Home Bibles 2 ದಿನವೃತ್ತಾಂತ 34:21 · ಕನ್ನಡ ಬೈಬಲ್
2 ದಿನವೃತ್ತಾಂತ 34:21 · ಕನ್ನಡ ಬೈಬಲ್

ನೀವು ಹೋಗಿ ನನಗೋಸ್ಕ ರವೂ ಇಸ್ರಾಯೇಲಿನಲ್ಲಿಯೂ ಯೆಹೂದದಲ್ಲಿಯೂ ಉಳಿದವರಿಗೋಸ್ಕರವೂ ಸಿಕ್ಕಿದ ಪುಸ್ತಕದ ಮಾತು ಗಳನ್ನು ಕುರಿತು ಕರ್ತನನ್ನು ವಿಚಾರಿಸಿರಿ. ಯಾಕಂದರೆ ನಮ್ಮ ಪಿತೃಗಳು ಈ ಪುಸ್ತಕದಲ್ಲಿ ಬರೆದ ಎಲ್ಲಾದರ ಪ್ರಕಾರ ಮಾಡಲು ಕರ್ತನ ವಾಕ್ಯವನ್ನು ಕೈಕೊಳ್ಳದೆ ಇದ್ದದರಿಂದ ನಮ್ಮ ಮೇಲೆ ಸುರಿದ ಕರ್ತನ ಕೋಪವು ದೊಡ್ಡದಾಗಿದೆ ಎಂದು ಹೇಳಿದನು.

Cross references

ನಿರ್ಗಮಕಾಂಡ 18:15

ಅದಕ್ಕೆ ಮೋಶೆಯು ತನ್ನ ಮಾವನಿಗೆ--ದೇವರ ವಿಷಯದಲ್ಲಿ ಕೇಳುವದಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ.

ಲೇವ್ಯಕಾಂಡ 26:14

ನೀವು ನನ್ನ ಮಾತನ್ನು ಕೇಳದೆ ಈ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ

ದ್ವಿತೀಯೋಪದೇಶಕಾಂಡ 28:15

ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.

ದ್ವಿತೀಯೋಪದೇಶಕಾಂಡ 29:18

ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು.

ದ್ವಿತೀಯೋಪದೇಶಕಾಂಡ 30:17

ಆದರೆ ನಿನ್ನ ಹೃದಯವು ತಿರಿಗಿಬಿದ್ದು, ನೀನು ಕೇಳದೆಹೋದರೆ ಇಲ್ಲವೆ ಬೇರೆ ದೇವರುಗಳ ಕಡೆಗೆ ಸೆಳೆಯಲ್ಪಟ್ಟು ಅಡ್ಡಬಿದ್ದು ಅವುಗಳಿಗೆ ಸೇವೆಮಾಡಿದರೆ

ದ್ವಿತೀಯೋಪದೇಶಕಾಂಡ 31:16

ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.

ದ್ವಿತೀಯೋಪದೇಶಕಾಂಡ 32:15

ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.

1 ಸಮುವೇಲ 9:9

(ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ--ದೀರ್ಘ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ ಅನ್ನುವನು.) ಯಾಕಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಲ್ಪ ಟ್ಟವನು ಪೂರ್ವಕಾಲದಲ್ಲಿ ದೀರ್ಘದರ್ಶಿ ಎಂದು ಕರೆಯಲ್ಪಡುತ್ತಿದ್ದನು.

1 ಅರಸುಗಳು 22:5

ಆದರೆ ಯೆಹೂಷಾಫಾಟನು ಇಸ್ರಾಯೇಲಿನ ಅರಸ ನಿಗೆ--ನೀನು ದಯಮಾಡಿ ಇಂದು ಕರ್ತನ ವಾಕ್ಯವನ್ನು ವಿಚಾರಿಸು ಅಂದನು.

2 ಅರಸುಗಳು 17:6

ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.

2 ಅರಸುಗಳು 22:13

ನೀವು ಹೋಗಿ ಸಿಕ್ಕಿದ ಈ ಪುಸ್ತಕದ ಮಾತುಗಳನ್ನು ಕುರಿತು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಕರ್ತನ ಬಳಿಯಲ್ಲಿ ವಿಚಾರಿಸಿರಿ. ಯಾಕಂದರೆ ನಮ್ಮನ್ನು ಕುರಿತು ಬರೆಯಲ್ಪಟ್ಟ ಎಲ್ಲಾದರ ಪ್ರಕಾರ ಮಾಡಲು ನಮ್ಮ ಪಿತೃಗಳು ಈ ಪುಸ್ತಕದ ಮಾತುಗಳನ್ನು ಕೇಳದೆ ಹೋದದರಿಂದ ನಮಗೆ ವಿರೋಧವಾಗಿ ಉರಿ ಯುವ ದೇವರ ಕೋಪವು ದೊಡ್ಡದಾಗಿದೆ ಅಂದನು.

2 ದಿನವೃತ್ತಾಂತ 28:6

ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು.

2 ದಿನವೃತ್ತಾಂತ 29:8

ಆದದರಿಂದ ಯೆಹೂದದ ಮೇಲೆ ಯೂ ಮತ್ತು ಯೆರೂಸಲೇಮಿನವರ ಮೇಲೆಯೂ ಕರ್ತನ ರೌದ್ರವಾಯಿತು; ನೀವು ನಿಮ್ಮ ಕಣ್ಣುಗಳಿಂದ ನೋಡುವ ಹಾಗೆ ಆತನು ಅವರನ್ನು ಕಳವಳಕ್ಕೂ ವಿಸ್ಮಯಕ್ಕೂ ಅಪಹಾಸ್ಯಕ್ಕೂ ಒಪ್ಪಿಸಿಕೊಟ್ಟನು.

2 ದಿನವೃತ್ತಾಂತ 33:11

ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.

ಯೆಶಾಯ 37:2

ಇದಲ್ಲದೇ ಅವನು ಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್‌, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವ ರನ್ನು ಕರೆಸಿ--ನೀವು ಗೋಣೀತಟ್ಟನ್ನು ಮುಚ್ಚಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ ಎಂದು ಹೇಳಿಕಳುಹಿ ಸಿದನು.

ಯೆಶಾಯ 37:4

ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.

ಯೆರೆಮಿಯ 21:2

ಹೇಗಂದರೆ--ದಾವೀ ದನ ಸಿಂಹಾಸನದ ಮೇಲೆ ಕೂತುಕೊಳ್ಳುವ ಯೆಹೂದದ ಅರಸನೇ, ನೀನೂ ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಕರ್ತನ ವಾಕ್ಯವನ್ನು ಕೇಳಲಿ, ಕರ್ತನು ಹೇಳುವದೇನಂದರೆ--

ಯೆರೆಮಿಯ 42:2

ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಗರ್ವಿಷ್ಠ ಮನುಷ್ಯ ರೆಲ್ಲರೂ ಮಾತನಾಡಿ ಯೆರೆವಿಾಯನಿಗೆ ಹೇಳಿದ್ದೇ ನಂದರೆ-ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾ ಗಿರುವದಕ್ಕೆ ಐಗುಪ್ತಕ್ಕೆ ಹೋಗಬಾರದೆಂದು ಹೇಳುವದಕ್ಕೆ ನಮ್ಮ ದೇವರಾದ ಕರ್ತನು ನಿನ್ನನ್ನು ಕಳುಹಿಸಲಿಲ್ಲ.

ಯೆಹೆಜ್ಕೇಲ 14:1

ಆಮೇಲೆ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನ ಮುಂದೆ ಕುಳಿತುಕೊಂಡರು.

ಯೆಹೆಜ್ಕೇಲ 20:1

ಏಳನೆಯ ವರುಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಆದದ್ದೇನಂದರೆ-- ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಕರ್ತನ ಬಳಿಗೆ ವಿಚಾರಣೆಗಾಗಿ ಬಂದು ನನ್ನ ಮುಂದೆ ಕುಳಿತು ಕೊಂಡರು.

ರೋಮಾಪುರದವರಿಗೆ 1:18

ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.

ರೋಮಾಪುರದವರಿಗೆ 2:8

ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ

ರೋಮಾಪುರದವರಿಗೆ 4:15

ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ;

Interlinear

Choose Theme