Home Bibles 2 ದಿನವೃತ್ತಾಂತ 18:5 · ಕನ್ನಡ ಬೈಬಲ್
2 ದಿನವೃತ್ತಾಂತ 18:5 · ಕನ್ನಡ ಬೈಬಲ್

ಆಗ ಇಸ್ರಾಯೇಲಿನ ಅರಸನು ನಾನೂರು ಮಂದಿ ಪ್ರವಾದಿ ಗಳನ್ನು ಕೂಡಿಸಿ ಅವರಿಗೆ--ನಾವು ಗಿಲ್ಯಾದಿನಲ್ಲಿರುವ ರಾಮೋತಿಗೆ ಯುದ್ಧಕ್ಕೆ ಹೋಗಬಹುದೋ ಬಾರದೋ ಅಂದನು. ಅದಕ್ಕವರು--ಹೋಗು; ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.

Cross references

1 ಅರಸುಗಳು 12:9

ಅವನು ಅವರಿಗೆ--ನಿನ್ನ ತಂದೆ ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರ ಕೊಡಲು ಏನು ಯೋಚನೆ ಹೇಳುತ್ತೀರಿ ಅಂದನು.

1 ಅರಸುಗಳು 18:19

ಆದದರಿಂದ ನೀನು ಸಮಸ್ತ ಇಸ್ರಾಯೇಲ್ಯರನ್ನೂ ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ ಈಜೆಬೇಲಳ ಮೇಜಿನ ಹತ್ತಿರ ಭೋಜನ ಮಾಡುವ ತೋಪುಗಳ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕರ್ಮೆಲ್‌ ಬೆಟ್ಟಕ್ಕೆ ಕೂಡಿಸು ಅಂದನು.

2 ಅರಸುಗಳು 3:13

ಎಲೀ ಷನು ಇಸ್ರಾಯೇಲಿನ ಅರಸನಿಗೆ -- ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆ ತಾಯಿಯ ಪ್ರವಾದಿಗಳ ಬಳಿಗೆ ಹೋಗು ಅಂದನು. ಇಸ್ರಾಯೇ ಲಿನ ಅರಸನು ಅವನಿಗೆ--ಇಲ್ಲ, ಕರ್ತನು ಈ ಮೂರು ಮಂದಿ ಅರಸರುಗಳನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕೆ ಒಟ್ಟಾಗಿ ಕರೆದಿದ್ದಾನಲ್ಲಾ ಅಂದನು.

2 ದಿನವೃತ್ತಾಂತ 18:14

ಅವನು ಅರಸನ ಬಳಿಗೆ ಬಂದಾಗ ಅರಸನು ಅವನಿಗೆ--ವಿಾಕಾಯೆಹುವೇ, ನಾವು ರಾಮೋತ್‌ ಗಿಲ್ಯಾದಿಗೆ ಯುದ್ಧಕ್ಕೆ ಹೋಗಲೋ ಇಲ್ಲವೆ ನಾವು ಹೋಗುವದು ಬೇಡವೋ? ಅಂದನು. ಆಗ ಅವನು--ಹೋಗಿ ಜಯಹೊಂದಿರಿ, ಅವರು ನಿಮ್ಮ ಕೈಯಲ್ಲಿ ಒಪ್ಪಿಸಲ್ಪಡುವರು ಅಂದನು.

2 ದಿನವೃತ್ತಾಂತ 18:20

ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮ ಹೊರಟು ಬಂದು ಕರ್ತನ ಮುಂದೆ ನಿಂತು -- ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು.

ಯೆರೆಮಿಯ 8:10

ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.

ಯೆರೆಮಿಯ 28:1

ಅರಸನಾದ ಯೆಕೊನ್ಯನೂ ರಾಣಿಯೂ ಕಂಚುಕಿಗಳೂ ಯೆಹೂದದ ಯೆರೂಸ ಲೇಮಿನ ಪ್ರಧಾನರೂ ಬಡಿಗೆಯವರೂ ಕಮ್ಮಾರರೂ ಯೆರೂಸಲೇಮನ್ನು ಬಿಟ್ಟುಹೋದ ಮೇಲೆ

ಯೆರೆಮಿಯ 38:14

ಅವರು ಕಳುಹಿಸಿ ಯೆರೆವಿಾಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ ಮನೆಗೆ ಕರಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.

ಯೆರೆಮಿಯ 42:2

ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಗರ್ವಿಷ್ಠ ಮನುಷ್ಯ ರೆಲ್ಲರೂ ಮಾತನಾಡಿ ಯೆರೆವಿಾಯನಿಗೆ ಹೇಳಿದ್ದೇ ನಂದರೆ-ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾ ಗಿರುವದಕ್ಕೆ ಐಗುಪ್ತಕ್ಕೆ ಹೋಗಬಾರದೆಂದು ಹೇಳುವದಕ್ಕೆ ನಮ್ಮ ದೇವರಾದ ಕರ್ತನು ನಿನ್ನನ್ನು ಕಳುಹಿಸಲಿಲ್ಲ.

ಯೆಹೆಜ್ಕೇಲ 13:3

ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುತ್ತಿರುವ ಓ ಮೂರ್ಖ ಪ್ರವಾದಿಗಳೇ, ನಿಮಗೆ ಅಯ್ಯೋ!

ಯೆಹೆಜ್ಕೇಲ 13:22

ನಾನು ಯಾವನನ್ನು ದುಃಖಪಡಿಸಲಿಲ್ಲವೋ ಆ ನೀತಿವಂತನ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿ ದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.

ಮೀಕ 2:11

ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.

ಮೀಕ 3:11

ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.

2 ತಿಮೋಥೆಯ 4:3

ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.

ಪ್ರಕಟನೆ 19:20

ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.

Interlinear

Choose Theme