕೇಳಿ ಅವರಿಗೆ--ಕ್ಷೇಮದಿಂದಿರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವ ರಿಗೆ ವೈದ್ಯನು ಬೇಕು.
ಯೇಸು ಅದನ್ನು ಕೇಳಿ--ಕ್ಷೇಮದಿಂದಿರುವವರಿಗೆ ಅಲ್ಲ, ಕ್ಷೇಮವಿಲ್ಲದವರಿಗೆ ವೈದ್ಯನುಬೇಕು; ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕಾಗಿ ಕರೆಯುವದಕ್ಕೆ ಬಂದೆನು ಎಂದು ಅವರಿಗೆ ಹೇಳಿದನು.
ಅನೇಕ ವೈದ್ಯರಿಂದ ಬಹು ಕಷ್ಟಗಳನ್ನು ಅನುಭವಿಸಿ ತನಗಿದ್ದದ್ದನ್ನೆಲ್ಲಾ ವೆಚ್ಚ ಮಾಡಿದ್ದಾಗ್ಯೂ ರೋಗವು ಹೆಚ್ಚಾಯಿತೇ ಹೊರತು ಗುಣವಾಗಲಿಲ್ಲ.
ತೀರ್ಪು ಮಾಡಬೇಡಿರಿ; ಆಗ ನಿಮಗೂ ತೀರ್ಪಾಗುವದಿಲ್ಲ. ಖಂಡಿಸಬೇಡಿರಿ; ಆಗ ನಿಮಗೂ ಖಂಡನೆಯಾಗುವದಿಲ್ಲ. ಕ್ಷಮಿಸಿರಿ; ಆಗ ನಿಮಗೂ ಕ್ಷಮಿಸಲ್ಪಡುವದು.
ಪ್ರಿಯ ವೈದ್ಯನಾಗಿ ರುವ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ.
ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.