ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜ ಕರ ಲೇವಿಯರ ಸರತಿಗಳನ್ನು ನೇಮಿಸಿದನು. ದಹನ ಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಅರ್ಪಿ ಸುವದಕ್ಕೂ ಸೇವಿಸುವದಕ್ಕೂ ಕರ್ತನ ಗುಡಾರಗಳ ಬಾಗಲುಗಳಲ್ಲಿ ಸ್ತೋತ್ರ ಮಾಡುವದಕ್ಕೂ ಕೊಂಡಾ ಡುವದಕ್ಕೂ ಯಾಜಕರನ್ನೂ ಲೇವಿಯರನ್ನೂ ನೇಮಿಸಿ ದನು.
Cross references
ಇದಲ್ಲದೆ ಕರ್ತನ ಮಂಜೂಷದ ಮುಂದೆ ಸೇವೆ ಮಾಡಲೂ ಇಸ್ರಾಯೇಲಿನ ದೇವರಾದ ಕರ್ತನನ್ನು ಸ್ಮರಿಸುವದಕ್ಕೂ ಕೊಂಡಾಡುವದಕ್ಕೂ ಹೊಗಳುವ ದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು.
ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ದಾವೀದನು ಬಿಟ್ಟವರು ಯಾರಂದರೆ--ಪ್ರತಿ ದಿವಸದ ಕಾರ್ಯದ ಪ್ರಕಾರ ಯಾವಾಗಲೂ ಮಂಜೂಷದ ಮುಂದೆ ಸೇವೆಮಾಡಲು ಆಸಾಫನನ್ನೂ ಅವನ ಸಹೋ ದರರನ್ನೂ;
ಗಿಬ್ಯೋನಿನಲ್ಲಿರುವ ಉನ್ನತದಲ್ಲಿ ಕರ್ತನ ಗುಡಾರದ ಮುಂದೆ ಸೇವಿಸುವದಕ್ಕೆ ಯಾಜಕನಾದ ಚಾದೋಕನೂ ಯಾಜಕರಾದ ಅವನ ಸಹೋದರರೂ
ಹೀಗೆ ದಾವೀದನು ಮುದುಕನಾಗಿಯೂ ದಿವಸಗಳು ತುಂಬಿದವನಾಗಿಯೂ ಇರು ವಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರಾ ಯೇಲಿನ ಮೇಲೆ ಅರಸನನ್ನಾಗಿ ಮಾಡಿದನು.
ಗೇರ್ಷೋನನು ಕೆಹಾತನು ಮೆರಾರೀಯು ಎಂಬ ಲೇವಿಯ ಮಕ್ಕಳಲ್ಲಿ ಅವರನ್ನು ವರ್ಗಗಳಾಗಿ ದಾವೀ ದನು ವಿಭಾಗಿಸಿದನು.
ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ
ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ;
ಉಜ್ಜೀಯೇಲನ ಕುಮಾರರಲ್ಲಿ ವಿಾಕನು; ವಿಾಕನ ಕುಮಾರರಲ್ಲಿ ಶಾವಿಾರನು.
ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು.
ಹದಿ ನೆಂಟನೆಯದು ಹನಾನೀಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ;
ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು.
ಇದಲ್ಲದೆ ಅಲ್ಲಿ ಇದ್ದ ಸಮಸ್ತ ಯಾಜಕರು ಪರಿಶುದ್ಧ ವಾಗಿದ್ದು ಸರದಿಗಳ ಪ್ರಕಾರ ಕಾಯದೆ ಇದ್ದದರಿಂದ
ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ ಅವರ ಸೇವೆಗೆ ಯಾಜಕರ ಸರದಿ ಗಳನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ ಯಾಜಕರ ಮುಂದೆ ಸ್ತುತಿಸುವದಕ್ಕೂ ಸೇವೆಮಾಡು ವದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ ಸೇವೆಯ ಬಾಗಲಲ್ಲಿ ತಮ್ಮ ಸರದಿಗಳಾಗಿ ದ್ವಾರಪಾಲಕರನ್ನೂ ನೇಮಿಸಿದನು. ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.
ಹೀಗೆಯೇ ಲೇವಿಯರೂ ಸಮಸ್ತ ಯೆಹೂದದವರೂ ಯಾಜಕನಾದ ಯೆಹೋಯಾದನು ಆಜ್ಞಾಪಿಸಿದ ಎಲ್ಲಾ ದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ತಿನಲ್ಲಿ ಒಳಗೆ ಬರಬೇಕಾದ ತನ್ನ ಮನುಷ್ಯರನ್ನೂ ಸಬ್ಬತ್ತಿ ನಲ್ಲಿ ಹೊರಟು ಹೋಗಬೇಕಾದವರನ್ನೂ ತೆಗೆದು ಕೊಂಡನು. ಯಾಜಕನಾದ ಯೆಹೋಯಾದನು ಅವ ರನ್ನು ಕಳುಹಿಸಿ ಬಿಡಲಿಲ್ಲ.
ಅವರು ಅದನ್ನು ಮುಗಿಸಿದ ಮೇಲೆ ಮಿಕ್ಕ ಹಣವನ್ನು ಅರ ಸನ ಮುಂದೆಯೂ ಯೆಹೋಯಾದನ ಮುಂದೆಯೂ ತಂದರು. ಅದರಿಂದ ಕರ್ತನ ಆಲಯಕ್ಕೋಸ್ಕರ ಬಂಗಾ ರದ ಬೆಳ್ಳಿಪಾತ್ರೆಗಳಾದ ಸೇವೆಯ ಪಾತ್ರೆಗಳೂ ಅರ್ಪಣೆಯ ಪಾತ್ರೆಗಳೂ ಸೌಟುಗಳೂ ಮಾಡಲ್ಪ ಟ್ಟವು. ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಕರ್ತನ ಆಲಯದಲ್ಲಿ ದಹನಬಲಿ ಗಳನ್ನು ಅರ್ಪಿಸಿದರು.
ಆಗ ಸಮಸ್ತ ಇಸ್ರಾಯೇ ಲಿಗೋಸ್ಕರ ಪ್ರಾಯಶ್ಚಿತ್ತವಾಗಿ ಯಾಜಕರು ಅವುಗಳನ್ನು ವಧಿಸಿ ಬಲಿಪೀಠದ ಮೇಲೆ ಅವುಗಳ ರಕ್ತದಿಂದ ಪಾಪ ನಿವಾರಣೆ ಮಾಡಿದರು. ದಹನಬಲಿಯೂ ಪಾಪದ ಬಲಿಯೂ ಸಮಸ್ತ ಇಸ್ರಾಯೇಲಿಗೋಸ್ಕರ ಆಗ ಬೇಕೆಂದು ಅರಸನು ಆಜ್ಞಾಪಿಸಿದನು,
ಹಾಗೆಯೇ ಇಪ್ಪತ್ತು ವರುಷ ಪ್ರಾಯ ಮೊದಲು ಗೊಂಡು ಅವರ ತಂದೆಗಳ ಮನೆಯ ಹಾಗೆ ಬರೆಯ ಲ್ಪಟ್ಟ ಅವರವರ ಕೆಲಸಗಳಲ್ಲಿಯೂ ಅವರವರ ಸರತಿ ಗಳಲ್ಲಿಯೂ ಇರುವ ಯಾಜಕರಿಗೂ ಲೇವಿಯ ರಿಗೂ
ಆಗ ಅವನು ಯಾಜಕರನ್ನು ಅವರವರ ಕೆಲಸಗಳಲ್ಲಿ ನಿಲ್ಲಿಸಿ ಕರ್ತನ ಆಲಯದ ಸೇವೆ ಮಾಡುವದಕ್ಕೆ ಅವರನ್ನು ದೃಢ ಪಡಿಸಿ,
ಮೋಶೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಯೆರೂ ಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆ ಗೋಸ್ಕರ ಯಾಜಕರನ್ನು ಅವರ ಸರತಿಯ ಪ್ರಕಾರವೂ ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.
ಇದಲ್ಲದೆ ಆಸಾಫನ ಮಗ ನಾದ ಜಬ್ದೀಯ ಮಗನಾದ ವಿಾಕಾಯನ ಮಗ ನಾದ ಮತ್ತನ್ಯನು ಪ್ರಾರ್ಥನೆಯಲ್ಲಿ ಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಹೋ ದರರಲ್ಲಿ ಎರಡನೆಯವನು ಬಕ್ಬುಕ್ಯನು; ಅವನ ಸಂಗಡ ಯೆದುತೂನನ ಮಗನಾದ ಗಾಲಾಲನ ಮಗನಾದ ಶಮ್ಮೂವನ ಮಗನಾದ ಅಬ್ದನು.
ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ.
ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು.
ಯೂದಾಯದ ಅರಸನಾದ ಹೆರೋದನ ದಿನ ಗಳಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರಿಯನೆಂದು ಹೆಸರಿದ್ದ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ಕುಮಾರ್ತೆಯರಿಗೆ ಸಂಬಂಧಪಟ್ಟವಳು. ಆಕೆಯ ಹೆಸರು ಎಲಿಸಬೇತ್.