ಯಾಕಂದರೆ ತಮ್ಮ ಸಮಸ್ತ ಕೈ ಕ್ರಿಯೆಗಳಿಂದ ನನಗೆ ಕೋಪವನ್ನೆಬ್ಬಿಸುವ ಹಾಗೆ ಅವರು ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಸಲ್ಪಡುವದು; ಅದು ಆರಿಹೋಗುವದಿಲ್ಲ.
Cross references
ಅವರು ತಮ್ಮ ಎಲ್ಲಾ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ನನ್ನ ಕೋಪ ಈ ಸ್ಥಳದ ಮೇಲೆ ಹೊತ್ತಿ ಉರಿಯುವದು, ಆರಿಹೋಗದು ಎಂದು ಕರ್ತನು ಹೇಳುತ್ತಾನೆ.
ನಿಶ್ಚಯವಾಗಿ ಕರ್ತನ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಅದೇನಂದರೆ, ಮನಸ್ಸೆಯು ತನ್ನ ಎಲ್ಲಾ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ ಅವರನ್ನು ಆತನು ತನ್ನ ಸಮ್ಮುಖದಿಂದ ತೆಗೆದು ಹಾಕುವದಕ್ಕೋಸ್ಕರವೇ.
ರೆಹಬ್ಬಾಮನು ಅರಸನಾದ ಐದನೇ ವರುಷ ದಲ್ಲಿ ಏನಾಯಿತಂದರೆ, ಅವರು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದ್ದರಿಂದ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಬಂದನು.
ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು;
ಅವರು ತಮ್ಮ ಪಿತೃಗಳ ದೇವರಾದ ಕರ್ತನ ಆಲಯವನ್ನು ಬಿಟ್ಟು ತೋಪುಗಳನ್ನೂ ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ರೌದ್ರ ಬಂತು.
ಏನಂದರೆ, ಅವನು ತನ್ನ ತಂದೆಯಾದ ಹಿಜ್ಕೀಯನು ಕೆಡವಿಹಾಕಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಎಬ್ಬಿಸಿ ತೋಪುಗಳನ್ನು ಹಾಕಿ ಆಕಾಶದ ಸೈನ್ಯ ಕ್ಕೆಲ್ಲಾ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.
ಆದರೆ ನಮ್ಮ ತಂದೆಗಳು ಪರಲೋಕದ ದೇವರಿಗೆ ಕೋಪವನ್ನು ಎಬ್ಬಿಸಿದ ತರುವಾಯ ಆತನು ಅವರನ್ನು ಬಾಬೆಲಿನ ಅರಸನಾಗಿದ್ದ ಕಸ್ದೀಯರ ದೇಶದವನಾದ ನೆಬೂಕ ದ್ನೆಚ್ಚರನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಬಾಬೆಲಿಗೆ ತಕ್ಕೊಂಡು ಹೋದನು.
ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು.
ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.
ಕರ್ತನಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ, ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸ ಕೂಡದ ಹಾಗೆ ಉರಿಯುವದು.
ಸುಗ್ಗಿ ಹೋಯಿತು, ಬೇಸಿಗೆಕಾಲ ತೀರಿತು; ಆದರೆ ನಾವು ರಕ್ಷಿಸಲ್ಪಡಲಿಲ್ಲ.
ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
ಆತನು ತನ್ನ ತೀಕ್ಷ್ಣ ಕೋಪದಲ್ಲಿ ಇಸ್ರಾಯೇಲಿನ ಕೊಂಬುಗಳನ್ನೆಲ್ಲಾ ಕಡಿದು ಹಾಕಿದ್ದಾನೆ. ಆತನು ಶತ್ರುವಿನ ಎದುರಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡಿದ್ದಾನೆ. ಆತನು ಸುತ್ತಲೂ ಪ್ರಜ್ವಲಿಸಿ ದಹಿಸುವ ಬೆಂಕಿಯ ಹಾಗೆ ಯಾಕೋಬನಿಗೆ ವಿರುದ್ಧ ವಾಗಿ ದಹಿಸಿಬಿಟ್ಟಿದ್ದಾನೆ.
ಆತನು ಶತ್ರುವಿನ ಹಾಗೆ ತನ್ನ ಬಿಲ್ಲನ್ನು ಬೊಗ್ಗಿಸಿದ್ದಾನೆ, ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾನೆ. ಆತನು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್ ಮಗಳ ಗುಡಾರದಲ್ಲಿ ಸುರಿದಿದ್ದಾನೆ.
ಕರ್ತನು ತನ್ನ ರೋಷವನ್ನು ತೀರಿಸಿ ದ್ದಾನೆ; ಆತನು ತನ್ನ ಉಗ್ರವಾದ ಕೋಪವನ್ನು ಸುರಿದಿದ್ದಾನೆ; ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.
ಕರ್ತನಾದ ನಾನೇ ಅದನ್ನು ಹಚ್ಚಿದೆನೆಂದು ಶರೀರ ದಲ್ಲಿರುವವರೆಲ್ಲರೂ ತಿಳಿದುಕೊಳ್ಳುವರು! ಅದು ಆರಿ ಹೋಗುವ ದಿಲ್ಲ.ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.
ನೀವು ಕರ್ತನನ್ನು ಹುಡುಕಿ ಬದುಕಿರಿ, ಇಲ್ಲದಿದ್ದರೆ ಆತನು ಬೆಂಕಿಯಂತೆ ಯೋಸೇಫನ ಮನೆತನದಲ್ಲಿ ಪ್ರವೇಶಿಸುವನು; ಅದು ನುಂಗಿಬಿಡುವದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವದಿಲ್ಲ.
ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;
ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.