ಆಗ ಉಜ್ಜೀಯನು ಕೋಪಿಸಿ ಕೊಂಡನು; ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಅವನು ಯಾಜಕರ ಮೇಲೆ ಕೋಪ ಮಾಡುವಾಗ ಕರ್ತನ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಎದ್ದಿತು.
Cross references
ಆಗ ಯಾಜಕನು ಅವನನ್ನು ನೋಡಬೇಕು; ಇಗೋ, ಆ ಬಾವು ಚರ್ಮದಲ್ಲಿ ಬೆಳ್ಳಗಿದ್ದು ಅದರ ಕೂದಲು ಬೆಳ್ಳಗಾಗಿ ಹೋಗಿದ್ದರೆ ಮತ್ತು ಆ ಬಾವಿನಲ್ಲಿ ಹಸಿಮಾಂಸವು ಇದ್ದರೆ
ಆ ಮೇಘವು ಗುಡಾರದ ಮೇಲಿನಿಂದ ತೊಲಗಿ ಹೋಯಿತು; ಆಗ ಇಗೋ, ಮಿರ್ಯಾಮಳು ಹಿಮದ ಹಾಗೆ ಕುಷ್ಠವುಳ್ಳವಳಾದಳು. ಆರೋನನು ಮಿರ್ಯಾಮಳ ಕಡೆಗೆ ನೋಡಿದಾಗ ಇಗೋ, ಅವಳು ಕುಷ್ಠರೋಗಿ ಯಾಗಿದ್ದಳು.
ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು.
ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.
ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.