ಆದಕಾರಣ ಕರ್ತನ ಕೋಪವು ಅಮಚ್ಯನ ಮೇಲೆ ಹೊತ್ತಿತು; ಆತನು ಅವನ ಬಳಿಗೆ ಪ್ರವಾದಿ ಯನ್ನು ಕಳುಹಿಸಿದನು. ಅವನು ಅವನಿಗೆ--ತಮ್ಮ ಜನ ರನ್ನು ನಿನ್ನ ಕೈಯಿಂದ ತಪ್ಪಿಸಲಾರದ ದೇವರುಗಳನ್ನು ನೀನು ಹುಡುಕುವದೇನು ಅಂದನು.
Cross references
ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ ಅವರ ಬಲಿಪೀಠಗಳನ್ನು ಕೆಡವಿ ಬಿಡಿರಿ ಎಂದು ಹೇಳಿದೆನು. ಆದರೆ ನೀವು ನನ್ನ ಮಾತಿಗೆ ವಿಧೇಯರಾಗಲಿಲ್ಲ; ಹೀಗೆ ಯಾಕೆ ಮಾಡಿ ದಿರಿ?
ಅವನು--ನಾನು ಮಾಡಿಕೊಂಡ ನನ್ನ ದೇವರು ಗಳನ್ನೂ ಯಾಜಕನನ್ನೂ ತಕ್ಕೊಂಡು ಹೋದಿರಿ; ಇನ್ನು ನನಗೆ ಏನದೆ? ನೀವು ನನ್ನನ್ನು--ನಿನಗೆ ಏನಾಯಿತೆಂದು ಕೇಳುವದೇನು? ಅಂದನು.
ಕರ್ತನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಅವನ ಬಳಿಗೆ ಬಂದು ಹೇಳಿದ್ದೇನಂದರೆ--ಒಂದು ಪಟ್ಟಣದಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು.
ಅದೇ ಕಾಲದಲ್ಲಿ ಪ್ರವಾದಿಯಾದ ಹನಾನಿಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ -- ನೀನು ನಿನ್ನ ದೇವರಾದ ಕರ್ತನ ಮೇಲೆ ಆತುಕೊಳ್ಳದೆ ಅರಾಮಿನ ಅರಸನ ಮೇಲೆ ಆತು ಕೊಂಡದ್ದರಿಂದ ಅರಾಮಿನ ಅರಸನ ಸೈನ್ಯವು ನಿನ್ನ ಕೈಯಿಂದ ತಪ್ಪಿಸಿಕೊಂಡಿತು.
ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು.
ಆಗ ಮಾರೇ ಷಾದವನಾಗಿರುವ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧ ವಾಗಿ ಪ್ರವಾದಿಸಿ--ನೀನು ಅಹಜ್ಯನ ಸಂಗಡ ಸೇರಿ ಕೊಂಡಿದ್ದರಿಂದ ಕರ್ತನು ನಿನ್ನ ಕ್ರಿಯೆಗಳನ್ನು ಹಾಳು ಮಾಡಿಬಿಟ್ಟನೆಂದು ಹೇಳಿದನು. ಹಡಗುಗಳು ತಾರ್ಷಿ ಷಿಗೆ ಹೋಗ ಕೂಡದ ಹಾಗೆ ಒಡೆಯಲ್ಪಟ್ಟವು.
ಅವರು ತಮ್ಮ ಪಿತೃಗಳ ದೇವರಾದ ಕರ್ತನ ಆಲಯವನ್ನು ಬಿಟ್ಟು ತೋಪುಗಳನ್ನೂ ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ರೌದ್ರ ಬಂತು.
ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು.
ಆಗ ದೇವರ ಮನುಷ್ಯ ನಾದ ಒಬ್ಬನು ಅವನ ಬಳಿಗೆ ಬಂದು ಅವನಿಗೆಅರಸನೇ, ಇಸ್ರಾಯೇಲಿನ ಸೈನ್ಯವು ನಿನ್ನ ಸಂಗಡ ಹೋಗದೆ ಇರಲಿ; ಯಾಕಂದರೆ ಕರ್ತನು ಇಸ್ರಾಯೇ ಲ್ಯರಾದ ಎಫ್ರಾಯಾಮನ ಸಮಸ್ತ ಮಕ್ಕಳ ಸಂಗಡ ಇರುವದಿಲ್ಲ.
ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡಿಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ ಅಲ್ಲಿ ಸೇಯಾ ರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು.
ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಕರ್ತನು ಆಕಾಶಗಳನ್ನು ನಿರ್ಮಿಸಿ ದನು.
ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ.
ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು.
ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
ಬೇಲ್(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.
ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ?
ಈ ದಿನ ಇರುವ ಹಾಗೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ಕೊಡುವದಕ್ಕೆ ನಿಮ್ಮ ತಂದೆಗಳಿಗೆ ಆಣೆ ಇಟ್ಟ ಪ್ರಮಾಣವನ್ನು ಈಡೇರಿಸುವೆನು ಎಂಬದೇ ಆಗ ನಾನು ಉತ್ತರಕೊಟ್ಟು--ಓ ಕರ್ತನೇ, ಹಾಗೆಯೇ ಆಗಲಿ ಅಂದೆನು.
ನಾನು ನಿಮ್ಮ ತಂದೆಗಳಿಗೆ ನನ್ನ ಮಾತನ್ನು ಕೇಳಿರೆಂದು ಖಂಡಿತವಾಗಿ ಹೇಳಿದೆನು. ಅವರನ್ನು ಐಗುಪ್ತದೇಶದೊಳಗಿಂದ ಮೇಲೆ ಬರ ಮಾಡಿದ ದಿನ ಮೊದಲುಗೊಂಡು ಇಂದಿನವರೆಗೂ ಬೆಳಿಗ್ಗೆ ಎದ್ದು ಖಂಡಿತವಾಗಿ ಹೇಳಿದೆನು,
ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವದೆಂದು ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾ ಗುವವೆಂದೂ ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆಂದು ಕರ್ತನು ಅನ್ನುತ್ತಾನೆ.
ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.
ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.