ಹಾಗೆಯೇ ಅವರು ಅವಳ ಮೇಲೆ ಕೈ ಹಾಕಿದರು. ಅವಳು ಅರಸನ ಮನೆಯ ಬಳಿಯಲ್ಲಿ ಕುದುರೆ ಬಾಗಲಿನ ಪ್ರವೇಶದಲ್ಲಿ ಬಂದಾಗ ಅಲ್ಲಿ ಅವಳನ್ನು ಕೊಂದು ಹಾಕಿದರು.
Cross references
ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
ಆಗ ಅದೋನೀಬೆಜೆಕನು--ನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು; ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು. ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು; ಅವನು ಅಲ್ಲಿ ಸತ್ತನು.
ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು.
ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತನೆಂದು ಕಂಡಾಗ ಅವಳು ಎದ್ದು ಯೆಹೂದನ ಮನೆಯ ರಾಜ್ಯದ ಸಂತಾನವನ್ನೆಲ್ಲಾ ನಾಶಮಾಡಿದಳು.
ಯಾಜಕರು ಕುದುರೆ ಬಾಗಲು ಮೊದಲ್ಗೊಂಡು ತಮ್ಮ ತಮ್ಮ ಮನೆಗೆದುರಾಗಿರುವದನ್ನು ಭದ್ರಪಡಿ ಸಿದರು.
ಸುಳ್ಳಾಡುವವರನ್ನು ನೀನು ನಾಶಮಾಡುತ್ತೀ; ಕೊಲೆಗಾರರನ್ನು ಮತ್ತು ಮೋಸಗಾರರನ್ನು ಕರ್ತನು ಅಸಹ್ಯಿಸುತ್ತಾನೆ.
ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.
ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ.