ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು.
Cross references
ಆಗ ಮೋಶೆಯು--ನೀವು ಈ ಪ್ರಕಾರ ಯಾಕೆ ಕರ್ತನ ಆಜ್ಞೆಯನ್ನು ವಿಾರುತ್ತೀರಿ? ಅದು ಸಫಲವಾಗು ವದಿಲ್ಲ.
ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು,
ಆದರೆ ಕರ್ತನ ಆತ್ಮವು ಗಿದ್ಯೋನನ ಮೇಲೆ ಬಂತು. ಅವನು ತುತೂರಿಯನ್ನು ಊದಿದಾಗ ಅಬೀಯೆಜೆರಿನವರು ಅವನ ಹಿಂದೆ ಕೂಡಿ ಬಂದರು.
ಸಮು ವೇಲನು ಸೌಲನಿಗೆ--ನೀನು ಬುದ್ಧಿಹೀನವಾದ ಕೆಲಸ ಮಾಡಿದ್ದೀ; ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕರ್ತನು ಇಸ್ರಾಯೇಲ್ಯರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವದಕ್ಕೆ ಇದ್ದನು.
ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.
ಆಗ ಆತ್ಮನು ಅದಿಪತಿಗಳ ಮುಖ್ಯಸ್ಥನಾದ ಅಮಸಾಯಿಯ ಮೇಲೆ ಬಂದನು; ಆಗ ಅವನು--ದಾವೀದನೇ, ನಾವು ನಿನ್ನವರು; ಇಷಯನ ಮಗನೇ, ನಾವು ನಿನ್ನ ಕಡೆಯವ ರಾಗಿದ್ದೇವೆ; ಸಮಾಧಾನ, ನಿನಗೆ ಸಮಾಧಾನ; ನಿನ್ನ ಸಹಾಯಕರಿಗೆ ಸಮಾಧಾನ; ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾನೆ ಅಂದನು. ಆಗ ದಾವೀದನು ಅವರನ್ನು ಅಂಗೀಕರಿಸಿ ಅವರನ್ನು ದಂಡಿನ ಅಧಿಪತಿ ಗಳಾಗಿ ಮಾಡಿದನು.
ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಬಿಟ್ಟುಬಿಟ್ಟೆನೆಂದು ಕರ್ತನು ಹೇಳು ತ್ತಾನೆ ಅಂದನು.
ಆಗ ದೇವರ ಆತ್ಮನು ಓದೇದನ ಮಗನಾದ ಅಜರ್ಯನ ಮೇಲೆ ಬಂದದ್ದರಿಂದ ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು ಅವನಿಗೆ--
ಆಗ ಸಭೆಯ ಮಧ್ಯದಲ್ಲಿ ಆಸಾಫನ ಮಕ್ಕಳಲ್ಲಿ ಒಬ್ಬನಾದಂಥ, ಲೇವಿಯನಾದಂಥ, ಮತ್ತನ್ಯನ ಮಗ ನಾದ ಯೆಗೀಯೇಲನ ಮಗನಾದ ಬೆನಾಯನ ಮಗ ನಾದ ಜೆಕರೀಯನ ಮಗನಾದ ಯಹಜೀಯೇಲನ ಮೇಲೆ ಕರ್ತನ ಆತ್ಮನು ಬಂದನು.
ಆಗ ಅವರು ಅರಸನ ಮಗನನ್ನು ಹೊರಕ್ಕೆ ಕರತಂದು ಅವನ ತಲೆಯ ಮೇಲೆ ಕಿರೀಟ ವನ್ನಿಟ್ಟು ಸಾಕ್ಷಿಯನ್ನು ಕೊಟ್ಟು ಅವನನ್ನು ಅರಸನನ್ನಾಗಿ ಮಾಡಿದರು. ಯೆಹೋಯಾದನೂ ಅವನ ಮಕ್ಕಳೂ ಅವನನ್ನು ಅಭಿಷೇಕಿಸಿ--ದೇವರು ಅರಸನನ್ನು ರಕ್ಷಿಸಲಿ ಅಂದರು.
ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.
ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.
ನಿನ್ನ ಮಾರ್ಗಗಳು ನಿನ್ನ ಕ್ರಿಯೆಗಳು ಇವುಗಳನ್ನು ನಿನಗೆ ಉಂಟುಮಾಡಿದವು, ಇದು ನಿನ್ನ ಕೆಟ್ಟತನವೇ; ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ತಾಕುತ್ತದ್ದಲ್ಲವೋ?
ಭೂಮಿಯೇ, ಕೇಳು, ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು, ನನ್ನ ನ್ಯಾಯಪ್ರಮಾಣವನ್ನು ತಿರಸ್ಕರಿಸಿ ದರು.
ಹೊಲಕ್ಕೆ ಹೊರಡಬೇಡ; ದಾರಿಯಲ್ಲಿ ನಡೆಯಬೇಡ; ಯಾಕಂದರೆ ಶತ್ರುವಿನ ಕತ್ತಿಯೂ ಅಂಜಿಕೆಯೂ ಸುತ್ತಲು ಆವೆ.
ಅವರು ಬಾಗಿಲಲ್ಲಿ ಬೆದರಿಸುವ ನನ್ನು ಹಗೆಮಾಡುತ್ತಾರೆ, ಯಥಾರ್ಥವಾಗಿ ಮಾತನಾ ಡುವವನನ್ನು ಅವರು ಅಸಹ್ಯಿಸುತ್ತಾರೆ.
ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.
ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.