ಯಾಜಕರೂ ಲೇವಿಯರೂ ಕರ್ತನ ನ್ಯಾಯಪ್ರಮಾಣದಲ್ಲಿ ಬಲ ಗೊಳ್ಳುವ ನಿಮಿತ್ತ ಅವರಿಗೆ ತಕ್ಕ ಭಾಗವನ್ನು ಕೊಡ ಬೇಕೆಂದು ಯೆರೂಸಲೇಮಿನಲ್ಲಿರುವ ಜನರಿಗೆ ಅವನು ಆಜ್ಞಾಪಿಸಿದನು.
Cross references
ಭೂಮಿಯ ಬೀಜದಲ್ಲಾಗಲಿ ಮರದ ಫಲದ ಲ್ಲಾಗಲಿ ಹತ್ತನೇ ಪಾಲೆಲ್ಲಾ ಕರ್ತನದೇ. ಅದು ಕರ್ತನಿಗೆ ಪರಿಶುದ್ಧವಾದದ್ದು.
ಕರ್ತನು ಮಾತನಾಡಿ ಆರೋನನಿಗೆ--ಇಗೋ, ನಾನು ನಿನಗೆ ಎತ್ತುವ ಅರ್ಪಣೆಗಳ ಅಪ್ಪಣೆಗಳನ್ನು ಕೊಟ್ಟಿದ್ದೇನೆ. ಇಸ್ರಾಯೇಲ್ ಮಕ್ಕಳು ಪರಿಶುದ್ಧ ಮಾಡುವ ಎಲ್ಲಾದರಲ್ಲಿ ನಾನು ಅವುಗಳನ್ನು ಅಭಿಷೇಕ ಕ್ಕೋಸ್ಕರ ನಿನಗೂ ನಿನ್ನ ಮಕ್ಕಳಿಗೂ ನಿತ್ಯಕಟ್ಟಳೆಯಾಗಿ ಕೊಟ್ಟಿದ್ದೇನೆ.
ನೀನು ಲೇವಿಯರಿಗೆ ಹೀಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಾನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ತಕ್ಕೊಂಡರೆ ನೀವು ಅದರಲ್ಲಿ ಕರ್ತನಿಗೆ ಹತ್ತನೆಯ ದರಿಂದ ಹತ್ತನೆಯದನ್ನು ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
ಅವರು ಪಿತ್ರಾರ್ಜಿತ ಆಸ್ತಿಯನ್ನು ಮಾರಿದ್ದಲ್ಲದೆ ಸಮವಾದ ಭಾಗಗಳನ್ನು ತಿನ್ನಬೇಕು.
ಲೆಕ್ಕ ದಲ್ಲಿ ಬರೆಯಲ್ಪಟ್ಟ ಮೂರು ವರುಷ ಪ್ರಾಯ ಮೊದಲು ಗೊಂಡು ಮೇಲಿರುವ ಗಂಡು ಮಕ್ಕಳು ಹೊರತಾಗಿ ಕರ್ತನ ಮನೆಯಲ್ಲಿ ಪ್ರವೇಶಿಸುವವರೆಲ್ಲರಿಗೆ ಅವರ ಕೆಲಸಗಳಲ್ಲಿ ಅವರ ಸರತಿಗಳ ಪ್ರಕಾರ ಅವರ ಸೇವೆಗೆ ಅವರವರ ದಿನದ ಭಾಗವನ್ನು ಕೊಡುವದಕ್ಕೂ
ಲೇವಿಯರ ಪಾಲುಗಳು ಅವರಿಗೆ ಕೊಡಲಿಲ್ಲ ವೆಂದು ನನಗೆ ತಿಳಿಯಿತು. ಯಾಕಂದರೆ ಸೇವೆಯನ್ನು ಮಾಡುವ ಲೇವಿಯರೂ ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿಹೋಗುತ್ತಿದ್ದರು.
ಆಗ ಯೆಹೂದದವರೆಲ್ಲರು ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಇವುಗಳಲ್ಲಿ ಹತ್ತರಲೊಂದು ಪಾಲು ಕೊಠಡಿ ಗಳಲ್ಲಿ ತಂದರು.
ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ.
ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಕಣತುಳಿಯುವ ಎತ್ತಿನ ಬಾಯನ್ನು ನೀನು ಕಟ್ಟಬಾರದು ಎಂದು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದದೆ. ದೇವರು ಚಿಂತಿಸು ವದು ಎತ್ತುಗಳಿಗಾಗಿಯೋ?
ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.