ಆಗ ದೇವರ ಮನುಷ್ಯ ನಾದ ಒಬ್ಬನು ಅವನ ಬಳಿಗೆ ಬಂದು ಅವನಿಗೆಅರಸನೇ, ಇಸ್ರಾಯೇಲಿನ ಸೈನ್ಯವು ನಿನ್ನ ಸಂಗಡ ಹೋಗದೆ ಇರಲಿ; ಯಾಕಂದರೆ ಕರ್ತನು ಇಸ್ರಾಯೇ ಲ್ಯರಾದ ಎಫ್ರಾಯಾಮನ ಸಮಸ್ತ ಮಕ್ಕಳ ಸಂಗಡ ಇರುವದಿಲ್ಲ.
Cross references
ಕರ್ತನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಅವನ ಬಳಿಗೆ ಬಂದು ಹೇಳಿದ್ದೇನಂದರೆ--ಒಂದು ಪಟ್ಟಣದಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು.
ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.
ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ ಇಗೋ, ಕರ್ತನ ಮಾತಿನಂತೆ ದೇವರ ಮನುಷ್ಯನು ಯೆಹೂದದಿಂದ ಬೇತೇಲಿಗೆ ಬಂದನು.
ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು.
ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು.
ಎಫ್ರಾಯಾಮ್ಯರ ಕುಡುಕರ ಗರ್ವದ ಕಿರೀಟಕ್ಕೆ ಅಯ್ಯೋ! ದ್ರಾಕ್ಷಾರಸದಿಂದ ಅಮಲೇರಿದವರ ಕೊಬ್ಬುಳ್ಳ ತಗ್ಗಿನ ತಲೆಯ ಮೇಲಿ ರುವ ಅವರ ಅಹಂಕಾರದ ಕಿರೀಟವು ಬಾಡಿದ ಹೂವಾಗಿದೆ.
ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ.
ನಾನು ತೂರನ್ನು ನೊಡಿದಂತೆ ಎಫ್ರಾಯಾಮು ರಮ್ಯ ಸ್ಥಳದಲ್ಲಿ ನೆಡಲ್ಪಟ್ಟಿದೆ; ಆದರೆ ಎಫ್ರಾಯಾಮು ಕೊಲ್ಲುವವನಿಗೆ ತನ್ನ ಮಕ್ಕಳನ್ನು ಹೊರಗೆ ತರುವದು.
ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.
ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.