ಓ ನಮ್ಮ ದೇವರೇ, ನೀನು ಅವರಿಗೆ ನ್ಯಾಯತೀರಿಸುವದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾಗುಂಪನ್ನು ಎದು ರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯಲಿಲ್ಲ. ಆದರೆ ನಮ್ಮ ಕಣ್ಣುಗಳು ನಿನ್ನ ಮೇಲೆ ಅವೆ ಅಂದರು.
Cross references
ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.
ಆದದರಿಂದ ನಾನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ. ನೀನೇ ನನ್ನ ಮೇಲೆ ಯುದ್ಧಮಾಡುವದರಿಂದ ನನಗೆ ಕೆಟ್ಟದ್ದನ್ನು ಮಾಡುತ್ತೀ. ನ್ಯಾಯಾಧಿಪತಿಯಾದ ಕರ್ತನು ಈಹೊತ್ತು ಇಸ್ರಾ ಯೇಲ್ ಮಕ್ಕಳಿಗೂ ಅಮ್ಮೋನನ ಮಕ್ಕಳಿಗೂ ಮಧ್ಯ ದಲ್ಲಿ ನ್ಯಾಯತೀರಿಸಲಿ.
ತನ್ನ ಕುಮಾರರು ತಮ್ಮ ಭ್ರಷ್ಟತ ನಕ್ಕೆ ಈಡಾದಾಗ ಅವರನ್ನು ಹತೋಟಿಗೆ ತರಲಿಲ್ಲ. ಆದದರಿಂದ ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯ ತೀರಿಸುವೆನು ಎಂದು ಹೇಳಿದ್ದೇನೆ.
ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು.
ಆಗ ಅವಳು--ರಕ್ತ ವಿಚಾರಕನು ಇನ್ನು ಸಂಹರಿಸದ ಹಾಗೆ ಅರಸನಾದ ನೀನು ನಿನ್ನ ದೇವರಾದ ಕರ್ತನನ್ನು ಜ್ಞಾಪಕಮಾಡು; ಅವರು ನನ್ನ ಮಗನನ್ನು ನಾಶಮಾಡ ಬಾರದು ಅಂದಳು. ಅದಕ್ಕವನು--ಕರ್ತನ ಜೀವ ದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲದ ಮೇಲೆ ಬೀಳುವದಿಲ್ಲ ಅಂದನು.
ಆದರೆ ನಿನ್ನ ಸೇವಕನಾದ ಸೊಲೊಮೋನನನ್ನು ಅವನು ಕರೆಯಲಿಲ್ಲ. ಆದದರಿಂದ ಅರಸನಾದ ನನ್ನ ಒಡೆಯನೇ, ನಿನ್ನ ತರುವಾಯ ನನ್ನ ಒಡೆಯನಾದ ಅರಸನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನಾ ರೆಂದು ನೀನು ಹೇಳುವ ಹಾಗೆ ಸಮಸ್ತ ಇಸ್ರಾಯೇಲ್ಯರ ಕಣ್ಣುಗಳು ನಿನ್ನ ಮೇಲೆ ಇರುತ್ತವೆ.
ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ ಇಗೋ, ಕುದುರೆಗಳೂ ರಥಗಳುಳ್ಳ ಸೈನ್ಯವೂ ಪಟ್ಟಣವನ್ನು ಸುತ್ತಿಕೊಂಡಿತು. ಆಗ ಆ ಸೇವಕನು ಅವನಿಗೆ--ಅಯ್ಯೋ, ನನ್ನ ಯಜಮಾನನೇ, ನಾವು ಏನು ಮಾಡು ವದು ಅಂದನು.
ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.
ಕರ್ತನು ಜನಗಳಿಗೆ ನ್ಯಾಯ ತೀರಿಸುವನು. ಓ ಕರ್ತನೇ, ನನ್ನಲ್ಲಿರುವ ನನ್ನ ನೀತಿಯ ಪ್ರಕಾರವೂ ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸು.
ಓ ಕರ್ತನೇ, ಏಳು; ಮನುಷ್ಯನು ಬಲಗೊಳ್ಳದೆ ಇರಲಿ; ನಿನ್ನ ಸಮ್ಮುಖದಲ್ಲಿ ಜನಾಂಗಗಳಿಗೆ ನ್ಯಾಯ ತೀರ್ವಿಕೆ ಆಗಲಿ.ಓ ಕರ್ತನೇ, ಅವರಿಗೆ ಭಯವನ್ನು ಹುಟ್ಟಿಸು; ಆಗ ಜನಾಂಗಗಳು ತಾವು ಮನುಷ್ಯರೇ ಎಂದು ತಿಳುಕೊಳ್ಳುವರು. ಸೆಲಾ.
ನನ್ನ ಕಣ್ಣುಗಳು ಯಾವಾಗಲೂ ಕರ್ತನ ಕಡೆಗೆ ಅವೆ; ಆತನೇ ನನ್ನ ಪಾದಗಳನ್ನು ಬಲೆಯಿಂದ ಹೊರಗೆ ಬರಮಾಡುವನು.
ಓ ದೇವರೇ, ನನಗೆ ನ್ಯಾಯತೀರಿಸು. ಭಕ್ತಿ ಇಲ್ಲದ ಜನಾಂಗದ ಸಂಗಡ ನನ್ನ ನ್ಯಾಯವನ್ನು ವಾದಿಸು; ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸು.
ಭೂಮಿಯ ನ್ಯಾಯಾಧಿಪತಿಯೇ, ನೀನು ಎದ್ದೇಳು; ಗರ್ವಿಷ್ಠರಿಗೆ ಪ್ರತೀಕಾರವನ್ನು ಕೊಡು.
ನಾನು ಕಣ್ಣೆತ್ತಿ ಬೆಟ್ಟಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವದು?
ಪರಲೋಕದಲ್ಲಿ ವಾಸವಾಗಿರುವಾತನೇ, ನಿನ್ನ ಕಡೆಗೆ ನನ್ನ ಕಣ್ಣುಗಳನ್ನು ಎತ್ತುತ್ತೇನೆ.
ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನೂ ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರವೇ, ನಮ್ಮ ದೇವರಾದ ಕರ್ತನು ನಮ್ಮನ್ನು ಕರುಣಿಸುವ ವರೆಗೆ ಆತನನ್ನೇ ನಿರೀಕ್ಷಿಸುತ್ತವೆ.
ಕರ್ತನಾದ ಓ ದೇವರೇ, ನನ್ನ ಕಣ್ಣುಗಳು ನಿನ್ನ ಕಡೆಗೆ ಅವೆ; ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ; ನನ್ನ ಪ್ರಾಣವನ್ನು ದಿಕ್ಕಿಲ್ಲ ದಂತೆ ಬಿಡಬೇಡ.
ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.
ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಅವನು ಸೋಲುವದಿಲ್ಲ ಇಲ್ಲವೇ ಮನ ಗುಂದುವದಿಲ್ಲ; ದ್ವೀಪಗಳು ಅವನ ನ್ಯಾಯಪ್ರಮಾ ಣಕ್ಕೆ ಕಾದಿರುವವು.
ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು.
ಆಗ ನಾನು ಹೇಳಿದ್ದು--ನಿನ್ನ ಕಣ್ಣುಗಳ ಎದುರಿನಿಂದ ಹೊರಗೆ ಹಾಕಲ್ಪಟ್ಟಿದ್ದೇನೆ; ಆದಾಗ್ಯೂ ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ತಿರುಗಿ ನೋಡುವೆನು.
ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು.
ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;