ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು.
Cross references
ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ ಉನ್ನತ ಸ್ಥಳಗಳಿಗೆ ಕನಿಷ್ಠ ಯಾಜಕರನ್ನಾಗಿ ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ ಉನ್ನತ ಸ್ಥಳಗಳ ಯಾಜಕರಲ್ಲಿ ಒಬ್ಬ ನಾಗುವನು.ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು.
ಅದಕ್ಕೆ ಎಸ್ತೇರಳು--ವೈರಿಯೂ ಶತ್ರುವೂ ಯಾರಂದರೆ ಈ ಕೆಟ್ಟವನಾದ ಹಾಮಾನನೇ ಅಂದಳು. ಆಗ ಹಾಮಾನನು ಅರಸನ, ರಾಣಿಯ ಸಮ್ಮುಖದಲ್ಲಿ ಹೆದರಿ ಕೊಂಡನು.
ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.
ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.
ಇದು ಒಂದು ಶೋಧನೆ; ಕತ್ತಿಯು ತಿರಸ್ಕರಿಸಲ್ಪಟ್ಟಿದ್ದೇ; ಕೋಲು ಸಹ ತಿರಸ್ಕಾರವಾದರೆ ಗತಿಯೇನು? ಅದು ಇನ್ನು ಆಗದು ಎಂದು ದೇವರಾದ ಕರ್ತನು ಹೇಳುತ್ತಾನೆ.
ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.