Home Bibles 2 ದಿನವೃತ್ತಾಂತ 24:14 · ಕನ್ನಡ ಬೈಬಲ್
2 ದಿನವೃತ್ತಾಂತ 24:14 · ಕನ್ನಡ ಬೈಬಲ್

ಅವರು ಅದನ್ನು ಮುಗಿಸಿದ ಮೇಲೆ ಮಿಕ್ಕ ಹಣವನ್ನು ಅರ ಸನ ಮುಂದೆಯೂ ಯೆಹೋಯಾದನ ಮುಂದೆಯೂ ತಂದರು. ಅದರಿಂದ ಕರ್ತನ ಆಲಯಕ್ಕೋಸ್ಕರ ಬಂಗಾ ರದ ಬೆಳ್ಳಿಪಾತ್ರೆಗಳಾದ ಸೇವೆಯ ಪಾತ್ರೆಗಳೂ ಅರ್ಪಣೆಯ ಪಾತ್ರೆಗಳೂ ಸೌಟುಗಳೂ ಮಾಡಲ್ಪ ಟ್ಟವು. ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಕರ್ತನ ಆಲಯದಲ್ಲಿ ದಹನಬಲಿ ಗಳನ್ನು ಅರ್ಪಿಸಿದರು.

Cross references

ನಿರ್ಗಮಕಾಂಡ 29:38

ಇದಲ್ಲದೆ ಯಜ್ಞವೇದಿಯ ಮೇಲೆ ನೀನು ಅರ್ಪಿಸ ಬೇಕಾದದ್ದು ಇದೇ; ಒಂದು ವರುಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಡದೆ ಅರ್ಪಿಸಬೇಕು.

ಅಂಕೆಗಳ ಪುಸ್ತಕ 28:2

ನೀನು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ--ನನ್ನ ಸುವಾಸನೆಗೋಸ್ಕರ ಬೆಂಕಿ ಯಿಂದ ಮಾಡಿದ ಬಲಿಗಳಿಗೋಸ್ಕರವಾಗಿರುವ ನನ್ನ ರೊಟ್ಟಿಯ ಅರ್ಪಣೆಯನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವದಕ್ಕೆ ನೀವು ನೋಡಿ ಕೊಳ್ಳಿರಿ.

1 ಅರಸುಗಳು 7:50

ಅಪರಂಜಿಯ ತಂಬಿಗೆಗಳು, ಕತ್ತರಿಗಳು, ಸಲಿಕೆಗಳು, ಸೌಟುಗಳು, ಅಗ್ನಿ ಪಾತ್ರೆಗಳು, ಮಹಾಪರಿಶುದ್ಧ ಸ್ಥಳ ವಾದ ಒಳಗಿನ ಮನೆಯ ಕದಗಳಿಗೋಸ್ಕರವೂ ಮಂದಿ ರವೆಂಬ ಮನೆಯ ಕದಗಳಿಗೋಸ್ಕರವೂ ಬಂಗಾರದ ಕೀಲುಗಳನ್ನೆಲ್ಲಾ ಮಾಡಿಸಿದನು.ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.

2 ಅರಸುಗಳು 12:13

ಆದರೆ ಕರ್ತನ ಮನೆ ಗೋಸ್ಕರ ಬೆಳ್ಳಿಬಟ್ಟಲುಗಳನ್ನೂ ಕತ್ತರಿಗಳನ್ನೂ ಪಾತ್ರೆ ಗಳನ್ನೂ ತುತೂರಿಗಳನ್ನೂ ಬೆಳ್ಳಿ ಬಂಗಾರದ ಸಾಮಾನು ಗಳನ್ನೂ ಕರ್ತನ ಮನೆಗೆ ತಂದ

2 ಅರಸುಗಳು 25:12

ಆದರೆ ಕಾವಲಿನ ಅಧಿಪತಿಯು ದ್ರಾಕ್ಷೇತೋಟ ಮಾಡುವ ಹಾಗೆಯೂ ಬೇಸಾಯ ಮಾಡುವ ಹಾಗೆಯೂ ದೇಶದ ಬಡವರನ್ನು ಉಳಿಸಿಬಿಟ್ಟನು.

2 ಅರಸುಗಳು 25:15

ಕಾವಲುಗಾರರ ಅಧಿಪತಿಯು ಅಗ್ನಿಪಾತ್ರೆಗಳನ್ನೂ ತಟ್ಟೆಗಳನ್ನೂ ಬಂಗಾರ ದವುಗಳಾದ ಬಂಗಾರವನ್ನೂ ಬೆಳ್ಳಿಯವುಗಳಾದ ಬೆಳ್ಳಿ ಯನ್ನೂ ತಕ್ಕೊಂಡನು.

1 ದಿನವೃತ್ತಾಂತ 23:31

ಕಟ್ಟಳೆಯ ಪ್ರಕಾರವಾಗಿ ಸಬ್ಬತ್‌ ದಿವಸಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವದಕ್ಕೂಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.

2 ದಿನವೃತ್ತಾಂತ 2:3

ಇದ ಲ್ಲದೆ ಸೊಲೊಮೋನನು ತೂರಿನ ಅರಸನಾದ ಹೂರಾಮನಿಗೆ--ವಾಸವಾಗಿರುವ ಮನೆಯನ್ನು ತನಗೆ ಕಟ್ಟಿಸಲು ನೀನು ನನ್ನ ತಂದೆಯಾದ ದಾವೀದನಿಗೆ ದೇವದಾರು ಮರಗಳನ್ನು ಕಳುಹಿಸಿ ಅವನಿಗೋಸ್ಕರ ಹೇಗೆ ಮಾಡಿದಿಯೋ ಹಾಗೆಯೇ ನನಗೂ ಮಾಡು.

2 ದಿನವೃತ್ತಾಂತ 31:2

ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜ ಕರ ಲೇವಿಯರ ಸರತಿಗಳನ್ನು ನೇಮಿಸಿದನು. ದಹನ ಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಅರ್ಪಿ ಸುವದಕ್ಕೂ ಸೇವಿಸುವದಕ್ಕೂ ಕರ್ತನ ಗುಡಾರಗಳ ಬಾಗಲುಗಳಲ್ಲಿ ಸ್ತೋತ್ರ ಮಾಡುವದಕ್ಕೂ ಕೊಂಡಾ ಡುವದಕ್ಕೂ ಯಾಜಕರನ್ನೂ ಲೇವಿಯರನ್ನೂ ನೇಮಿಸಿ ದನು.

ಸಾಮೇತಿಗಳು 27:22

ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಒನಕೆಯಿಂದ ಕುಟ್ಟಿ ದರೂ ಅವನಿಂದ ಮೂರ್ಖತನವು ತೊಲಗುವದಿಲ್ಲ.

Interlinear

Choose Theme