ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.
Cross references
ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಆ ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು.
ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಅಶ್ಶೂರಿನ ಅರಸನಾದ ಸನ್ಹೇರೀಬನನ್ನು ಕುರಿತು ನೀನು ನನಗೆ ಪ್ರಾರ್ಥನೆ ಮಾಡಿದ್ದನ್ನು ನಾನು ಕೇಳಿ ದ್ದೇನೆ. ಕರ್ತನು ಅವನನ್ನು ಕುರಿತು ಹೇಳಿದ ವಾಕ್ಯ ವೇನಂದರೆ--
ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.
ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?
ಆತನು ತನ್ನ ಅರಸನಿಗೆ ದೊಡ್ಡ ಬಿಡುಗಡೆಯನ್ನು ಕೊಟ್ಟು ತನ್ನ ಅಭಿಷಕ್ತನಾದ ದಾವೀದನಿಗೂ ಅವನ ಸಂತತಿಗೂ ಕೃಪೆಯನ್ನು ಎಂದೆಂದಿಗೂ ತೋರಿಸುತ್ತಾನೆ.
ಬಲವಾದ ಹೃದಯ ದವರು ಕೊಳ್ಳೆ ಮಾಡಲ್ಪಟ್ಟಿದ್ದಾರೆ, ತೂಕಡಿಸಿ ನಿದ್ರೆ ಹೋಗಿದ್ದಾರೆ; ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗ ಳನ್ನು ಕಂಡುಕೊಳ್ಳಲಿಲ್ಲ.
ಓ ಯಾಕೋಬನ ದೇವರೇ, ನಿನ್ನ ಗದರಿಕೆಯಿಂದ ರಥವೂ ಕುದುರೆಯೂ ಗಾಢ ನಿದ್ರೆಯಲ್ಲಿ ಬಿದ್ದಿವೆ.
ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?
ಆತನು ಪ್ರಧಾನರ ಪ್ರಾಣವನ್ನು ತೆಗೆದು ಹಾಕು ತ್ತಾನೆ; ಭೂಮಿಯ ಅರಸುಗಳಿಗೆ ಭಯಂಕರ ನಾಗಿದ್ದಾನೆ.
ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.
ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; ದೀನರಲ್ಲಿ ಜ್ಞಾನವಿದೆ.
ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?
ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.
ಇಗೋ, ಕರ್ತನೂ ಸೈನ್ಯಗಳ ಕರ್ತನು ಭಯಂಕರ ವಾಗಿ ಕೊಂಬೆಯನ್ನು ಕತ್ತರಿಸುವನು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವವು; ಗರ್ವಿಷ್ಠರು ತಗ್ಗಿಸಲ್ಪಡು ವರು.ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.
ಏನಂದರೆ ಅಶ್ಶೂ ರ್ಯರನ್ನು ನನ್ನ ದೇಶದಲ್ಲಿ ಮುರಿದುಬಿಡುತ್ತೇನೆ. ನನ್ನ ಪರ್ವತಗಳ ಮೇಲೆ ಅವನನ್ನು ತುಳಿದುಬಿಡುತ್ತೇನೆ; ಅವನ ನೊಗವು ಅವರ ಮೇಲಿನಿಂದ ತೊಲಗಿ ಅವ ನ ಭಾರವು ಅವನ ಭುಜದ ಮೇಲಿನಿಂದ ತೊಲಗು ವದು.
ಸಮುದ್ರವು ಭೋರ್ಗರೆಯುವಂತೆ ಭೋರ್ಗರೆ ಯುವ ಬಹು ಜನಗಳ ಸಮೂಹಕ್ಕೆ ಅಯ್ಯೋ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಾಂಗಗಳಿಗೆ ಅಯ್ಯೋ!
ಅದೂ ಅಲ್ಲದೆ ನಿನ್ನ ಅನ್ಯರ ಗುಂಪು ಸೂಕ್ಷ್ಮ ವಾದ ದೂಳಿನಂತಾಗುವದು, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರು ವದು; ಹೌದು, ಅದು ಕ್ಷಣ ಮಾತ್ರದಲ್ಲಿ ಫಕ್ಕನೆ ಆಗುವದು.
ಹಸಿದ ಮನುಷ್ಯನು ಕನಸುಕಂಡು ಇಗೋ, ಉಣ್ಣುತ್ತಾನೆ ಆದರೆ ಅವನು ಎಚ್ಚತ್ತಾಗ ಪ್ರಾಣ ತುಂಬದ ಹಾಗೆಯೂ ಇಲ್ಲವೆ ಬಾಯಾರಿದ ವನು ಸ್ವಪ್ನದಲ್ಲಿ ಇಗೋ, ಕುಡಿಯುತ್ತಾನೆ ಆದರೆ ಅವನು ಎಚ್ಚರವಾದಾಗ ಇಗೋ, ಬಲಹೀನನಾಗಿದ್ದು ಪ್ರಾಣ ಆಶಿಸುವ ಹಾಗೆಯೂ ಚೀಯೋನ್ ಪರ್ವ ತಕ್ಕೆ ವಿರೋಧವಾಗಿ ಯುದ್ಧಮಾಡುವ ಹಾಗೆಯೇ ಎಲ್ಲಾ ಜನಾಂಗಗಳ ಸಮೂಹವಿರುವದು.
ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
ಕರ್ತನು ಹೀಗನ್ನುತ್ತಾನೆ--ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿ ಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.
ಇದಾಗದಿದ್ದರೆ ನನ್ನ ಯಜಮಾನನ ಸೇವಕ ರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯ ಮುಖವನ್ನು ಹೇಗೆ ತಿರುಗಿಸಿ ಬಿಡುವಿ? ಹೀಗಿರಲಾಗಿ ಕುದುರೆಗಳಿ ಗೋಸ್ಕರವೂ ರಾಹುತರಿಗೋಸ್ಕರವೂ ಐಗುಪ್ತದಲ್ಲಿ ನಂಬಿಕೊಳ್ಳುತ್ತೀ.
ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿ ಅವನನ್ನು ಕುರಿತು
ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
ನಾನೇ ಕರ್ತನು, ಅದೇ ನನ್ನ ಹೆಸರು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತೋತ್ರ ವನ್ನು ಎರಕದ ವಿಗ್ರಹಗಳಿಗೂ ಕೊಡೆನು.
ಹೇಗಂದರೆ--ದಾವೀ ದನ ಸಿಂಹಾಸನದ ಮೇಲೆ ಕೂತುಕೊಳ್ಳುವ ಯೆಹೂದದ ಅರಸನೇ, ನೀನೂ ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಕರ್ತನ ವಾಕ್ಯವನ್ನು ಕೇಳಲಿ, ಕರ್ತನು ಹೇಳುವದೇನಂದರೆ--
ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್ ಮೇಷಕ್ ಅಬೇದ್ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ.
ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು.
ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.
ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು
ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ,