ಅವನು ದೇವರಿಗೋಸ್ಕರವಾಗಿಯೂ ಆತನ ಆಲಯಕ್ಕೋಸ್ಕರ ವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೇದನ್ನು ಮಾಡಿ ದ್ದದ್ದರಿಂದ ಅವರು ಅವನನ್ನು ದಾವೀದನ ಪಟ್ಟಣ ದಲ್ಲಿ ಅರಸುಗಳ ಬಳಿಯಲ್ಲಿ ಹೂಣಿಟ್ಟರು.
Cross references
ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
ಹೀಗೆಯೇ ದಾವೀದನು ತನ್ನ ಪಿತೃಗಳ ಸಂಗಡ ಮಲಗಿಕೊಂಡನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು.
ಆಗ ಅರಸನಾದ ಯೆಹೋವಾಷನು ಯಾಜಕನಾದ ಯೆಹೋಯಾದಾ ವನನ್ನೂ ಯಾಜಕರನ್ನೂ ಕರೆದು ಅವರಿಗೆ--ನೀವು ಮನೆಯ ಒಡಕುಗಳನ್ನು ದುರಸ್ತುಮಾಡದೆ ಇರುವ ದೇನು? ಇನ್ನು ಮೇಲೆ ನೀವು ನಿಮ್ಮ ಪರಿಚಯದವ ರಿಂದ ಹಣವನ್ನು ತೆಗೆದುಕೊಳ್ಳದೆ ಮನೆಯ ಒಡಕು ಗಳಿಗೋಸ್ಕರ ಅದನ್ನು ಒಪ್ಪಿಸಿಕೊಡಿರಿ ಅಂದನು.
ಏಳನೇ ವರುಷದಲ್ಲಿ ಯೆಹೋಯಾದನು ತನ್ನನ್ನು ಬಲಪಡಿಸಿಕೊಂಡು ಶತಾಧಿಪತಿ ಗಳಾಗಿರುವ ಯೆರೋಹಾಮನ ಮಗನಾದ ಅಜರ್ಯ ನನ್ನೂ ಯೆಹೋಹಾನಾನನ ಮಗನಾದ ಇಷ್ಮಾಯೇಲ ನನ್ನೂ ಓಬೇದನ ಮಗನಾದ ಅಜರ್ಯನನ್ನೂ ಅದಾ ಯನ ಮಗನಾದ ಮಾಸೆಯನನ್ನೂ ಜಿಕ್ರಿಯ ಮಗನಾದ ಎಲೀಷಾಫಾಟನನ್ನೂ ಕರಕೊಂಡು ಅವರ ಸಂಗಡ ಒಡಂಬಡಿಕೆ ಮಾಡಿದನು.
ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.
ನನ್ನ ದೇವರೇ, ಇದಕ್ಕೋಸ್ಕರ ನನ್ನನ್ನು ಜ್ಞಾಪಕ ಮಾಡು; ನಾನು ದೇವರ ಆಲಯಕೋಸ್ಕರವೂ ಅದರ ವಿಚಾರಗಳಿಗೋಸ್ಕರವೂ ಮಾಡಿದ ನನ್ನ ಕೆಲಸಗ ಳನ್ನು ಅಳಿಸಿಬಿಡಬೇಡ.
ಅವನ ಶಿಷ್ಯರು ಅದನ್ನು ಕೇಳಿದಾಗ ಬಂದು ಅವನ ಶವವನ್ನು ತಕ್ಕೊಂಡು ಸಮಾಧಿಯಲ್ಲಿ ಇಟ್ಟರು.
ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ.
ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.