ಇದಲ್ಲದೆ ತನಗೆ ಪಟ್ಟಣಗಳನ್ನೂ ದನಕುರಿಗಳ ಸ್ವಾಸ್ತ್ಯವನ್ನೂ ಬಹಳವಾಗಿ ಮಾಡಿಕೊಂಡನು. ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟನು.
Cross references
ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು.
ನಿನ್ನ ದೇವ ರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳಬೇಕು; ಈ ಹೊತ್ತು ಇರುವಂತೆ ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ತನ್ನ ಒಡಂಬಡಿಕೆಯನ್ನು ಸ್ಥಾಪಿಸುವ ಹಾಗೆ ಆಸ್ತಿಯನ್ನು ಸಂಪಾದಿಸುವ ಬಲವನ್ನು ನಿನಗೆ ಕೊಡುವಾತನು ಆತನೇ.
ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ.
ಶಾರೋನಿನಲ್ಲಿ ಮೇಯಿಸುವ ದನಗಳ ಮೇಲೆ ಶಾರೋನಿನವನಾದ ಶಿಟ್ರೈ ಇದ್ದನು; ತಗ್ಗುಗಳಲ್ಲಿರುವ ದನಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು ಇದ್ದನು.
ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ.
ಅವನು ದಿನಗಳು ತುಂಬಿದವನಾಗಿ ಐಶ್ವರ್ಯದಿಂದಲೂ ಘನದಿಂದಲೂ ತುಂಬಲ್ಪಟ್ಟು ಒಳ್ಳೇ ವೃದ್ಧಪ್ರಾಯದಲ್ಲಿ ಸತ್ತುಹೋದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಆಳಿದನು.
ಆದದರಿಂದ ಕರ್ತನು ರಾಜ್ಯವನ್ನು ಅವನ ಕೈಯಲ್ಲಿ ಸ್ಥಿರಪಡಿಸಿದನು. ಯೆಹೂದ ವೆಲ್ಲವೂ ಯೆಹೋಷಾಫಾಟನಿಗೆ ಕಾಣಿಕೆಯನ್ನು ಕೊಟ್ಟ ದ್ದರಿಂದ ಅವನಿಗೆ ಐಶ್ವರ್ಯವೂ ಘನತೆಯೂ ಅಧಿಕ ವಾಗಿ ದೊರಕಿತು.
ಆಗ ಅಮಚ್ಯನು ದೇವರ ಮನುಷ್ಯನಿಗೆ--ಆದರೆ ಇಸ್ರಾಯೇಲಿನ ದಂಡಿಗೆ ನಾನು ಕೊಟ್ಟ ನೂರು ತಲಾಂತುಗಳಿಗೋಸ್ಕರ ಏನು ಮಾಡಬೇಕು ಅಂದನು. ಅದಕ್ಕೆ ದೇವರ ಮನುಷ್ಯನು--ಕರ್ತನು ಇದಕ್ಕಿಂತ ಅಧಿಕವಾಗಿ ನಿನಗೆ ಕೊಡಲು ಶಕ್ತನು ಅಂದನು.
ಅವನು ಅರಣ್ಯದಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿ ದನು; ತಗ್ಗಿನ ದೇಶದಲ್ಲಿಯೂ ಬೈಲು ದೇಶದಲ್ಲಿಯೂ ಅವನಿಗೆ ಬಹು ಕುರಿದನಗಳಿದ್ದವು. ಹಾಗೆಯೇ ಪರ್ವತ ಗಳಲ್ಲಿಯೂ ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿ ಗರೂ ದ್ರಾಕ್ಷೇ ವ್ಯವಸಾಯದವರೂ ಇದ್ದರು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.
ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
ಆಗ ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆ--ಯೋಬನು ಸುಮ್ಮನೆ ದೇವರಿಗೆ ಭಯಪಡುತ್ತಾನೋ?
ಇದಲ್ಲದೆ ಕರ್ತನು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಹೆಣ್ಣು ಕತ್ತೆಗಳೂ ಇದ್ದವು.
ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.
ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ