ಆದಾಗ್ಯೂ ಕರ್ತನು ತನ್ನ ಕಡೆಗೆ ಅವರನ್ನು ತಿರುಗಿಸುವದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು; ಇವರು ಅವರಿಗೆ ಸಾಕ್ಷಿಯಾಗಿ ಹೇಳಿದರು; ಆದರೆ ಅವರು ಕಿವಿಗೊಡದೆ ಹೋದರು.
Cross references
ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು.
ಆದರೆ ಅವರು ಕೇಳ ದೆಯೂ ತಮ್ಮ ದೇವರಾದ ಕರ್ತನಲ್ಲಿ ನಂಬಿಕೆ ಇಡ ದೆಯೂ ತಮ್ಮ ಪಿತೃಗಳ ಕುತ್ತಿಗೆಯ ಹಾಗೆ ತಮ್ಮ ಕುತ್ತಿಗೆಯನ್ನು
ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು.
ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.
ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ. ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ.
ಆತನು ನಮ್ಮ ದೇವರು; ನಾವು ಆತನು ಮೇಯಿಸುವ ಜನರೂ ಆತನ ಕೈ ಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಸ್ವರವನ್ನು ಕೇಳಿದರೆ
ನನ್ನ ಧ್ವನಿಗೆ ಕಿವಿಗೊಟ್ಟು ಕೇಳಿರಿ; ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ.
ನಿಮ್ಮಲ್ಲಿ ಯಾರು ಇವುಗಳಿಗೆ ಕಿವಿಕೊಡುವರು, ಯಾರು ಇನ್ನು ಮುಂದೆ ಆಲಿಸಿ ಕೇಳುವರು?
ನನ್ನ ಜನರೇ, ಕೇಳಿರಿ; ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ; ನ್ಯಾಯಪ್ರಮಾಣವು ನನ್ನಿಂದ ಹೊರಡುವದು ಮತ್ತು ನನ್ನ ನ್ಯಾಯವನ್ನು ಜನರಿಗೆ ಬೆಳಕನ್ನಾಗಿ ಮಾಡುವೆನು.
ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
ಒಂದು ವೇಳೆ ಅವರು ಕೇಳಿ ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗ ವನ್ನು ಬಿಟ್ಟು ತಿರುಗಿಕೊಂಡಾರು.
ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನೀವು ನನಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣದಂತೆ ನಡ ಕೊಳ್ಳದೆ
ಹೀಗೆ ಯೆರೆವಿಾಯನು ಈ ವಾಕ್ಯಗಳನ್ನು ಕರ್ತನ ಆಲಯದಲ್ಲಿ ಹೇಳುತ್ತಿರಲಾಗಿ ಯಾಜಕರೂ ಪ್ರವಾದಿಗಳೂ ಜನ ರೆಲ್ಲರೂ ಕೇಳುತ್ತಿದ್ದರು.
ಯೆರೆವಿಾಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಕರ್ತನು ಆಜ್ಞಾಪಿಸಿ ದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಹಿಡಿದು--ನೀನು ನಿಶ್ಚಯವಾಗಿ ಸಾಯಬೇಕು ಅಂದರು.
ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ.
ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.
ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ
ನಿಮಗೆ ಅಯ್ಯೋ! ಯಾಕಂದರೆ ನಿಮ್ಮ ತಂದೆಗಳು ಪ್ರವಾದಿಗಳನ್ನು ಕೊಂದರು. ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.
ಇದಲ್ಲದೆ ಆತನು ಜನರಿಗೆ ಈ ಸಾಮ್ಯವನ್ನು ಹೇಳುವದಕ್ಕೆ ಪ್ರಾರಂಭಿಸಿ--ಒಬ್ಬಾನೊಬ್ಬ ಮನುಷ್ಯನು ದ್ರಾಕ್ಷೇತೋಟವನ್ನು ನೆಟ್ಟು ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬಹುಕಾಲದ ವರೆಗೆ ಒಂದು ದೂರ ದೇಶಕ್ಕೆ ಹೊರಟುಹೋದನು.