ಈ ಹಿಜ್ಕೀಯನು ಗೀಹೋನೆಂಬ ಮೇಲಿನ ಕಾಲುವೆಯನ್ನು ಮುಚ್ಚಿಬಿಟ್ಟು ಅದನ್ನು ದಾವೀದನ ಪಟ್ಟಣದಲ್ಲಿ ಪಶ್ಚಿಮ ದಿಕ್ಕಿಗೆ ಕಾಲುವೆಯಾಗಿ ಬರಮಾಡಿದನು. ಹೀಗೆಯೇ ಹಿಜ್ಕೀಯನು ತನ್ನ ಸಮಸ್ತ ಕ್ರಿಯೆಗಳಲ್ಲಿ ವೃದ್ಧಿಹೊಂದಿ ದನು.
Cross references
ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣವೆಲ್ಲಾದರ ಪ್ರಕಾರ ನೀನು ಕೈಕೊಂಡು ನಡೆ ಯುವ ಹಾಗೆ ಬಲವಾಗಿರು, ಬಹು ಧೈರ್ಯದಿಂದಿರು, ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ ಅದನ್ನು (ನ್ಯಾಯಪ್ರಮಾಣವನ್ನು) ಬಿಟ್ಟು ಬಲ ಕ್ಕಾದರೂ ಎಡಕ್ಕಾದರೂ ತಿರುಗಬೇಡ.
ಅವರು ಅರಸನ ಸಮ್ಮುಖಕ್ಕೆ ಬಂದಾಗ ಅರಸನು ಅವರಿಗೆ--ನೀವು ನಿಮ್ಮ ಯಜಮಾನನ ಸೇವಕರನ್ನು ಕರಕೊಂಡುಹೋಗಿ ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವ ನನ್ನು ಕರಕೊಂಡು ಹೋಗಿರಿ.
ಹಾಗೆಯೇ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಯೆಹೋಯಾದಾವನ ಮಗನಾದ ಬೆನಾಯನೂ ಕೆರೆತ್ಯರೂ ಪೆಲೇತ್ಯರೂ ಹೋಗಿ ಸೊಲೊಮೋನನನ್ನು ಅರಸನಾದ ದಾವೀ ದನ ಹೇಸರ ಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಕರತಂದರು.
ಅವರು ಅವನನ್ನು ಅರಸನ ಹೇಸರಕತ್ತೆಯ ಮೇಲೆ ಏರಿಸಿ ಯಾಜಕನಾದ ಚಾದೋಕನೂ ಪ್ರವಾದಿ ಯಾದ ನಾತಾನನೂ ಅವನನ್ನು ಗೀಹೋನಿನಲ್ಲಿ ಅರಸನಾಗಿರಲು ಅಭಿಷೇಕಿಸಿದ್ದಾರೆ; ಅವರು ಸಂತೋಷ ಪಡುತ್ತಾ ಅಲ್ಲಿಂದ ಬಂದ ಕಾರಣ ಪಟ್ಟಣವು ಗದ್ದಲ ವಾಯಿತು.
ಹಿಜ್ಕೀಯನ ಇತರ ಕ್ರಿಯೆಗಳೂ ಅವನ ಎಲ್ಲಾ ಪರಾಕ್ರಮವೂ ಅವನು ಕೆರೆಯನ್ನೂ ನಾಲೆ ಯನ್ನೂ ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರ ಮಾಡಿದ್ದೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು;ಅವನ ಮಗನಾದ ಮನಸ್ಸೆಯು ಅವನಿಗೆ ಬದಲಾಗಿ ಅರಸ ನಾದನು.
ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾಗಿದ್ದ ಜೆಕರೀಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಕರ್ತನನ್ನು ಹುಡು ಕುವ ದಿವಸಗಳ ಮಟ್ಟಿಗೂ ದೇವರು ಅವನನ್ನು ಅಭಿ ವೃದ್ಧಿಪಡಿಸಿದನು.
ಅವನು ಪಟ್ಟಣದ ಹೊರಗಿರುವ ನೀರು ಬುಗ್ಗೆಗ ಳನ್ನು ಮುಚ್ಚಿಸುವದಕ್ಕೆ ತನ್ನ ಪ್ರಧಾನರ ಸಂಗಡಲೂ ತನ್ನ ಪರಾಕ್ರಮಶಾಲಿಗಳ ಸಂಗಡಲೂ ಯೋಚಿಸಿ ಕೊಂಡನು. ಅವರು ಅವನಿಗೆ ಸಹಾಯಕೊಟ್ಟರು.
ಆದದರಿಂದ ಅನೇಕ ಜನರು ಕೂಡಿಕೊಂಡು ನೀರು ಬುಗ್ಗೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹಳ್ಳ ವನ್ನೂ ಮುಚ್ಚಿಬಿಟ್ಟು--ಅಶ್ಶೂರಿನ ಅರಸುಗಳು ಬಂದು ಬಹಳ ನೀರು ದೊರಕಿಸಿಕೊಳ್ಳುವದು ಯಾಕೆ ಅಂದರು.
ಇದಾದ ತರುವಾಯ ಮನಸ್ಸೆಯು ದಾವೀದನ ಪಟ್ಟಣದ ಹೊರಭಾಗದಲ್ಲಿ ಗೀಹೋನಿನ ಪಶ್ಚಿಮ ಕಡೆಯ ತಗ್ಗಿನಲ್ಲಿ ವಿಾನುಬಾಗಲ ದ್ವಾರದ ವರೆಗೆ ಓಫೆಲ್ ಸುತ್ತಲೂ ಗೋಡೆಯನ್ನು ಕಟ್ಟಿಸಿ ಅದನ್ನು ಬಹಳ ಎತ್ತರ ಮಾಡಿ ಯೆಹೂದದ ಸಮಸ್ತ ಕೋಟೆ ಯುಳ್ಳ ಪಟ್ಟಣಗಳಲ್ಲಿ ಸೈನ್ಯದ ಅಧಿಪತಿಗಳನ್ನು ಇಟ್ಟನು.
ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
ದಾವೀದನ ಪಟ್ಟಣದ ಕೋಟೆಯ ಒಡಕುಗಳನ್ನು ಬಹಳವೆಂದು ಸಹ ನೋಡುತ್ತೀರಿ; ಕೆಳಗಿನ ಕೊಳಕ್ಕೆ ನೀರನ್ನು ಕೂಡಿಸುತ್ತೀರಿ.