ನೀವು ಹೋಗಿ ನನಗೋಸ್ಕ ರವೂ ಇಸ್ರಾಯೇಲಿನಲ್ಲಿಯೂ ಯೆಹೂದದಲ್ಲಿಯೂ ಉಳಿದವರಿಗೋಸ್ಕರವೂ ಸಿಕ್ಕಿದ ಪುಸ್ತಕದ ಮಾತು ಗಳನ್ನು ಕುರಿತು ಕರ್ತನನ್ನು ವಿಚಾರಿಸಿರಿ. ಯಾಕಂದರೆ ನಮ್ಮ ಪಿತೃಗಳು ಈ ಪುಸ್ತಕದಲ್ಲಿ ಬರೆದ ಎಲ್ಲಾದರ ಪ್ರಕಾರ ಮಾಡಲು ಕರ್ತನ ವಾಕ್ಯವನ್ನು ಕೈಕೊಳ್ಳದೆ ಇದ್ದದರಿಂದ ನಮ್ಮ ಮೇಲೆ ಸುರಿದ ಕರ್ತನ ಕೋಪವು ದೊಡ್ಡದಾಗಿದೆ ಎಂದು ಹೇಳಿದನು.
Cross references
ಅದಕ್ಕೆ ಮೋಶೆಯು ತನ್ನ ಮಾವನಿಗೆ--ದೇವರ ವಿಷಯದಲ್ಲಿ ಕೇಳುವದಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ.
ನೀವು ನನ್ನ ಮಾತನ್ನು ಕೇಳದೆ ಈ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ
ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು.
ಆದರೆ ನಿನ್ನ ಹೃದಯವು ತಿರಿಗಿಬಿದ್ದು, ನೀನು ಕೇಳದೆಹೋದರೆ ಇಲ್ಲವೆ ಬೇರೆ ದೇವರುಗಳ ಕಡೆಗೆ ಸೆಳೆಯಲ್ಪಟ್ಟು ಅಡ್ಡಬಿದ್ದು ಅವುಗಳಿಗೆ ಸೇವೆಮಾಡಿದರೆ
ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.
ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
(ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ--ದೀರ್ಘ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ ಅನ್ನುವನು.) ಯಾಕಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಲ್ಪ ಟ್ಟವನು ಪೂರ್ವಕಾಲದಲ್ಲಿ ದೀರ್ಘದರ್ಶಿ ಎಂದು ಕರೆಯಲ್ಪಡುತ್ತಿದ್ದನು.
ಆದರೆ ಯೆಹೂಷಾಫಾಟನು ಇಸ್ರಾಯೇಲಿನ ಅರಸ ನಿಗೆ--ನೀನು ದಯಮಾಡಿ ಇಂದು ಕರ್ತನ ವಾಕ್ಯವನ್ನು ವಿಚಾರಿಸು ಅಂದನು.
ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
ನೀವು ಹೋಗಿ ಸಿಕ್ಕಿದ ಈ ಪುಸ್ತಕದ ಮಾತುಗಳನ್ನು ಕುರಿತು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಕರ್ತನ ಬಳಿಯಲ್ಲಿ ವಿಚಾರಿಸಿರಿ. ಯಾಕಂದರೆ ನಮ್ಮನ್ನು ಕುರಿತು ಬರೆಯಲ್ಪಟ್ಟ ಎಲ್ಲಾದರ ಪ್ರಕಾರ ಮಾಡಲು ನಮ್ಮ ಪಿತೃಗಳು ಈ ಪುಸ್ತಕದ ಮಾತುಗಳನ್ನು ಕೇಳದೆ ಹೋದದರಿಂದ ನಮಗೆ ವಿರೋಧವಾಗಿ ಉರಿ ಯುವ ದೇವರ ಕೋಪವು ದೊಡ್ಡದಾಗಿದೆ ಅಂದನು.
ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು.
ಆದದರಿಂದ ಯೆಹೂದದ ಮೇಲೆ ಯೂ ಮತ್ತು ಯೆರೂಸಲೇಮಿನವರ ಮೇಲೆಯೂ ಕರ್ತನ ರೌದ್ರವಾಯಿತು; ನೀವು ನಿಮ್ಮ ಕಣ್ಣುಗಳಿಂದ ನೋಡುವ ಹಾಗೆ ಆತನು ಅವರನ್ನು ಕಳವಳಕ್ಕೂ ವಿಸ್ಮಯಕ್ಕೂ ಅಪಹಾಸ್ಯಕ್ಕೂ ಒಪ್ಪಿಸಿಕೊಟ್ಟನು.
ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.
ಇದಲ್ಲದೇ ಅವನು ಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವ ರನ್ನು ಕರೆಸಿ--ನೀವು ಗೋಣೀತಟ್ಟನ್ನು ಮುಚ್ಚಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ ಎಂದು ಹೇಳಿಕಳುಹಿ ಸಿದನು.
ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.
ಹೇಗಂದರೆ--ದಾವೀ ದನ ಸಿಂಹಾಸನದ ಮೇಲೆ ಕೂತುಕೊಳ್ಳುವ ಯೆಹೂದದ ಅರಸನೇ, ನೀನೂ ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಕರ್ತನ ವಾಕ್ಯವನ್ನು ಕೇಳಲಿ, ಕರ್ತನು ಹೇಳುವದೇನಂದರೆ--
ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಗರ್ವಿಷ್ಠ ಮನುಷ್ಯ ರೆಲ್ಲರೂ ಮಾತನಾಡಿ ಯೆರೆವಿಾಯನಿಗೆ ಹೇಳಿದ್ದೇ ನಂದರೆ-ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾ ಗಿರುವದಕ್ಕೆ ಐಗುಪ್ತಕ್ಕೆ ಹೋಗಬಾರದೆಂದು ಹೇಳುವದಕ್ಕೆ ನಮ್ಮ ದೇವರಾದ ಕರ್ತನು ನಿನ್ನನ್ನು ಕಳುಹಿಸಲಿಲ್ಲ.
ಆಮೇಲೆ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನ ಮುಂದೆ ಕುಳಿತುಕೊಂಡರು.
ಏಳನೆಯ ವರುಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಆದದ್ದೇನಂದರೆ-- ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಕರ್ತನ ಬಳಿಗೆ ವಿಚಾರಣೆಗಾಗಿ ಬಂದು ನನ್ನ ಮುಂದೆ ಕುಳಿತು ಕೊಂಡರು.
ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.
ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ
ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ;