ಉಜ್ಜೀಯನೇ, ಕರ್ತ ನಿಗೆ ಧೂಪಸುಡುವದು ನಿನಗೆ ಸೇರಿದ್ದಲ್ಲ; ಧೂಪ ಸುಡುವದು ಪರಿಶುದ್ಧ ಮಾಡಲ್ಪಟ್ಟ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು; ನೀನು ಪರಿಶುದ್ಧ ಸ್ಥಾನದಿಂದ ಹೊರಟುಹೋಗು; ನೀನು ಅಪರಾಧ ಮಾಡಿದ್ದೀ. ದೇವರಾದ ಕರ್ತನಿಂದ ಇದು ನಿನಗೆ ಮಾನವಲ್ಲ ಅಂದರು.
Cross references
ಇದಲ್ಲದೆ ನನಗೆ ಯಾಜಕನ ಸೇವೆಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್ ಅಬೀಹೂ ಎಲಿಯೇಜರ್ ಈತಾಮಾರ್ ಎಂಬವರನ್ನೂ ಇಸ್ರಾಯೇಲ್ ಮಕ್ಕಳಿಂದ ನಿನ್ನ ಹತ್ತಿರ ಬರಮಾಡ ಬೇಕು.
ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು.
ಆಗ ಸುಟ್ಟು ಹೋದವರು ಅರ್ಪಿಸಿದ ಹಿತ್ತಾಳೆಯ ಧೂಪದಪಾತ್ರೆಗಳನ್ನು ಯಾಜಕನಾದ ಎಲಿಯಾಜರನು ತಕ್ಕೊಂಡು ಬಲಿಪೀಠವನ್ನು ಮುಚ್ಚುವದಕ್ಕಾಗಿ ಅಗಲ ವಾದ ತಗಡುಗಳನ್ನಾಗಿ ಮಾಡಿದನು.
ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು.
ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು.
ಇವರು ಗಿಲ್ಯಾದ್ ದೇಶದಲ್ಲಿ ರೂಬೇನನ ಮಕ್ಕಳ ಬಳಿಗೂ ಗಾದನ ಮಕ್ಕಳ ಬಳಿಗೂ ಮನಸ್ಸೆಯ ಅರ್ಧ ಗೋತ್ರದವರ ಬಳಿಗೂ ಬಂದು ಅವರ ಸಂಗಡ ಮಾತನಾಡಿ
ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
ಅದೇ ಕಾಲದಲ್ಲಿ ಪ್ರವಾದಿಯಾದ ಹನಾನಿಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ -- ನೀನು ನಿನ್ನ ದೇವರಾದ ಕರ್ತನ ಮೇಲೆ ಆತುಕೊಳ್ಳದೆ ಅರಾಮಿನ ಅರಸನ ಮೇಲೆ ಆತು ಕೊಂಡದ್ದರಿಂದ ಅರಾಮಿನ ಅರಸನ ಸೈನ್ಯವು ನಿನ್ನ ಕೈಯಿಂದ ತಪ್ಪಿಸಿಕೊಂಡಿತು.
ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು.
ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅಪರಾಧ ಮಾಡಿದಂಥ, ನೀವು ನೋಡುವ ಹಾಗೆ ನಾಶನಕ್ಕೆ ಒಪ್ಪಿಸಲ್ಪಟ್ಟಂಥ, ನಿಮ್ಮ ಪಿತೃಗಳ ಹಾಗೆಯೂ ನಿಮ್ಮ ಸಹೋದರರ ಹಾಗೆಯೂ ಇರಬೇಡಿರಿ.
ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.
ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.
ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
ಯಾಕಂದರೆ ಯೋಹಾನನು--ನೀನು ಅವಳನ್ನು ಇಟ್ಟುಕೊಂಡಿರುವದು ನಿನಗೆ ನ್ಯಾಯವಲ್ಲ ಎಂದು ಅವನಿಗೆ ಹೇಳಿದ್ದನು.
ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ?
ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರವು ನಾಶವಾಗ ಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ.
ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,
ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.
ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನ ನಂಬಿ ಕೆಯ ವಿಷಯದಲ್ಲಿ ನೀವು ಪಕ್ಷಪಾತಿಗಳಾಗಿರಬಾರದು.