ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದು--ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳು ಆತ್ಮವಾಗಿರುವೆನು ಅಂದಿತು. ಅದಕ್ಕೆ ಆತನು--ನೀನು ಅವನನ್ನು ಮರುಳು ಗೊಳಿಸುವಿ, ಮತ್ತು ಜಯಿಸುವಿ; ಹೊರಟುಹೋಗಿ ಹಾಗೆ ಮಾಡು ಅಂದನು.
Cross references
ಸರ್ಪವು ಸ್ತ್ರೀಗೆ--ನೀವು ಖಂಡಿತವಾಗಿ ಸಾಯುವದಿಲ್ಲ;
ದೇವರು ಅಬೀಮೆಲೆಕನಿಗೂ ಶೆಕೆಮಿನ ಜನರಿಗೂ ನಡುವೆ ದುರಾತ್ಮನನ್ನು ಕಳುಹಿಸಿದನು.
ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮವು ಹೊರಟು ಬಂದು ಕರ್ತನ ಮುಂದೆ ನಿಂತು--ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು.
ಆಗ ಕರ್ತನು--ಇಸ್ರಾ ಯೇಲಿನ ಅರಸನಾದ ಅಹಾಬನು ಹೋಗಿ ರಾಮೋತ್ ಗಿಲ್ಯಾದಿನಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.
ಆದದರಿಂದ ಇಗೋ, ಕರ್ತನು ಈ ಸಮಸ್ತವಾದ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ. ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.
ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು.
ಆಗ ಕರ್ತನು ಸೈತಾನನಿಗೆ--ಇಗೋ, ಅವನು ನಿನ್ನ ಕೈಯಲ್ಲಿ ಇದ್ದಾನೆ; ಅವನ ಪ್ರಾಣವನ್ನಾದರೋ ಉಳಿಸಲೇ ಬೇಕು ಅಂದನು.
ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ.
ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
ನಾವಂತೂ ದೇವರಿಗೆ ಸಂಬಂಧಪಟ್ಟವ ರಾಗಿದ್ದೇವೆ; ದೇವರನ್ನು ಬಲ್ಲವನು ನಮ್ಮ ಮಾತನ್ನು ಕೇಳುತ್ತಾನೆ; ದೇವರಿಗೆ ಸಂಬಂಧಪಡದವನು ನಮ್ಮ ಮಾತನ್ನು ಕೇಳುವದಿಲ್ಲ. ಇದು ಸತ್ಯದ ಆತ್ಮ, ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದು ಕೊಳ್ಳುತ್ತೇವೆ.
ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.
ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.