ಆಗ ಅವರು ಅರಸನ ಮಗನನ್ನು ಹೊರಕ್ಕೆ ಕರತಂದು ಅವನ ತಲೆಯ ಮೇಲೆ ಕಿರೀಟ ವನ್ನಿಟ್ಟು ಸಾಕ್ಷಿಯನ್ನು ಕೊಟ್ಟು ಅವನನ್ನು ಅರಸನನ್ನಾಗಿ ಮಾಡಿದರು. ಯೆಹೋಯಾದನೂ ಅವನ ಮಕ್ಕಳೂ ಅವನನ್ನು ಅಭಿಷೇಕಿಸಿ--ದೇವರು ಅರಸನನ್ನು ರಕ್ಷಿಸಲಿ ಅಂದರು.
Cross references
ನಾನು ನಿನಗೆ ಕೊಡುವ ಸಾಕ್ಷಿಯ ಹಲಗೆ ಗಳನ್ನು ಮಂಜೂಷದಲ್ಲಿ ಇಡಬೇಕು.
ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.
ಅವನು ತನ್ನ ರಾಜ್ಯದ ಸಿಂಹಾಸನದಲ್ಲಿ ಕೂತು ಕೊಳ್ಳುವಾಗ ಲೇವಿಯರಾದ ಯಾಜಕರ ಮುಂದಿರುವ ಪುಸ್ತಕದಿಂದ ತನಗೆ ಈ ನ್ಯಾಯಪ್ರಮಾಣದ ಪ್ರತಿ ಯನ್ನು ಬರೆಯಿಸಿಕೊಳ್ಳಬೇಕು.
ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
ಆಗ ಸಮುವೇಲನು ಸಮಸ್ತ ಜನರಿಗೆ--ಕರ್ತನು ಆದುಕೊಂಡವನನ್ನು ನೋಡಿರಿ; ಎಲ್ಲಾ ಜನರಲ್ಲಿ ಇವನಿಗೆ ಸಮಾನನಾದವನು ಯಾವನೂ ಇಲ್ಲವಲ್ಲಾ ಅಂದನು. ಜನರೆಲ್ಲರೂ ಆರ್ಭಟಿಸಿ--ಅರಸನಾದವನು ಬಾಳಲಿ ಅಂದರು.
ಆದದರಿಂದ ಇವನು ಬಿದ್ದ ತರುವಾಯ ಬದುಕಲಾರನೆಂದು ನಾನು ತಿಳಿದು ಅವನ ಮೇಲೆ ನಿಂತು ಅವನನ್ನು ಕೊಂದುಹಾಕಿದೆನು. ಅವನ ತಲೆಯ ಮೇಲಿದ್ದ ಕಿರೀಟವನ್ನೂ ಅವನ ಕೈಯಲ್ಲಿದ್ದ ಕಡಗ ವನ್ನೂ ತೆಗೆದುಕೊಂಡು ಅವುಗಳನ್ನು ನನ್ನ ಒಡೆಯನಿಗೆ ಇಲ್ಲಿ ತಂದೆನು ಅಂದನು.
ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು.
ಅರ್ಕೀಯನಾದ ಹೂಷೈ ಯೆಂಬ ದಾವೀದನ ಸ್ನೇಹಿತನು ಅಬ್ಷಾಲೋಮನ ಬಳಿಗೆ ಬಂದು--ಅರಸನು ಬಾಳಲಿ, ಅರಸನು ಬಾಳಲಿ ಅಂದನು.
ಈ ಹೊತ್ತು ಅವನು ಇಳಿದು ಹೋಗಿ ಎತ್ತು ಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಅನೇಕ ವಾಗಿ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಸೈನ್ಯಾಧಿಪತಿ ಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಕರೆದಿ ದ್ದಾನೆ. ಇಗೋ, ಅವರು ಅವನ ಮುಂದೆ ತಿಂದು, ಕುಡಿದು--ಅರಸನಾದ ಅದೋನೀಯನನ್ನು ದೇವರು ರಕ್ಷಿಸಲಿ ಎಂದು ಅನ್ನುತ್ತಾರೆ.
ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವ ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿ ಷೇಕಿಸಲಿ. ತುತೂರಿಯನ್ನು ಊದಿ--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅನ್ನಿರಿ.
ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅಂದರು.
ಆಗ ಅವನು ಅರಸನ ಮಗನನ್ನು ಹೊರಗೆ ಕರತಂದು ಕಿರೀಟವನ್ನು ಅವನ ತಲೆಯ ಮೇಲೆ ಇರಿಸಿ ಸಾಕ್ಷಿಯನ್ನು ಕೊಟ್ಟನು. ಅವರು ಅವನನ್ನು ಅರಸನಾಗ ಮಾಡಿ ಅಭಿಷೇಕಿಸಿ ಚಪ್ಪಾಳೆ ಹೊಡೆದುಅರಸನು ಬಾಳಲಿ ಅಂದರು.
ಆದರೆ ಅರಸನ ಮಗಳಾದ ಯೆಹೋಷಬತಳು ಅಹಜ್ಯನ ಮಗನಾದ ಯೆಹೋವಾಷನನ್ನು ತಕ್ಕೊಂಡು ಕೊಂದುಹಾಕಲ್ಪಟ್ಟ ಅರಸನ ಮಕ್ಕಳ ಮಧ್ಯದಿಂದ ಅವನನ್ನು ಕದ್ದುಕೊಂಡು ಅವನನ್ನೂ ಅವನ ದಾದಿ ಯನ್ನೂ ಮಲಗುವ ಕೋಣೆಯಲ್ಲಿ ಇರಿಸಿದಳು. ಹೀಗೆ ಅತಲ್ಯಳು ಅವನನ್ನು ಕೊಲ್ಲದ ಹಾಗೆ ಅರಸನಾದ ಯೆಹೋರಾಮನ ಕುಮಾರ್ತೆಯಾಗಿರುವ ಯಾಜ ಕನಾದ ಯೆಹೋಯಾದನ ಹೆಂಡತಿಯಾಗಿರುವ ಯೆಹೋಷಬತಳು ಬಚ್ಚಿಟ್ಟಳು.ಹೀಗೆಯೇ ಇವನು ಅವರ ಸಂಗಡ ದೇವರ ಆಲಯದಲ್ಲಿ ಆರು ವರುಷ ಬಚ್ಚಿಟ್ಟುಕೊಂಡಿದ್ದನು. ಆದರೆ ಅತಲ್ಯಳು ದೇಶದ ಮೇಲೆ ಆಳುತ್ತಿದ್ದಳು.
ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ.
ಒಳ್ಳೇತನದ ಆಶೀರ್ವಾದಗಳೊಂದಿಗೆ ಅವನನ್ನು ಎದುರುಗೊಂಡು ಅಪರಂಜಿಯ ಕಿರೀಟವನ್ನು ಅವನ ತಲೆಗೆ ಇಡುತ್ತೀ.
ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು
ನನ್ನ ಸೇವಕನಾದ ದಾವೀದನನ್ನು ಕಂಡು ಕೊಂಡಿದ್ದೇನೆ; ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.
ನಿನ್ನ ಸೇವಕನ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಹೊಲೆ ಮಾಡಿದ್ದೀ.
ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.
ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ನ್ಯಾಯ ಪ್ರಮಾಣವನ್ನು ಮುದ್ರಿಸು.
ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ.
ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು;
ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ತನಾಲ್ಕು ಆಸನಗಳಿದ್ದವು; ಆ ಆಸನಗಳ ಮೇಲೆ ಬಿಳೀ ವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತು ನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟ ಗಳಿದ್ದವು.
ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ--ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.
ಆತನ ಕಣ್ಣುಗಳು ಬೆಂಕಿಯ ಉರಿಯಂತಿದ್ದವು; ಆತನ ತಲೆಯ ಮೇಲೆ ಅನೇಕ ಕಿರೀಟಗಳು ಇದ್ದವು. ಬರೆಯಲ್ಪಟ್ಟ ಹೆಸರು ಆತನಿಗೆ ಇತ್ತು. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿದಿರಲಿಲ್ಲ.