Home Bibles 2 ದಿನವೃತ್ತಾಂತ 24:20 · ಕನ್ನಡ ಬೈಬಲ್
2 ದಿನವೃತ್ತಾಂತ 24:20 · ಕನ್ನಡ ಬೈಬಲ್

ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು.

Cross references

ಅಂಕೆಗಳ ಪುಸ್ತಕ 14:41

ಆಗ ಮೋಶೆಯು--ನೀವು ಈ ಪ್ರಕಾರ ಯಾಕೆ ಕರ್ತನ ಆಜ್ಞೆಯನ್ನು ವಿಾರುತ್ತೀರಿ? ಅದು ಸಫಲವಾಗು ವದಿಲ್ಲ.

ದ್ವಿತೀಯೋಪದೇಶಕಾಂಡ 29:25

ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು,

ನ್ಯಾಯಾಧಿಪತಿಗಳು 6:34

ಆದರೆ ಕರ್ತನ ಆತ್ಮವು ಗಿದ್ಯೋನನ ಮೇಲೆ ಬಂತು. ಅವನು ತುತೂರಿಯನ್ನು ಊದಿದಾಗ ಅಬೀಯೆಜೆರಿನವರು ಅವನ ಹಿಂದೆ ಕೂಡಿ ಬಂದರು.

1 ಸಮುವೇಲ 13:13

ಸಮು ವೇಲನು ಸೌಲನಿಗೆ--ನೀನು ಬುದ್ಧಿಹೀನವಾದ ಕೆಲಸ ಮಾಡಿದ್ದೀ; ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕರ್ತನು ಇಸ್ರಾಯೇಲ್ಯರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವದಕ್ಕೆ ಇದ್ದನು.

2 ಸಮುವೇಲ 12:9

ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.

1 ದಿನವೃತ್ತಾಂತ 12:18

ಆಗ ಆತ್ಮನು ಅದಿಪತಿಗಳ ಮುಖ್ಯಸ್ಥನಾದ ಅಮಸಾಯಿಯ ಮೇಲೆ ಬಂದನು; ಆಗ ಅವನು--ದಾವೀದನೇ, ನಾವು ನಿನ್ನವರು; ಇಷಯನ ಮಗನೇ, ನಾವು ನಿನ್ನ ಕಡೆಯವ ರಾಗಿದ್ದೇವೆ; ಸಮಾಧಾನ, ನಿನಗೆ ಸಮಾಧಾನ; ನಿನ್ನ ಸಹಾಯಕರಿಗೆ ಸಮಾಧಾನ; ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾನೆ ಅಂದನು. ಆಗ ದಾವೀದನು ಅವರನ್ನು ಅಂಗೀಕರಿಸಿ ಅವರನ್ನು ದಂಡಿನ ಅಧಿಪತಿ ಗಳಾಗಿ ಮಾಡಿದನು.

1 ದಿನವೃತ್ತಾಂತ 28:9

ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.

2 ದಿನವೃತ್ತಾಂತ 12:5

ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಬಿಟ್ಟುಬಿಟ್ಟೆನೆಂದು ಕರ್ತನು ಹೇಳು ತ್ತಾನೆ ಅಂದನು.

2 ದಿನವೃತ್ತಾಂತ 15:1

ಆಗ ದೇವರ ಆತ್ಮನು ಓದೇದನ ಮಗನಾದ ಅಜರ್ಯನ ಮೇಲೆ ಬಂದದ್ದರಿಂದ ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು ಅವನಿಗೆ--

2 ದಿನವೃತ್ತಾಂತ 20:14

ಆಗ ಸಭೆಯ ಮಧ್ಯದಲ್ಲಿ ಆಸಾಫನ ಮಕ್ಕಳಲ್ಲಿ ಒಬ್ಬನಾದಂಥ, ಲೇವಿಯನಾದಂಥ, ಮತ್ತನ್ಯನ ಮಗ ನಾದ ಯೆಗೀಯೇಲನ ಮಗನಾದ ಬೆನಾಯನ ಮಗ ನಾದ ಜೆಕರೀಯನ ಮಗನಾದ ಯಹಜೀಯೇಲನ ಮೇಲೆ ಕರ್ತನ ಆತ್ಮನು ಬಂದನು.

2 ದಿನವೃತ್ತಾಂತ 23:11

ಆಗ ಅವರು ಅರಸನ ಮಗನನ್ನು ಹೊರಕ್ಕೆ ಕರತಂದು ಅವನ ತಲೆಯ ಮೇಲೆ ಕಿರೀಟ ವನ್ನಿಟ್ಟು ಸಾಕ್ಷಿಯನ್ನು ಕೊಟ್ಟು ಅವನನ್ನು ಅರಸನನ್ನಾಗಿ ಮಾಡಿದರು. ಯೆಹೋಯಾದನೂ ಅವನ ಮಕ್ಕಳೂ ಅವನನ್ನು ಅಭಿಷೇಕಿಸಿ--ದೇವರು ಅರಸನನ್ನು ರಕ್ಷಿಸಲಿ ಅಂದರು.

2 ದಿನವೃತ್ತಾಂತ 25:16

ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.

ಯೆರೆಮಿಯ 2:19

ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.

ಯೆರೆಮಿಯ 4:18

ನಿನ್ನ ಮಾರ್ಗಗಳು ನಿನ್ನ ಕ್ರಿಯೆಗಳು ಇವುಗಳನ್ನು ನಿನಗೆ ಉಂಟುಮಾಡಿದವು, ಇದು ನಿನ್ನ ಕೆಟ್ಟತನವೇ; ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ತಾಕುತ್ತದ್ದಲ್ಲವೋ?

ಯೆರೆಮಿಯ 5:19

ಭೂಮಿಯೇ, ಕೇಳು, ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು, ನನ್ನ ನ್ಯಾಯಪ್ರಮಾಣವನ್ನು ತಿರಸ್ಕರಿಸಿ ದರು.

ಯೆರೆಮಿಯ 5:25

ಹೊಲಕ್ಕೆ ಹೊರಡಬೇಡ; ದಾರಿಯಲ್ಲಿ ನಡೆಯಬೇಡ; ಯಾಕಂದರೆ ಶತ್ರುವಿನ ಕತ್ತಿಯೂ ಅಂಜಿಕೆಯೂ ಸುತ್ತಲು ಆವೆ.

ಆಮೋಸ 5:10

ಅವರು ಬಾಗಿಲಲ್ಲಿ ಬೆದರಿಸುವ ನನ್ನು ಹಗೆಮಾಡುತ್ತಾರೆ, ಯಥಾರ್ಥವಾಗಿ ಮಾತನಾ ಡುವವನನ್ನು ಅವರು ಅಸಹ್ಯಿಸುತ್ತಾರೆ.

ಜೆಕರ್ಯ 7:11

ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.

ಮತ್ತಾಯ 23:35

ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.

Interlinear

Choose Theme