ಇವರು ಯೆಹೂದದಲ್ಲಿ ಬೋಧಿಸಿದರು. ಅವರ ಬಳಿಯಲ್ಲಿ ಕರ್ತನ ನ್ಯಾಯಪ್ರಮಾಣದ ಪುಸ್ತಕ ಇತ್ತು; ಯೆಹೂದದ ಸಮಸ್ತ ಪಟ್ಟಣಗಳನ್ನು ಸಂಚರಿಸಿ ಜನರಿಗೆ ಬೋಧಿಸಿದರು.
Cross references
ಓ ಇಸ್ರಾಯೇಲೇ, ಕೇಳು, ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನು.
ನಿನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ, ಆತನು ಆದು ಕೊಳ್ಳುವ ಸ್ಥಳದಲ್ಲಿ ಇಸ್ರಾಯೇಲಿನವರೆಲ್ಲರು ಕಾಣಿಸಿ ಕೊಳ್ಳುವದಕ್ಕೆ ಬಂದಾಗ ನೀನು ಈ ನ್ಯಾಯಪ್ರಮಾಣ ವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಅವರು ಕೇಳುವಹಾಗೆ ಓದಬೇಕು.
ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣವೆಲ್ಲಾದರ ಪ್ರಕಾರ ನೀನು ಕೈಕೊಂಡು ನಡೆ ಯುವ ಹಾಗೆ ಬಲವಾಗಿರು, ಬಹು ಧೈರ್ಯದಿಂದಿರು, ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ ಅದನ್ನು (ನ್ಯಾಯಪ್ರಮಾಣವನ್ನು) ಬಿಟ್ಟು ಬಲ ಕ್ಕಾದರೂ ಎಡಕ್ಕಾದರೂ ತಿರುಗಬೇಡ.
ಸಮಸ್ತ ಇಸ್ರಾಯೇಲ್ಯರಿಗೆ ಬೋಧಿಸತಕ್ಕ ವರೂ ಕರ್ತನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆಪರಿಶುದ್ಧವಾದ ಮಂಜೂಷವು ನಿಮ್ಮ ಭುಜಗಳ ಮೇಲೆ ಭಾರವಿಲ್ಲದ ಹಾಗೆ ನೀವು ಅದನ್ನು ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನು ಕಟ್ಟಿಸಿದ ಮನೆಯಲ್ಲಿ ಇರಿಸಿ ನಿಮ್ಮ ದೇವರಾದ ಕರ್ತನನ್ನೂ ಆತನ ಜನವಾದ ಇಸ್ರಾಯೇಲ್ಯರನ್ನೂ ಸೇವಿಸಿರಿ.
ಇದಲ್ಲದೆ ಯೇಷೂವನೂ ಬಾನೀಯೂ ಶೇರೇಬ್ಯನೂ ಯಾವಿಾನನೂ ಅಕ್ಕೂ ಬನೂ ಶಬ್ಬೆತೈನೂ ಹೋದೀಯನೂ ಮಾಸೇಯನೂ ಕೆಲೀಟನೂ ಅಜರ್ಯನೂ ಯೋಜಾಬಾದನೂ ಹಾನಾನನೂ ಪೆಲಾಯನೂ ಲೇವಿಯರೂ ಜನರಿಗೆ ನ್ಯಾಯಪ್ರಮಾಣವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು.
ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಮತ್ತು ಆದದ್ದೇನಂದರೆ, ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆ ಕೊಡು ವದನ್ನು ಮುಗಿಸಿದ ಮೇಲೆ ಅವರ ಪಟ್ಟಣಗಳಲ್ಲಿ ಬೋಧಿಸುವದಕ್ಕೂ ಸಾರುವದಕ್ಕೂ ಅಲ್ಲಿಂದ ಹೊರಟು ಹೋದನು.
ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯ ವನ್ನು ಯಾಕೆ ಮಾರುತ್ತಾರೆ? ಯಾಕಂದರೆ ಅವರು ರೊಟ್ಟಿ ತಿನ್ನುವಾಗ ತಮ್ಮ ಕೈಗಳನ್ನು ತೊಳಕೊಳ್ಳುವದಿಲ್ಲ ಅಂದರು.
ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಆಗ ಪ್ರವಾದಿಯಾದ ಯೆಶಾಯನ ಪುಸ್ತಕವು ಆತನಿಗೆ ಕೊಡಲ್ಪಟ್ಟಿತು. ಆತನು ಆ ಪುಸ್ತಕವನ್ನು ತೆರೆದು--
ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
ನೀವು ಮೋಶೆಯನ್ನು ನಂಬಿದ್ದರೆ ನನ್ನನ್ನೂ ನಂಬುತ್ತಿದ್ದಿರಿ; ಯಾಕಂದರೆ ಅವನು ನನ್ನ ವಿಷಯವಾಗಿ ಬರೆದನು.ಅವನು ಬರೆದದ್ದನ್ನು ನೀವು ನಂಬದಿದ್ದರೆ ನನ್ನ ಮಾತುಗಳನ್ನು ಹೇಗೆ ನಂಬಿರಿ ಅಂದನು.
ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.
ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.
ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.
ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು.
ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ