ಇದಲ್ಲದೆ ದಹನಬಲಿ ಗಳೂ ಸಮಾಧಾನದ ಬಲಿಗಳ ಕೊಬ್ಬೂ ದಹನ ಬಲಿಗೆ ಬೇಕಾದ ಪಾನದ ಅರ್ಪಣೆಗಳೂ ಬಹಳ ವಾಗಿದ್ದವು. ಹೀಗೆಯೇ ಕರ್ತನ ಆಲಯದ ಸೇವೆಯು ಸಿದ್ಧವಾಯಿತು.ಆಗ ದೇವರು ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ ಜನರೆಲ್ಲರೂ ಸಂತೋಷಪಟ್ಟರು; ಯಾಕಂದರೆ ಈ ಕಾರ್ಯವು ಅಕಸ್ಮಾತ್ತಾಗಿ ಆಯಿತು.
Cross references
ಯಾಕೋಬನು ತನ್ನ ಸಂಗಡ ಮಾತನಾಡಿದ ಸ್ಥಳದಲ್ಲಿ ಸ್ತಂಭವನ್ನು ಅಂದರೆ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಪಾನಾರ್ಪಣೆಮಾಡಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು.
ನೀನು ಕರುಳುಗಳನ್ನೂ ಅವುಗಳ ಮೇಲೆ ಇರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲೆ ಬರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಮೇಲೆ ಇರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು.
ಎರಡು ಮೂತ್ರಜನಕಾಂಗ ಗಳನ್ನೂ ಪಕ್ಕೆಯ ಬದಿಗಳಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆದುಕೊಂಡು ಅರ್ಪಿಸುವ ಸಮರ್ಪಣೆಯನ್ನು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು.
ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
ಕರ್ತನಿಗೆ ಸುಗಂಧ ವಾಸನೆಯಾಗುವಂತೆ ಬೆಂಕಿಯಿಂದ ಮಾಡುವ ಆಹಾರ ಸಮರ್ಪಣೆಯು ಎಣ್ಣೇ ಮಿಶ್ರಿತವಾದ ನಯವಾದ ಹಿಟ್ಟಿನ ಹತ್ತರಲ್ಲಿ ಎರಡು ಪಾಲು ಇರಬೇಕು. ಪಾನ ಸಮರ್ಪಣೆಯು ಒಂದು ಹಿನ್ನಿನ ನಾಲ್ಕನೆಯ ಪಾಲು ದ್ರಾಕ್ಷಾರಸವಾಗಿರಬೇಕು.
ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡವೂ ಇಲ್ಲವೆ ಬಲಿಯ ಸಂಗಡವೂ ಒಂದು ಕುರಿಗೋಸ್ಕರ ಹಿನ್ನಿನ ನಾಲ್ಕನೇ ಭಾಗದ ದ್ರಾಕ್ಷಾರಸವನ್ನು ಅರ್ಪಿಸಬೇಕು.
ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ದಾವೀದನು ಬಿಟ್ಟವರು ಯಾರಂದರೆ--ಪ್ರತಿ ದಿವಸದ ಕಾರ್ಯದ ಪ್ರಕಾರ ಯಾವಾಗಲೂ ಮಂಜೂಷದ ಮುಂದೆ ಸೇವೆಮಾಡಲು ಆಸಾಫನನ್ನೂ ಅವನ ಸಹೋ ದರರನ್ನೂ;
ಮೋಶೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಯೆರೂ ಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆ ಗೋಸ್ಕರ ಯಾಜಕರನ್ನು ಅವರ ಸರತಿಯ ಪ್ರಕಾರವೂ ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.
ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.