ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು ಅಹಾಬನ ಮನೆಯ ವ್ಯಭಿಚಾರಿ ಗಳ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ವ್ಯಭಿಚಾರ ಮಾಡಲು ಪ್ರೇರೇಪಿಸಿ ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆ ಯವರಾದ ನಿನ್ನ ಸಹೋದರರನ್ನು ಕೊಂದುಹಾಕಿ ದ್ದರಿಂದ
Cross references
ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ.
ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು.
ಆ ದೇಶ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಬಾರದು. ಅವರು ಅನ್ಯ ದೇವರುಗಳನ್ನು ಆರಾಧಿಸಿ, ಅವುಗಳಿಗೆ ಯಜ್ಞಗಳನ್ನು ಮಾಡುವಾಗ ಒಬ್ಬನು ನಿನ್ನನ್ನು ಕರೆದಾನು; ನೀನು ಅವನ ಬಲಿಯನ್ನು ತಿನ್ನ ಬೇಕಾದೀತು.
ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.
ಈ ಪ್ರಕಾರ ಅಬೀಮೆಲೆಕನು ತನ್ನ ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿದ್ದರಿಂದ ತನ್ನ ತಂದೆಗೆ ಮಾಡಿದ ಕೇಡನ್ನು ದೇವರು ಅವನ ಮೇಲೆ ತಿರಿಗಿ ಬರಮಾಡಿದನು.ಇದಲ್ಲದೆ ಶೆಕೆಮಿನ ಮನುಷ್ಯರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದನು. ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂತು.
ಅರಸನು ಅವ ನಿಗೆ--ಅವನು ಹೇಳಿದ ಪ್ರಕಾರ ಮಾಡು; ನನ್ನಿಂದಲೂ ನನ್ನ ತಂದೆಯ ಮನೆಯಿಂದಲೂ ಯೋವಾಬನು ಚೆಲ್ಲಿದ ನಿರಪರಾಧ ರಕ್ತವನ್ನು ತೊಲಗಿಸುವ ಹಾಗೆ ಅವನ ಮೇಲೆ ಬಿದ್ದು ಅವನನ್ನು ಹೂಣಿಡು.
ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ.
ಆದರೆ ಒಮ್ರಿಯು ಕರ್ತನ ಸಮ್ಮುಖದಲ್ಲಿ ಕೆಟ್ಟತನ ಮಾಡಿ ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕೆಟ್ಟವನಾಗಿ ನಡೆದನು.
ಆದರೆ ಒಮ್ರಿಯ ಮಗನಾದ ಅಹಾಬನು ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕರ್ತನ ಮುಂದೆ ಹೆಚ್ಚು ಕೆಟ್ಟತನಮಾಡಿದನು.
ಅಹಾಬನು ತೋಪನ್ನು ಹಾಕಿಸಿದನು. ಹೀಗೆಯೆ ಅಹಾಬನು ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕ ವಾಗಿ ಕೆಟ್ಟತನಮಾಡಿದನು.ಅವನ ದಿವಸಗಳಲ್ಲಿ ಬೇತೇಲಿನವನಾದ ಹೀಯೇ ಲನು ಯೆರಿಕೋವನ್ನು ಕಟ್ಟಿಸಿದನು; ಕರ್ತನು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ ತನ್ನ ಚೊಚ್ಚಲ ಮಗನಾದ ಅಬೀರಾಮನೂ ಅದರ ಬಾಗಲುಗಳನ್ನು ಇಟ್ಟಾಗ ಅವನ ಚಿಕ್ಕಮಗನಾದ ಸೆಗೂಬನೂ ಸತ್ತರು.
ಯೋರಾಮನು ಯೇಹು ವನ್ನು ನೋಡಿದಾಗ--ಯೇಹುವೇ, ಸಮಾಧಾನವೋ ಅಂದನು. ಅದಕ್ಕವನು--ನಿನ್ನ ತಾಯಿಯಾದ ಈಜೆ ಬೆಲಳ ಜಾರತ್ವವೂ ಅವಳ ಮಾಟಗಳೂ ಅಧಿಕವಾಗಿರು ವಾಗ ಸಮಾಧಾನವೇನು ಅಂದನು.
ಯೆಹೋ ರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ ಇಸ್ರಾಯೇಲಿನ ಪ್ರಧಾನರಲ್ಲಿ ಕೆಲ ವರನ್ನೂ ಕತ್ತಿಯಿಂದ ಕೊಂದುಹಾಕಿದನು.
ಅಹಾಬನ ಮನೆಯವರು ನಡೆದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಅಹಾಬನ ಮಗಳು ಅವನಿಗೆ ಹೆಂಡತಿ ಯಾಗಿದ್ದಳು. ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು,
ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಸ್ಥಳಗಳನ್ನು ಮಾಡಿ ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ ಹಾಗೆಯೇ ಮಾಡಲು ಯೆಹೂ ದದವರನ್ನು ಬಲವಂತ ಮಾಡಿದನು.
ಅವರು ತಮ್ಮ ಪಿತೃಗಳ ದೇವರಾದ ಕರ್ತನ ಆಲಯವನ್ನು ಬಿಟ್ಟು ತೋಪುಗಳನ್ನೂ ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ರೌದ್ರ ಬಂತು.
ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು.
ಊರನ್ನು ರಕ್ತದಿಂದ ಕಟ್ಟಿ, ಪಟ್ಟಣವನ್ನು ಅನ್ಯಾಯ ದಿಂದ ಸ್ಥಾಪಿಸುವವನಿಗೆ ಅಯ್ಯೋ!
ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.