ದಾವೀದನೂ ಆಸಾ ಫನೂ ಹೇಮಾನನೂ ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು; ಹಾಗೆಯೇ ದ್ವಾರಪಾಲಕರು ಪ್ರತಿಯೊಂದು ಬಾಗಲಲ್ಲಿ ಇದ್ದರು; ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು; ಯಾಕಂದರೆ ಅವರ ಸಹೋದರರಾದ ಲೇವಿಯರು ಅವರ ನಿಮಿತ್ತ ಸಿದ್ಧಮಾಡಿದರು.
Cross references
ದ್ವಾರಪಾಲಕರು ಯಾರಂದರೆ -- ಶಲ್ಲೂಮನೂ ಅಕ್ಕೂಬನೂ ಟಲ್ಮೋನನೂ ಅಹೀಮಾನನೂ ಇವರ ಸಹೋದರರೂ. ಇವರಲ್ಲಿ ಶಲ್ಲೂಮನು ಮುಖ್ಯಸ್ಥ ನಾಗಿದ್ದನು.
ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ.
ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು; ನಾಲ್ಕು ಸಾವಿರ ಮಂದಿ ಸ್ತುತಿಸುವದಕ್ಕೆ ದಾವೀದನು ಸಿದ್ಧಮಾಡಿದ ವಾದ್ಯಗಳಿಂದ ಕರ್ತನನ್ನು ಸ್ತುತಿಸಿದರು.
ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು.
ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು.
ಇದರಲ್ಲಿ ದ್ವಾರಪಾಲಕರ ವರ್ಗಗಳು ಕರ್ತನ ಮನೆಯಲ್ಲಿ ಸೇವಿಸುವದಕ್ಕೆ ವರ್ಗವರ್ಗಕ್ಕೆದುರಾಗಿ ಮುಖ್ಯಸ್ಥರಲ್ಲಿ ವಿಭಾಗಿಸಲ್ಪಟ್ಟಿದ್ದವು.
ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ ಅವರ ಸೇವೆಗೆ ಯಾಜಕರ ಸರದಿ ಗಳನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ ಯಾಜಕರ ಮುಂದೆ ಸ್ತುತಿಸುವದಕ್ಕೂ ಸೇವೆಮಾಡು ವದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ ಸೇವೆಯ ಬಾಗಲಲ್ಲಿ ತಮ್ಮ ಸರದಿಗಳಾಗಿ ದ್ವಾರಪಾಲಕರನ್ನೂ ನೇಮಿಸಿದನು. ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.
ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು.
ಕಟ್ಟುವವರು ಕರ್ತನ ಮಂದಿರಕ್ಕೆ ಅಸ್ತಿವಾರ ಹಾಕುವಾಗ ಇಸ್ರಾ ಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಕರ್ತನನ್ನು ಸ್ತುತಿಸುವದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವ ರಾಗಿ ತುತೂರಿಗಳನ್ನೂದುವ ಯಾಜಕರನ್ನೂ ತಾಳಗ ಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಇಟ್ಟರು.
ಯಾಜಕರೂ ಲೇವಿಯರ ಕೂಡ ಶುದ್ಧಮಾಡಿ ಕೊಂಡಿದ್ದರು; ಅವರೆಲ್ಲರು ಶುಚಿಯಾಗಿದ್ದು ಸೆರೆಯ ಸಮಸ್ತ ಮಕ್ಕಳಿಗೋಸ್ಕರವೂ ಯಾಜಕರಾದ ತಮ್ಮ ಸಹೋದರರಿಗೋಸ್ಕರವೂ ತಮಗೋಸ್ಕರವೂ ಪಸ್ಕ ವನ್ನು ವಧಿಸಿದರು.
ನನ್ನ ಸ್ವರದಿಂದ ದೇವರಿಗೆ ಮೊರೆಯಿಟ್ಟೆನು, ದೇವರಿಗೆ ನನ್ನ ಸ್ವರದಿಂದ ಮೊರೆಯಿಟ್ಟೆನು; ಆತನು ನನ್ನ ಮೊರೆಯನ್ನು ಆಲೈಸಿದನು.
ಓ ನನ್ನ ಜನರೇ, ನನ್ನ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ; ನನ್ನ ಬಾಯಿ ಮಾತುಗಳಿಗೆ ನಿಮ್ಮ ಕಿವಿಗಳನ್ನು ಬೊಗ್ಗಿಸಿರಿ.
ದೇವರೇ, ಅನ್ಯಜನಾಂಗಗಳು ನಿನ್ನ ಬಾಧ್ಯತೆಯೊಳಗೆ ಬಂದು, ನಿನ್ನ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.