ಆದಾಗ್ಯೂ ಹಿಜ್ಕೀಯನೂ ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ ಹಿಜ್ಕೀಯನ ದಿವಸಗಳಲ್ಲಿ ಕರ್ತನ ರೌದ್ರವು ಅವರ ಮೇಲೆ ಬರಲಿಲ್ಲ.
Cross references
ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ
ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.
ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಆ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು.
ಆಗ ಯೆಶಾಯನು ಹಿಜ್ಕೀಯನಿಗೆ--ಕರ್ತನ ವಾಕ್ಯವನ್ನು ಕೇಳು.
ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ.ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
ಅವರು ತಮ್ಮನ್ನು ತಗ್ಗಿಸಿ ಕೊಂಡದ್ದನ್ನು ಕರ್ತನು ನೋಡಿದಾಗ ಕರ್ತನ ವಾಕ್ಯವು ಶೆಮಾಯನಿಗೆ ಉಂಟಾಯಿತು. ಏನಂದರೆಅವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವ ರನ್ನು ನಾಶಮಾಡದೆ ಅವರು ಸ್ವಲ್ಪಮಟ್ಟಿಗೆ ತಪ್ಪಿಸಿ ಕೊಳ್ಳುವಂತೆ ಮಾಡುವೆನು. ಶೀಶಕನ ಕೈಯಿಂದ ನನ್ನ ಕೋಪವು ಯೆರೂಸಲೇಮಿನ ಮೇಲೆ ಹೊಯ್ಯಲ್ಪಡು ವದಿಲ್ಲ.
ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು.
ಇದಲ್ಲದೆ ಅವನ ಪ್ರಾರ್ಥನೆಯೂ ಅವನು ದೇವ ರಿಗೆ ಭಿನ್ನವಿಸಿದ್ದೂ ಅವನ ಸಮಸ್ತ ಪಾಪವೂ ಅವನ ಅಪರಾಧವೂ ಅವನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಉನ್ನತ ಸ್ಥಳಗಳಲ್ಲಿ ಕಟ್ಟಿಸಿದ ತೋಪುಗಳೂ ಕೆತ್ತಿಸಿದ ವಿಗ್ರಹಗಳೂ ಸ್ಥಾಪಿಸಿದ ಸ್ಥಳಗಳೂ ಇಗೋ, ಪ್ರವಾದಿ ಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿವೆ.
ತನ್ನ ತಂದೆಯಾದ ಮನಸ್ಸೆಯು ತನ್ನನ್ನು ತಗ್ಗಿಸಿಕೊಂಡ ಹಾಗೆ ಆಮೋನನು ಕರ್ತನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ; ಆದರೆ ಆಮೋನನು ಅಧಿಕ ವಾಗಿ ಅಪರಾಧ ಮಾಡಿದನು.
ನೀನು ಈ ಸ್ಥಳಕ್ಕೆ ವಿರೋಧ ವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ಆತನ ಮುಂದೆ ನಿನ್ನನ್ನು ತಗ್ಗಿಸಿಕೊಂಡಿ. ನಿನ್ನನ್ನು ನನ್ನ ಮುಂದೆ ತಗ್ಗಿಸಿ ಕೊಂಡು ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದರಿಂದ ನಾನು ಅವನ ಮೊರೆಯನ್ನು ಕೇಳಿದೆನೆಂದು ಕರ್ತನು ಹೇಳುತ್ತಾನೆ.
ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ಸಮಾಧಾನದಿಂದ ನಿನ್ನ ಸಮಾ ಧಿಗೆ ಸೇರಿಸಲ್ಪಡುವಿ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ನೋಡುವದಿಲ್ಲ ಎಂದು ಕರ್ತನು ಹೇಳುತ್ತಾನೆ ಎಂದು ಹೇಳಿದಳು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ಹೇಳಿದರು.
ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನ ವರೆಗೆ ನಿನ್ನ ಮನೆಯಲ್ಲಿ ಸಂಗ್ರಹವಾದ ದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿವಸವು ಬರು ವದು. ಇಲ್ಲೇನೂ ಉಳಿಯುವದಿಲ್ಲ.
ಆದರೆ ಅವರು ಪ್ರವಾದಿಗಳಾಗಿದ್ದರೆ, ದೇವರ ವಾಕ್ಯವು ಅವರ ಸಂಗಡ ಇದ್ದರೆ ಕರ್ತನ ಆಲಯದಲ್ಲಿಯೂ ಯೆಹೂ ದದ ಅರಸನ ಮನೆಯಲ್ಲಿಯೂ ಯೆರೂಸಲೇಮಿ ನಲ್ಲಿಯೂ ಉಳಿದ ಪಾತ್ರೆಗಳು ಬಾಬೆಲಿಗೆ ಹೋಗದ ಹಾಗೆ ಅವರು ಸೈನ್ಯಗಳ ಕರ್ತನಿಗೆ ವಿಜ್ಞಾಪನೆ ಮಾಡಲಿ.
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯಯನನ್ನೂ ಯೆಹೂದದ ಮತ್ತು ಯೆರೂಸ ಲೇಮಿನ ಶ್ರೇಷ್ಠರೆಲ್ಲರನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ
ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.