ಆಗ ಅಶ್ಶೂರಿನ ಅರಸನಾದ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು ಅವನನ್ನು ಬಲಪಡಿಸದೆ ಬಾಧೆಪಡಿಸಿ ದನು.
Cross references
ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು.
ಆಗ ಅಶ್ಶೂರಿನ ಅರಸನು ದೇಶವೆಲ್ಲಾದರ ಮೇಲೆ ಬಂದು, ಸಮಾರ್ಯಕ್ಕೆ ಹೋಗಿ ಅದನ್ನು ಮೂರು ವರುಷಗಳ ವರೆಗೂ ಮುತ್ತಿಗೆ ಹಾಕಿದನು.
ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.
ಅದೇ ದಿನದಲ್ಲಿ ಕರ್ತನು ನದಿಯ ಆಚೆಗಿರುವ ಅಶ್ಯೂರದ ರಾಜನೆಂಬವನಿಂದ ಬಾಡಿಗೆ ಕ್ಷೌರದ ಕತ್ತಿ ಯಿಂದ (ಯೆಹೂದದ) ತಲೆಯನ್ನು ಕಾಲುಕೂದ ಲನ್ನು ಬೋಳಿಸುವನು ಗಡ್ಡವನ್ನು ತೆಗೆದುಬಿಡುವನು.
ಆದಕಾರಣ ಫರೋಹನ ಬಲವು ನಿಮಗೆ ನಾಚಿಕೆಯೂ ಐಗುಪ್ತದ ನೆರಳಿನ ಭರವಸದಿಂದ ನಿಮ ಗೆ ನಿಂದೆಯೂ ಉಂಟಾಗುವದು.
ಆದರೆ ನೀವು ಬೇಡವೇ ಬೇಡ, ನಾವು ಕುದುರೆಗಳ ಮೇಲೆ ಓಡುವೆವು ಅಂದುಕೊಂಡಿದ್ದರಿಂದ ನೀವು ಓಡೇ ಹೋಗುವಿರಿ, ಮತ್ತು--ನಾವು ವೇಗವಾಗಿ ಸವಾರಿ ಮಾಡುವೆವು ಅಂದುಕೊಂಡದ್ದರಿಂದ ಆ ವೇಗ ಗಳೇ ನಿಮ್ಮನ್ನು ಅಟ್ಟಿಬಿಡುವವು.
ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ.