ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು.
Cross references
ಆಗ ಲೇವಿಯ ಮರಿಮಗನೂ ಕೆಹಾತನ ಮೊಮ್ಮಗನೂ ಇಚ್ಹಾರನ ಮಗನಾದ ಕೋರಹನೂ ರೂಬೇನ್ ಗೋತ್ರದವರಾದ ಎಲೀ ಯಾಬನ ಮಕ್ಕಳಾದ ದಾತಾನನೂ ಅಬೀರಾಮನೂ ಪೆಲೆತನ ಮಗನಾದ ಓನನೂ ಇವರು ಜನರನ್ನು ತಕ್ಕೊಂಡು
ನಾಳೆ ಅವುಗಳಲ್ಲಿ ಬೆಂಕಿಯನ್ನು ಹಾಕಿ ಅವುಗಳ ಮೇಲೆ ಧೂಪವನ್ನು ಕರ್ತನ ಮುಂದೆ ಹಾಕಿರಿ; ಆಗ ಕರ್ತನು ಯಾವನನ್ನು ಆದುಕೊಳ್ಳುವನೋ ಅವನೇ ಪರಿ ಶುದ್ಧನಾಗಿರುವನು; ಲೇವಿಯ ಮಕ್ಕಳೇ, ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ ಎಂದು ಹೇಳಿದನು.
ಆಗ ಅವರು ತಮ್ಮ ತಮ್ಮ ಧೂಪದ ಪಾತ್ರೆಗಳನ್ನು ತಕ್ಕೊಂಡು ಅವುಗಳ ಮೇಲೆ ಬೆಂಕಿಯನ್ನು ಹಾಕಿ ಅದರ ಮೇಲೆ ಧೂಪವನ್ನು ಹಾಕಿ ಸಭೆಯ ಗುಡಾರದ ಬಾಗಲಿನ ಮುಂದೆ ಮೋಶೆ ಆರೋನರ ಸಂಗಡ ನಿಂತರು.
ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.
ಆಗ ಏನಾಗುವ ದಂದರೆ, ನಾನು ಯಾವನನ್ನು ಆದುಕೊಳ್ಳುತ್ತೇನೋ ಆ ಮನುಷ್ಯನ ಕೋಲು ಚಿಗುರುವದು. ಹೀಗೆ ಇಸ್ರಾ ಯೇಲ್ ಮಕ್ಕಳು ನಿಮಗೆ ವಿರೋಧವಾಗಿ ಗುಣುಗುಟ್ಟು ವದನ್ನು ನಾನು ನಿಲ್ಲಿಸಿಬಿಡುವೆನು ಅಂದನು.
ನಿನ್ನ ಹೃದಯವು ಉಬ್ಬಿಕೊಳ್ಳದ ಹಾಗೆಯೂ ನಿನ್ನನ್ನು ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ,
ನನ್ನ ಬಲವೇ ಮತ್ತು ನನ್ನ ಕೈಯ ಸಾಮರ್ಥ್ಯವೇ ನನಗೆ ಈ ಆಸ್ತಿಯನ್ನು ಸಂಪಾದಿಸಿತೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೋ.
ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು.
ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.
ನೀನು ಎದೋಮ್ಯ ರನ್ನು ಹೊಡೆದೇ ಹೊಡೆದದ್ದರಿಂದ ನಿನ್ನ ಹೃದಯವು ನಿನ್ನನ್ನು ಹೆಚ್ಚಿಸುವಂತೆ ಮಾಡಿತು. ಹೆಚ್ಚಳಪಡು; ಮನೆಯಲ್ಲಿ ಕಾದಿರು; ನಿನ್ನ ಕೇಡಿಗಾಗಿ ನೀನು ಯಾಕೆ ಜಗಳವಾಡಬೇಕು? ನೀನೂ ನಿನ್ನ ಸಂಗಡ ಯೆಹೂ ದವೂ ಬಿದ್ದು ಹೋಗುವಿರಲ್ಲಾ ಅಂದನು. ಆದರೆ ಅಮಚ್ಯನು ಕೇಳದೆ ಹೋದನು.
ಕರ್ತನು ಅರಸನನ್ನು ಹೊಡೆದದ್ದರಿಂದ ಅವನು ತನ್ನ ಜೀವದಿಂದಿರು ವರೆಗೂ ಕುಷ್ಠರೋಗಿಯಾಗಿದ್ದು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗನಾದ ಯೋತಾಮನು ಮನೆ ಯಜಮಾನನಾಗಿದ್ದು ದೇಶದ ಜನರಿಗೆ ನ್ಯಾಯ ತೀರಿಸುತ್ತಿದ್ದನು.
ಅರಸನು ದಮಸ್ಕದಿಂದ ಬಂದ ಮೇಲೆ ಬಲಿಪೀಠವನ್ನು ನೋಡಿ ಬಲಿಪೀಠದ ಬಳಿಗೆ ಹೋಗಿ ಅದರ ಮೇಲೆ ಬಲಿ ಯನ್ನರ್ಪಿಸಿದನು.
ರೆಹಬ್ಬಾಮನು ರಾಜ್ಯವನ್ನು ಸ್ಥಿರಮಾಡಿ ತನ್ನನ್ನು ಬಲಪಡಿಸಿಕೊಂಡಾಗ ಏನಾಯಿ ತಂದರೆ, ಅವನೂ ಅವನ ಸಂಗಡ ಸಮಸ್ತ ಇಸ್ರಾ ಯೇಲ್ಯರೂ ಕರ್ತನ ನ್ಯಾಯಪ್ರಮಾಣವನ್ನು ಬಿಟ್ಟು ಬಿಟ್ಟರು.
ಇಗೋನಾನು ಎದೋಮ್ಯರನ್ನು ಹೊಡೆದಿದ್ದೇನೆಂದು ಹೇಳಿ ಕೊಳ್ಳುತ್ತೀ; ಆದದರಿಂದ ನಿನ್ನ ಹೃದಯವು ನಿನ್ನನ್ನು ಅಹಂಕಾರದಿಂದ ಕೊಚ್ಕಿಕೊಳ್ಳುವಂತೆ ಮಾಡುತ್ತದೆ. ಈಗ ಮನೆಯಲ್ಲಿ ಕೂತಿರು. ನೀನೂ ನಿನ್ನ ಸಂಗಡ ಯೆಹೂದವೂ ಬಿದ್ದು ಹೋಗುವ ಹಾಗೆ ನಿನ್ನ ಕೇಡಿಗೆ ನೀನು ಕೈ ಹಾಕುವದೇನು ಅಂದನು.
ಇವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು. ಆದರೆ ಕರ್ತನ ಮನೆಯಲ್ಲಿ ಪ್ರವೇಶಿಸಲಿಲ್ಲ. ಜನರು ಇನ್ನೂ ಕೆಟ್ಟದ್ದನ್ನು ಮಾಡುತ್ತಾ ಇದ್ದರು.
ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು.
ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
ಆ ಸಮೂಹವನ್ನು ಅವನು ತೆಗೆದು ಹಾಕಿದ ಮೇಲೆ ಅವನ ಹೃದಯವು ಹೆಚ್ಚಳಪಡುವದು; ಹೌದು, ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ ಪ್ರಬಲವಾಗ ಲಾರನು.
ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ; ಆದರೆ ನೀತಿವಂತನು ತನ್ನ ವಿಶ್ವಾಸದಿಂದ ಬದುಕುವನು.
ಸ್ವಇಷ್ಟ ವಿನಯದಿಂದಲೂ ದೇವದೂತರ ಆರಾಧನೆ ಯಿಂದಲೂ ತನ್ನ ಶಾರೀರಕ ಮನಸ್ಸಿನಿಂದ ವ್ಯರ್ಥವಾಗಿ ಉಬ್ಬಿಕೊಂಡು ತಾನು ನೋಡದಿರುವವುಗಳಲ್ಲಿ ಬಲ ವಂತವಾಗಿ ನುಗ್ಗುವ ಯಾವನೂ ನಿಮ್ಮ ಬಹುಮಾನ ವನ್ನು ಮೋಸಗೊಳಿಸದಿರಲಿ.