ಅರಸನು ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ ನಿಗೂ ವಿಾಕನ ಮಗನಾದ ಅಬ್ದೋನನಿಗೂ ರಾಯಸದ ವನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯ ನಿಗೂ ಆಜ್ಞಾಪಿಸಿ--
Cross references
ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ್ನಿಗೂ ವಿಾಕಾ ಯನ ಮಗನಾದ ಅಕ್ಬೋರ್ನಿಗೂ ಲೇಖಕನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ ಹೇಳಿದ್ದೇನಂದರೆ--
ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ಅಧಿಪತಿಯಾಗಿ ಮಾಡಿದನು.
ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ.
ಆಗ ನೆತನ್ಯನ ಮಗನಾದ ಇಷ್ಮಾಯೇಲನು ಮಿಚ್ಪದಿಂದ ಹೊರಟು, ಅಳುತ್ತಲೇ ಅವರ ಎದುರಿಗೆ ಹೋದನು; ಅವರನ್ನು ಎದುರುಗೊಂಡ ಮೇಲೆ ಅವರಿಗೆ--ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಬನ್ನಿ ಅಂದನು.
ಇಷ್ಮಾಯೇಲನು ಗೆದಲ್ಯನ ನಿಮಿತ್ತ ಕೊಂದು ಹಾಕಿದ ಮನುಷ್ಯರೆಲ್ಲರ ಹೆಣಗಳನ್ನು ಹಾಕಿದ ಕುಣಿಯು ಯಾವದಂದರೆ--ಅರಸನಾದ ಆಸನು ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಮಾಡಿದ್ದೇ; ಇದನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ ವರಿಂದ ತುಂಬಿಸಿದನು.
ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ತಂದ ಜನರೆಲ್ಲರೂ ಕೂಡಿ ತಿರುಗಿಕೊಂಡು ಕಾರೇಹನ ಮಗ ನಾದ ಯೋಹಾನಾನನ ಬಳಿಗೆ ಬಂದರು.