ಬಲಗೊಳ್ಳಿರಿ; ಧೈರ್ಯ ವಾಗಿರ್ರಿ; ಅಶ್ಶೂರಿನ ಅರಸನ ನಿಮಿತ್ತವೂ ಅವನ ಸಂಗಡ ಕೂಡಿರುವ ಮಹಾಗುಂಪಿನ ನಿಮಿತ್ತವೂ ಭಯ ಪಡಬೇಡಿರಿ; ಹೆದರಬೇಡಿರಿ. ಯಾಕಂದರೆ ಅವನ ಸಂಗಡ ಇರುವವರಿಗಿಂತ ನಮ್ಮ ಸಂಗಡ ಅನೇಕರು ಇದ್ದಾರೆ.
Cross references
ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.
ಆತನು ನೂನನ ಮಗನಾದ ಯೆಹೋಶುವನಿಗೆ ಆಜ್ಞೆಕೊಟ್ಟು--ಬಲವಾಗಿರು; ಧೈರ್ಯವಾಗಿರು; ನಾನು ಇಸ್ರಾಯೇಲ್ ಮಕ್ಕಳಿಗೆ ಪ್ರಮಾಣಮಾಡಿದ ದೇಶಕ್ಕೆ ನೀನು ತರುವಿ; ನಾನು ನಿನ್ನ ಸಂಗಡ ಇರುವೆನು ಅಂದನು.
ಬಲವಾಗಿರು, ದೃಢವಾಗಿರು; ಈ ಜನರಿಗೆ ನಾನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ನೀನು ಬಾದ್ಯವಾಗಿ ಹಂಚಿಕೊಡುವಿ.
ಅದಕ್ಕವನು--ಭಯಪಡಬೇಡ; ಅವರ ಸಂಗಡ ಇರುವವರಿಗಿಂತ ನಮ್ಮ ಸಂಗಡ ಇರುವ ವರು ಹೆಚ್ಚಾಗಿದ್ದಾರೆ ಅಂದನು.
ಅವನು ಇಸ್ರಾಯೇಲಿನ ದೇವರಾದ ಕರ್ತನಲ್ಲಿ ಭರವಸವುಳ್ಳ ವನಾಗಿದ್ದನು; ಅವನಿಗೆ ಮುಂಚೆ ಇದ್ದವರಲ್ಲಿಯೂ ಅವನ ತರುವಾಯ ಯೆಹೂದದ ಎಲ್ಲಾ ಅರಸುಗಳ ಲ್ಲಿಯೂ ಅವನ ಹಾಗೆ ಇದ್ದವನು ಒಬ್ಬನೂ ಇಲ್ಲ.
ಇದಲ್ಲದೆ ಕರ್ತನು ನಮ್ಮನ್ನು ತಪ್ಪಿಸೇ ತಪ್ಪಿಸುವನೆಂದೂ ಈ ಪಟ್ಟಣವು ಅಶ್ಶೂರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದೂ ಹಿಜ್ಕೀ ಯನು ನಿಮಗೆ ಕರ್ತನಲ್ಲಿ ಭರವಸೆ ಹುಟ್ಟಿಸದೆ ಇರಲಿ.
ಆಗ ಯೆಶಾಯನು ಅವರಿಗೆ -- ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನಂದರೆ -- ನೀನು ಕೇಳಿದಂಥ, ಅಶ್ಶೂರಿನ ಅರಸನ ಸೇವಕರು ನನ್ನನ್ನು ದೂಷಿಸಿದಂಥ, ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.
ಕರ್ತನು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನೇಮಗಳನ್ನೂ ನ್ಯಾಯಗಳನ್ನೂ ಕೈಕೊ ಳ್ಳಲು ನೀನು ಜಾಗ್ರತೆಯಾಗಿರು; ಆಗ ಸಫಲವನ್ನು ಹೊಂದುವಿ. ಬಲವಾಗಿರು, ದೃಢವಾಗಿರು; ಭಯಪಡ ಬೇಡ, ಹೆದರಬೇಡ.
ಆದದರಿಂದ ಜಾಗ್ರತೆಯಾಗಿರು; ಯಾಕಂದರೆ ಕರ್ತನು ಪರಿಶುದ್ಧ ಸ್ಥಾನಕ್ಕೋಸ್ಕರ ಮನೆಯನ್ನು ಕಟ್ಟಿಸು ವದಕ್ಕೆ ನಿನ್ನನ್ನು ಆದುಕೊಂಡಿದ್ದಾನೆ; ನೀನು ದೃಢವಾ ಗಿದ್ದು ಅದನ್ನು ಮಾಡು ಅಂದನು.
ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.
ಆದದರಿಂದ ನೀವು ಬಲವಾಗಿರ್ರಿ; ನಿಮ್ಮ ಕೈಗಳು ಬಲಹೀನವಾಗದೆ ಇರಲಿ;ನಿಮ್ಮ ಕೆಲಸಕ್ಕೆ ಪ್ರತಿಫಲ ಸಿಕ್ಕುವದು ಅಂದನು.
ಆಗ ಅವನುಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿ ಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಕರ್ತನು ನಿಮಗೆ ಹೀಗೆ ಹೇಳುತ್ತಾನೆ--ಈ ಮಹಾಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರ ಬೇಡಿರಿ. ಯಾಕಂದರೆ ಯುದ್ಧವು ನಿಮ್ಮದಲ್ಲ, ದೇವ ರದೇ.
ಇದರಲ್ಲಿ ನೀವು ಯುದ್ಧ ಮಾಡಲು ಅವಶ್ಯವಿಲ್ಲ; ನೀವು ನೆಲೆಯಾಗಿ ನಿಂತು ಕೊಂಡು ಕರ್ತನು ನಿಮಗೆ ಮಾಡುವ ರಕ್ಷಣೆಯನ್ನು ನೋಡಿರಿ; ಯೆಹೂದದವರೇ, ಯೆರೂಸಲೇಮಿನ ವರೇ, ಭಯಪಡಬೇಡಿರಿ, ಹೆದರಬೇಡಿರಿ; ಮಾರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ; ಕರ್ತನು ನಿಮ್ಮ ಸಂಗಡ ಇದ್ದಾನೆ ಅಂದನು.
ಅವರೆಲ್ಲಾ ಬಹುಕೋಪಗೊಂಡು ಯೆರೂಸಲೇಮಿಗೆ ವಿರೋಧವಾಗಿ ಯುದ್ಧಮಾಡುವದಕ್ಕೂ ಅಭ್ಯಂತರಿಸು ವದಕ್ಕೂ ಬರಲು ಏಕವಾಗಿ ಒಳಸಂಚು ಮಾಡಿದರು.
ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
ಹೇಳಿದ್ದೇ ನಂದರೆ--ಓ ಅತಿಪ್ರಿಯನಾದ ಮನುಷ್ಯನೇ, ಭಯಪಡ ಬೇಡ; ನಿನಗೆ ಸಮಾಧಾನವಾಗಲಿ; ಬಲವಾಗಿರು; ಹೌದು ಬಲವಾಗಿರು; ಯಾವಾಗ ಅವನು ನನ್ನ ಸಂಗಡ ಹೀಗೆ ಮಾತನಾಡಿದನೋ ನಾನು ನನ್ನ ಬಲವನ್ನು ಹೊಂದಿ--ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ ಎಂದು ಹೇಳಿದೆನು.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ದೇವಾಲಯವನ್ನು ಕಟ್ಟುವ ಹಾಗೆ ಸೈನ್ಯಗಳ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
ಆದದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲ ವಾಗಿರು.
ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.