ಈ ಮನುಷ್ಯರು ಕೆಲಸವನ್ನು ನಂಬಿಕೆಯಿಂದ ಮಾಡಿ ದರು. ಅವರ ವಿಚಾರಣೆಯ ಕರ್ತರು ಯಾರಂದರೆ: ಮೆರಾರಿಯ ಕುಮಾರರಲ್ಲಿ ಲೇವಿಯರಾದ ಯಹತನೂ ಒಬದ್ಯನೂ; ಕೆಹಾತ್ಯರ ಮಕ್ಕಳಲ್ಲಿ ಜೆಕರೀಯನೂ ಮೆಷುಲ್ಲಾಮನೂ; ಗೀತವಾದ್ಯಗಳಲ್ಲಿ ಬುದ್ಧಿಯುಳ್ಳವ ರಾದ ಲೇವಿಯರೆಲ್ಲರೂ ಅದನ್ನು ನಡಿಸುತ್ತಾ ಇದ್ದರು.
Cross references
ಇದಲ್ಲದೆ ಅವರು ಕೆಲಸ ಮಾಡುವವರಿಗೆ ಕೊಡುವದಕ್ಕೆ ಯಾರ ಕೈಯಲ್ಲಿ ಒಪ್ಪಿಸಿದ್ದರೋ ಅವರಿಂದ ಲೆಕ್ಕವನ್ನು ತೆಗೆದು ಕೊಳ್ಳಲಿಲ್ಲ.
ಆದರೆ ಅವರು ನಂಬಿಗಸ್ತರಾಗಿ ಕೆಲಸಮಾಡಿದ್ದರಿಂದ ಅವರ ಕೈಗೆ ಒಪ್ಪಿಸಿದ ಹಣವನ್ನು ಕುರಿತು ಅವರಿಂದ ಲೆಕ್ಕ ಕೇಳಲಿಲ್ಲ.
ಮಂಜೂಷವನ್ನು ನೆಲೆಯಾಗಿ ಇರಿಸಿದ ತರು ವಾಯ ದಾವೀದನು ಕರ್ತನ ಮನೆಯಲ್ಲಿ ಹಾಡುವ ಸೇವೆಯ ಮೇಲೆ ಇರಿಸಿದವರು ಇವರೇ.
ಇದಲ್ಲದೆ ದಾವೀದನು ವಿಶೇಷವಾದ ವೀಣೆ ಗಳನ್ನೂ ಕಿನ್ನರಿಗಳನ್ನೂ ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನು ಎತ್ತುವ ಹಾಗೆ ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವ ದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು.
ಇದಲ್ಲದೆ ಕರ್ತನ ಮಂಜೂಷದ ಮುಂದೆ ಸೇವೆ ಮಾಡಲೂ ಇಸ್ರಾಯೇಲಿನ ದೇವರಾದ ಕರ್ತನನ್ನು ಸ್ಮರಿಸುವದಕ್ಕೂ ಕೊಂಡಾಡುವದಕ್ಕೂ ಹೊಗಳುವ ದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು.
ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ.
ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು; ನಾಲ್ಕು ಸಾವಿರ ಮಂದಿ ಸ್ತುತಿಸುವದಕ್ಕೆ ದಾವೀದನು ಸಿದ್ಧಮಾಡಿದ ವಾದ್ಯಗಳಿಂದ ಕರ್ತನನ್ನು ಸ್ತುತಿಸಿದರು.
ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು.
ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು.
ಅವರು ಅವುಗಳನ್ನು ಸಿದ್ಧಮಾಡಿದ ಮೇಲೆ ಕಾಣಿಕೆಗಳನ್ನೂ ದಶಮಾಂಶ ವನ್ನೂ ಪ್ರತಿಷ್ಠಿಸಲ್ಪಟ್ಟವುಗಳನ್ನೂ ನಂಬಿಕೆಯಾಗಿ ಒಳಗೆ ತಂದರು. ಇವುಗಳ ಮೇಲೆ ಲೇವಿಯನಾದ ಕೋನನ್ಯನು ಅಧಿಕಾರಿಯಾಗಿದ್ದನು. ಅವನ ತರು ವಾಯ ಸಹೋದರನಾದ ಶಿಮ್ಮಿಯು ಅಧಿಕಾರಿಯಾಗಿ ದ್ದನು.
ಆಗ ಯೇಷೂವನೂ ಅವನ ಮಕ್ಕಳೂ ಅವನ ಸಹೋದರರೂ ಕದ್ಮೀಯೇಲನೂ ಅವನ ಮಕ್ಕಳೂ ಯೆಹೂದನ ಮಕ್ಕಳೂ ಹೇನಾದಾ ದನ ಮಕ್ಕಳೂ ಅವರ ಮಕ್ಕಳೂ ಅವರ ಸಹೋದರ ರಾದ ಲೇವಿಯರೂ ದೇವರ ಆಲಯದಲ್ಲಿರುವ ಕೆಲಸ ದವರನ್ನು ನಡಿಸಲು ಎದ್ದು ನಿಂತರು.
ಆಗ ನಾನು ನನ್ನ ಸಹೋದರನಾದ ಹನಾನಿಗೂ ಅರಮನೆಯ ಅಧಿಪತಿಯಾದ ಹನನ್ಯ ನಿಗೂ ಯೆರೂಸಲೇಮಿನ ಕಾವಲನ್ನು ಒಪ್ಪಿಸಿದೆನು. ಇವನು ಸತ್ಯವುಳ್ಳವನಾಗಿಯೂ ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು.
ನಂಬಿಗಸ್ತನಾದ ಮನು ಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು ನಿರ್ದೋಷಿ ಯಾಗಿರುವದಿಲ್ಲ.
ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಾಗಿದೆ.