ಇಗೋನಾನು ಎದೋಮ್ಯರನ್ನು ಹೊಡೆದಿದ್ದೇನೆಂದು ಹೇಳಿ ಕೊಳ್ಳುತ್ತೀ; ಆದದರಿಂದ ನಿನ್ನ ಹೃದಯವು ನಿನ್ನನ್ನು ಅಹಂಕಾರದಿಂದ ಕೊಚ್ಕಿಕೊಳ್ಳುವಂತೆ ಮಾಡುತ್ತದೆ. ಈಗ ಮನೆಯಲ್ಲಿ ಕೂತಿರು. ನೀನೂ ನಿನ್ನ ಸಂಗಡ ಯೆಹೂದವೂ ಬಿದ್ದು ಹೋಗುವ ಹಾಗೆ ನಿನ್ನ ಕೇಡಿಗೆ ನೀನು ಕೈ ಹಾಕುವದೇನು ಅಂದನು.
Cross references
ನಿನ್ನ ಹೃದಯವು ಉಬ್ಬಿಕೊಳ್ಳದ ಹಾಗೆಯೂ ನಿನ್ನನ್ನು ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ,
ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು.
ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು.
ಯೋಷೀಯನು ಅವನ ಮೇಲೆ ಯುದ್ಧಕ್ಕೆ ಹೋದನು. ಆದರೆ ಇವನು ಯೋಷೀಯನ ಬಳಿಗೆ ಸೇವಕರನ್ನು ಕಳುಹಿಸಿ--ಯೆಹೂದದ ಅರಸನೇ, ನನಗೆ ನಿನಗೆ ಏನು? ಈ ಹೊತ್ತು ನಿನ್ನ ಮೇಲೆ ಅಲ್ಲ, ನಾನು ಯುದ್ಧಮಾಡುವ ಮನೆಯ ಮೇಲೆ ಬರುತ್ತೇನೆ; ತ್ವರೆಮಾಡು ಎಂದು ದೇವರು ನನಗೆ ಹೇಳಿದ್ದಾನೆ. ನನ್ನ ಸಂಗಡ ಇರುವ ದೇವರು ನಿನ್ನನ್ನು ನಾಶ ಮಾಡದ ಹಾಗೆ ನೀನು ಆತನ ಮುಂದೆ ಸುಮ್ಮನಿರು.
ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.
ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.
ಕಲಹವನ್ನು ತಡೆಯುವವನು ಮಾನಕ್ಕೆ ಯೋಗ್ಯನು; ಪ್ರತಿಯೊಬ್ಬ ಬುದ್ಧಿಹೀನನು ತಲೆಹಾಕು ತ್ತಾನೆ.
ಹಾದು ಹೋಗುತ್ತಾ ತನ್ನದಾಗ ದಿರುವ ವ್ಯಾಜ್ಯದಲ್ಲಿ ತಲೆಹಾಕುವವನು ಕಿವಿಹಿಡಿದು ನಾಯಿಯನ್ನು ತೆಗೆದುಕೊಂಡು ಹೋಗುವವನಂತೆ ಇದ್ದಾನೆ.
ಗರ್ವದ ಹೃದಯವುಳ್ಳವನು ಕಲಹ ವನ್ನೆಬ್ಬಿಸುವನು; ಕರ್ತನಲ್ಲಿ ಭರವಸವಿಡುವವನು ಪುಷ್ಟ ನಾಗುವನು.
ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.
ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;
ಆ ಸಮೂಹವನ್ನು ಅವನು ತೆಗೆದು ಹಾಕಿದ ಮೇಲೆ ಅವನ ಹೃದಯವು ಹೆಚ್ಚಳಪಡುವದು; ಹೌದು, ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ ಪ್ರಬಲವಾಗ ಲಾರನು.
ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ; ಆದರೆ ನೀತಿವಂತನು ತನ್ನ ವಿಶ್ವಾಸದಿಂದ ಬದುಕುವನು.
ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ?
ಹೀಗಿರಲು ಆತನ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.
ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.
ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.