ಅವರು ಹಾಡುವದಕ್ಕೂ ಸ್ತುತಿಸುವದಕ್ಕೂ ಆರಂಭಿಸಿದಾಗಲೇ ಕರ್ತನು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯಾರ್ ಪರ್ವತಗಳ ಮಕ್ಕಳಿಗೆ ವಿರೋಧವಾಗಿ ಹೊಂಚಿಕೊಳ್ಳುವವರನ್ನು ಇಟ್ಟಿದ್ದ ರಿಂದ ಅವರು ಹೊಡೆಯಲ್ಪಟ್ಟಿದ್ದರು.
Cross references
ಏಳನೇ ಸಾರಿ ಯಾಜಕರು ತುತೂರಿಗಳನ್ನು ಊದುವಾಗ ಆದದ್ದೇನಂದರೆ, ಯೆಹೋಶುವನು ಜನರಿಗೆ--ಆರ್ಭಟಿಸಿರಿ; ಕರ್ತನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ ಅಂದನು.
ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು.
ಬೆನ್ಯಾವಿಾ ನನ ದೇಶದ ಗಿಬೆಯದಲ್ಲಿದ್ದ ಸೌಲನ ಕಾವಲಿನವರು ನೋಡಿದಾಗ ಇಗೋ, ಆ ಗುಂಪಿನವರು ಕಡಿಮೆ ಯಾಗುತ್ತಾ ಒಬ್ಬರನ್ನೊಬ್ಬರು ಸಂಹರಿಸುತ್ತಾ ಇದ್ದರು.
ಆಗ ಸೌಲನೂ ಅವನ ಸಂಗಡ ಇದ್ದ ಜನರೆಲ್ಲರೂ ಕೂಡಿಕೊಂಡು ಯುದ್ಧಕ್ಕೆ ಬಂದಾಗ ಇಗೋ, ಪ್ರತಿಯೊಬ್ಬನು ತನ್ನ ಜೊತೆಗಾರನನ್ನು ಕತ್ತಿ ಯಿಂದ ಕೊಂದುಬಿಟ್ಟದ್ದರ ಪರಿಣಾಮವಾಗಿ ಅಲ್ಲಿ ಬಹು ದೊಡ್ಡ ಸೋಲು ಉಂಟಾಯಿತು.
ಸ್ತುತಿಗೆ ಯೋಗ್ಯನಾದ ಕರ್ತ ನನ್ನು ನಾನು ಕೂಗುತ್ತೇನೆ; ಹೀಗೆ ನಾನು ನನ್ನ ಶತ್ರು ಗಳೊಳಗಿಂದ ರಕ್ಷಿಸಲ್ಪಡುತ್ತೇನೆ.
ಆಗ ಎಲೀಷನುಕರ್ತನೇ, ನೀನು ದಯಮಾಡಿ ಅವನು ನೋಡುವ ಹಾಗೆ ಅವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಿ ದನು. ಕರ್ತನು ಆ ಯೌವನಸ್ಥನ ಕಣ್ಣುಗಳನ್ನು ತೆರೆ ದಾಗ ಇಗೋ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ಕುದುರೆಗಳೂ ರಥಗಳೂ ತುಂಬಿರುವದನ್ನು ಅವನು ನೋಡಿದನು.
ತುತೂರಿ ಊದುವವರೂ ಸಂಗೀತಗಾರರೂ ಕರ್ತನನ್ನು ಕೊಂಡಾ ಡುತ್ತಾ ಹೊಗಳುತ್ತಾ ಏಕವಾಗಿ ಒಂದೇ ಶಬ್ದ ಮಾಡಿ ದಾಗ ತುತೂರಿ ತಾಳ ಮೊದಲಾದ ಗೀತ ವಾದ್ಯಗಳಿಂದ ತಮ್ಮ ಶಬ್ದವನ್ನೆತ್ತಿ--ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇರುವದೆಂದೂ ಕರ್ತನನ್ನು ಕೀರ್ತಿಸುವಾಗ ಕರ್ತನ ಆಲಯವು ಮೇಘದಿಂದ ತುಂಬಲ್ಪಟ್ಟಿತು.ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
ಆದರೆ ಯಾರೊಬ್ಬಾಮನು ಅಡಗಿಕೊಂಡವರನ್ನು ಸುತ್ತಲೂ ಅವರ ಹಿಂದೆಯೂ ಬರಮಾಡಿದನು. ಆದದರಿಂದ ಅವರು ಯೆಹೂದ ದವರ ಮುಂದೆಯೂ ಅಡಗಿಕೊಂಡವರು ಅವರ ಹಿಂದೆಯೂ ಇದ್ದರು.
ಇದಲ್ಲದೆ ಯೆಹೂದದ ಮನುಷ್ಯರು ಆರ್ಭಟಿಸಿದರು; ಯೆಹೂದದ ಮನುಷ್ಯರು ಆರ್ಭಟಿ ಸಿದಾಗ ಏನಾಯಿತಂದರೆ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮ ನನ್ನೂ ಸಮಸ್ತ ಇಸ್ರಾಯೇಲನ್ನೂ ಹೊಡೆದನು.
ಈಗ ಇಗೋ, ಅಮ್ಮೋನ್ ಮೋವಾಬ್, ಸೇಯಾರ್ ಬೆಟ್ಟದ ಮಕ್ಕಳನ್ನು ನೋಡು; ಇಸ್ರಾಯೇಲ್ಯರು ಐಗುಪ್ತದೇಶ ದೊಳಗಿಂದ ಹೊರಟು ಬರುವಾಗ ಅವರ ಕಡೆಗೆ ಹೋಗಲು ನೀನು ಇವರಿಗೆ ಅಪ್ಪಣೆಕೊಡದೆ ಇದ್ದದ ರಿಂದ ಇವರು ತೊಲಗಿ ಅವರನ್ನು ನಾಶಮಾಡದೆ ಹೋದರು.
ಮರಣದ ದುಃಖಗಳು ನನ್ನನ್ನು ಆವರಿಸಿಕೊಂಡವು, ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು.
ಅವರು ಗಾಳಿಯ ಮುಂದಿನ ಹೊಟ್ಟಿನ ಹಾಗೆ ಆಗಲಿ; ಕರ್ತನ ದೂತನು ಅವರನ್ನು ಹಿಂದಟ್ಟಲಿ, ಸೆಲಾ.
ಇದಲ್ಲದೆ ನಾನು ಐಗುಪ್ತಕ್ಕೆ ವಿರೋಧವಾಗಿ ಐಗುಪ್ತ ವನ್ನು ಎಬ್ಬಿಸುವೆನು; ಸಹೋದರನಿಗೆ ವಿರೋದವಾಗಿ ಸಹೋದರನೂ ನೆರೆಯವನಿಗೆ ವಿರೋದವಾಗಿ ನೆರೆ ಯವನೂ ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೋರಾಡುವವು.
ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಕತ್ತಿಯನ್ನು ಕರೆಯುವೆ ನೆಂದೂ ದೇವರಾದ ಕರ್ತನು ಹೇಳುತ್ತಾನೆ; ಪ್ರತಿ ಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರೋಧವಾಗಿರುವದು.