ಇಗೋ, ನಾನು ಬೆಳ್ಳಿಬಂಗಾರ ವನ್ನು ನಿನಗೆ ಕಳುಹಿಸಿದ್ದೇನೆ; ಇಸ್ರಾಯೇಲಿನ ಅರಸ ನಾದ ಬಾಷನು ನನ್ನನ್ನು ಬಿಟ್ಟುಹೋಗುವ ಹಾಗೆ ನೀನು ಹೋಗಿ ಅವನ ಸಂಗಡ ಮಾಡಿದ ಒಡಂಬಡಿ ಕೆಯನ್ನು ಮುರಿಯಬೇಕು ಎಂದು ಹೇಳಿದನು.
Cross references
ಅಬೀಮೆಲೆಕನು ಅಬ್ರಹಾ ಮನನ್ನು ಕರೆದು ಅವನಿಗೆ--ನೀನು ನಮಗೆ ಮಾಡಿ ದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಾನು ನಿನಗೆ ಏನು ಅಪರಾಧ ಮಾಡಿದ್ದೇನೆ? ನನಗೆ ನೀನು ಮಾಡಬಾರದ ಕಾರ್ಯಗಳನ್ನು ಮಾಡಿದ್ದೀ ಅಂದನು.
ಮೋಶೆಯು ಆರೋನನಿಗೆ--ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು ಎಂದು ಕೇಳಿದನು.
ಆಗ ಸಕಲ ಪ್ರಧಾನರು ಎಲ್ಲಾ ಸಭೆಗೆ--ನಾವು ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಅವರಿಗೆ ಆಣೆ ಇಟ್ಟೆವು; ಆದದರಿಂದ ಅವರನ್ನು ನಾವು ಮುಟ್ಟಕೂಡದು.
ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ ಅವರ ಬಲಿಪೀಠಗಳನ್ನು ಕೆಡವಿ ಬಿಡಿರಿ ಎಂದು ಹೇಳಿದೆನು. ಆದರೆ ನೀವು ನನ್ನ ಮಾತಿಗೆ ವಿಧೇಯರಾಗಲಿಲ್ಲ; ಹೀಗೆ ಯಾಕೆ ಮಾಡಿ ದಿರಿ?
ಆಗ ಅರಸನು ಗಿಬ್ಯೋನ್ಯರನ್ನು ಕಳುಹಿಸಿದನು. (ಆದರೆ ಗಿಬ್ಯೋನ್ಯರು ಇಸ್ರಾಯೇಲ್ ಮಕ್ಕಳಾಗಿರದೆ ಅಮೋರಿಯರಲ್ಲಿ ಉಳಿದವರಾಗಿದ್ದರು. ಅವರಿಗೆ ಇಸ್ರಾಯೇಲ್ ಮಕ್ಕಳು ಆಣೆ ಇಟ್ಟಿದ್ದರು. ಸೌಲನು ಇಸ್ರಾಯೇಲ್ ಮಕ್ಕಳಿಗೋಸ್ಕರವಾಗಿಯೂ ಯೆಹೂದ ಕ್ಕೋಸ್ಕರವಾಗಿಯೂ ತೋರಿಸಿದ ಆಸಕ್ತಿಯಿಂದ ಅವ ರನ್ನು ಹೊಡೆಯಲು ಹುಡುಕಿದ್ದನು)
ಇಸ್ರಾಯೇಲಿನ ಅರಸನಾದ ಅಹಾ ಬನು ಯೆಹೂದದ ಅರಸನಾದ ಯೆಹೋಷಾಫಾಟ ನಿಗೆ--ಗಿಲ್ಯಾದಿನಲ್ಲಿರುವ ರಾಮೋತಿಗೆ ನೀನು ನನ್ನ ಸಂಗಡ ಬರುತ್ತೀಯೋ ಅಂದನು. ಅದಕ್ಕವನು--ನಾನು ನಿನ್ನ ಹಾಗೆಯೂ ನನ್ನ ಜನರು ನಿನ್ನ ಜನರ ಹಾಗೆಯೂ ಯುದ್ಧದಲ್ಲಿ ನಿನ್ನ ಸಂಗಡ ಇರು ವೆವು ಅಂದನು.
ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು.
ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು.ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.
ಅವನು ಪ್ರಮಾಣವನ್ನು ತಿರಸ್ಕರಿಸಿ ಕೈಕೊಟ್ಟಾಗ್ಯೂ; ಇಗೋ, ಒಡಂಬಡಿಕೆಯನ್ನು ವಿಾರಿ ಇವುಗಳನ್ನೆಲ್ಲಾ ಮಾಡಿದ್ದ ರಿಂದ ತಪ್ಪಿಸಿಕೊಳ್ಳುವದಿಲ್ಲ.
ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
ಸ್ವಾಭಾವಿಕವಾದ ಮಮತೆಯಿಲ್ಲದವರೂ ಒಪ್ಪಂದವನ್ನು ಮುರಿಯುವವರೂ ಸುಳ್ಳಾಗಿ ದೂರು ವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯವರನ್ನೂ ಹೀನೈಸುವವರೂ