ಇಗೋ, ಪ್ರವೇಶದ್ವಾರದ ತನ್ನ ಸ್ತಂಭದ ಬಳಿ ಯಲ್ಲಿ ಅರಸನು ನಿಂತಿದ್ದನು. ಪ್ರಧಾನರೂ ತುತೂರಿ ಹಿಡಿಯುವವರೂ ಅರಸನ ಬಳಿಯಲ್ಲಿ ಇದ್ದರು. ಇದಲ್ಲದೆ ದೇಶದ ಜನರೆಲ್ಲರು ಸಂತೋಷಪಟ್ಟು ತುತೂರಿಗಳನ್ನು ಊದಿದರು. ಹಾಗೆಯೇ ಹಾಡು ಗಾರರೂ ಗೀತವಾದ್ಯಗಳನ್ನು ಹಿಡಿದು ಸ್ತುತಿಸುವದಕ್ಕೆ ಬೋಧಿಸುವವರೂ ಇದ್ದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.
Cross references
ಕರ್ತನು ಮೋಶೆಗೆ ಹೇಳಿದ್ದೇನೆಂದರೆ
ಆಗ ಜನರು ಆಹಾರವನ್ನೂ ತಮ್ಮ ತುತೂರಿಗಳನ್ನೂ ತಮ್ಮ ಕೈಗಳಲ್ಲಿ ತೆಗೆದುಕೊಂಡರು; ಆದರೆ ಅವನು ಇಸ್ರಾಯೇಲ್ಯರನ್ನೆಲ್ಲಾ ಅವರವರ ಗುಡಾರಗಳಿಗೆ ಕಳುಹಿಸಿ ಆ ಮುನ್ನೂರು ಜನರನ್ನು ಇಟ್ಟುಕೊಂಡನು. ಮಿದ್ಯಾನ್ಯರ ದಂಡು ಅವನಿಗೆ ಕೆಳ ಭಾಗವಾದ ತಗ್ಗಿನಲ್ಲಿ ಇತ್ತು.
ನಾನೂ ನನ್ನ ಸಂಗಡ ಇರುವವ ರೆಲ್ಲರೂ ತುತೂರಿಯನ್ನು ಊದುವಾಗ ನೀವೆಲ್ಲರೂ ದಂಡಿನ ಸುತ್ತಲೂ ಎಲ್ಲಾ ಕಡೆಯಲ್ಲೂ ತುತೂರಿಗಳನ್ನು ಊದಿ ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಹೇಳಿರಿ ಅಂದನು.
ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅಂದರು.
ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು.
ಆಗ ಅವರು ತ್ವರೆ ಪಟ್ಟು ಪ್ರತಿಯೊಬ್ಬನು ತನ್ನ ವಸ್ತ್ರವನ್ನು ತೆಗೆದು ಮೆಟ್ಟಲುಗಳ ಮೇಲೆ ಹಾಸಿ ಇವನನ್ನು ಕುಳ್ಳಿರಿಸಿ ತುತೂರಿಗಳನ್ನು ಊದಿ -- ಯೇಹುವು ಅರಸನಾಗಿ ದ್ದಾನೆಂದು ಹೇಳಿದರು.
ಆಗ ಯೋರಾ ಮನು ಅಹಜ್ಯನಿಗೆ--ಅಹಜ್ಯನೇ, ದ್ರೋಹ ಎಂದು ಹೇಳಿ ತನ್ನ ಕೈ ತಿರುಗಿಸಿಕೊಂಡು ಓಡಿಹೋದನು.
ಅರಸನು ಸ್ತಂಭದ ಬಳಿಯಲ್ಲಿ ನಿಂತು ಕರ್ತನನ್ನು ಹಿಂಬಾಲಿಸು ವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆ ಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿ ರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವ ದಕ್ಕೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿ ದನು; ಜನರೆಲ್ಲರೂ ಒಡಂಬಡಿಕೆಗೆ ಒಪ್ಪಿದರು.
ಇದಲ್ಲದೆ ಅವರ ಬಳಿಯಲ್ಲಿದ್ದ ಇಸ್ಸಾಕಾರ್, ಜೆಬುಲೂನ್, ನಫ್ತಾಲಿಯರು ಮೊದಲುಗೊಂಡು ಎಲ್ಲರೂ ಕತ್ತೆ ಒಂಟೆ ಹೇಸರಕತ್ತೆ ಎತ್ತುಗಳ ಮೇಲೆ ರೊಟ್ಟಿಗಳನ್ನೂ ಆಹಾರವನ್ನೂ ಹಿಟ್ಟನ್ನೂ ಅಂಜೂರದ ಉಂಡೆಗಳನ್ನೂ ಒಣಗಿದ ದ್ರಾಕ್ಷೇ ಗೊನೆಗಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಎತ್ತುಗಳನ್ನೂ ಕುರಿ ಗಳನ್ನೂ ಬಹಳವಾಗಿ ತಂದರು; ಯಾಕಂದರೆ ಇಸ್ರಾ ಯೇಲಿನಲ್ಲಿ ಸಂತೋಷವಿತ್ತು.
ಇದಲ್ಲದೆ ದಾವೀದನು ವಿಶೇಷವಾದ ವೀಣೆ ಗಳನ್ನೂ ಕಿನ್ನರಿಗಳನ್ನೂ ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನು ಎತ್ತುವ ಹಾಗೆ ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವ ದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು.
ಯಾಜಕರಾದ ಶೆಬನ್ಯನೂ ಯೋಷಾಫಾಟನೂ ನೆತನೇಲ್ನೂ ಅಮಾಸೈಯು ಜೆಕರ್ಯನೂ ಬೆನಾಯನೂ ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು; ಒಬೇದೆ ದೋಮನೂ ಯೆಹೀಯನೂ ಮಂಜೂಷಕ್ಕೆ ದ್ವಾರ ಪಾಲಕರಾಗಿದ್ದರು.
ದಾವೀ ದನೂ ಮಂಜೂಷವನ್ನು ಹೊರುವ ಲೇವಿಯರೂ ಹಾಡುಗಾರರೂ ಹಾಡುಗಾರರ ಸಂಗಡ ಇರುವ ಸಂಗೀತದ ಯಜಮಾನನಾದ ಕೆನನ್ಯನೂ ನಯವಾದ ನಾರಿನ ಮೇಲಂಗಿಯನ್ನು ಧರಿಸಿಕೊಂಡಿದ್ದರು. ಇದ ಲ್ಲದೆ ದಾವೀದನ ಮೇಲೆ ನಾರಿನ ಎಫೋದು ಇತ್ತು.
ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು.
ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು.
ಅರಸನು ತನ್ನ ಸ್ಥಳದಲ್ಲಿ ನಿಂತುಕೊಂಡು ಕರ್ತನನ್ನು ಹಿಂಬಾಲಿಸುವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನೂ ತನ್ನ ಪೂರ್ಣಹೃದಯದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳ ಹಾಗೆ ಮಾಡುವದಕ್ಕೂ ಕರ್ತನ ಮುಂದೆ ಒಡಂಬಡಿಕೆ ಮಾಡಿದನು.
ಅಲ್ಲಿ ಅವರು ಭಯಭ್ರಾಂತ ರಾದರು; ಯಾಕಂದರೆ ದೇವರು ನೀತಿವಂತರ ಸಂತತಿ ಯಲ್ಲಿ ಇದ್ದಾನೆ.
ನೀತಿವಂತರು ಚೆನ್ನಾಗಿದ್ದರೆ ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ ಆರ್ಭಟವಿರು ತ್ತದೆ.
ನೀತಿವಂತರು ಅಧಿಕಾರದಲ್ಲಿ ದ್ದಾಗ ಜನರು ಹರ್ಷಿಸುತ್ತಾರೆ; ದುಷ್ಟನು ಆಳಿದರೆ ಜನರು ಶೋಕಿಸುತ್ತಾರೆ.
ಮನುಷ್ಯನು ಸಹ ತನ್ನ ಕಾಲವನ್ನು ತಿಳಿದಲ್ಲಿ ಬಾಧೆಯನ್ನುಂಟುಮಾಡುವ ಬಲೆಯಿಂದ ಹಿಡಿಯುವ ವಿಾನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗ ಳಂತೆಯೂ ಮನುಷ್ಯನ ಮಕ್ಕಳ ಮೇಲೆ ಕೇಡಿನ ಕಾಲವು ತಕ್ಷಣ ಬೀಳುವಾಗ ಹಿಡಿಯಲ್ಪಡುತ್ತಾರೆ.
ಪ್ರಭುವು ಆ ಬಾಗಲಿನ ದ್ವಾರಾಂಗಣ ಮಾರ್ಗವಾಗಿ ಹೊರಗಿ ನಿಂದ ಪ್ರವೇಶಿಸಿ ಬಾಗಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು, ಆಗ ಯಾಜಕರು ಅವನ ದಹನಬಲಿಯನ್ನು ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು; ಬಾಗ ಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಲು ಸಂಜೆಯವರೆಗೂ ಮುಚ್ಚಲ್ಪಡಬಾರದು;
ಆದದರಿಂದ ಓ ಮನುಷ್ಯನೇ, ತೀರ್ಪು ಮಾಡುವ ನೀನು ಯಾವನಾಗಿದ್ದರೂ ನೆವವಿಲ್ಲದವನಾಗಿದ್ದೀ; ಹೇಗೆಂದರೆ ಬೇರೊಬ್ಬನಿಗೆ ತೀರ್ಪು ಮಾಡುವ ನೀನು ಅಂಥವುಗಳನ್ನೇ ಮಾಡುವವ ನಾದ್ದರಿಂದ ನಿನ್ನಷ್ಟಕ್ಕೆ ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು.