ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.
Cross references
ನನ್ನ ಸಬ್ಬತ್ತುಗಳನ್ನು ನೀನು ಕೈಕೊಳ್ಳಬೇಕು; ನನ್ನ ಪವಿತ್ರ ಸ್ಥಳವನ್ನು ಭಯಭಕ್ತಿಯಿಂದ ಕಾಣಬೇಕು; ನಾನೇ ಕರ್ತನು.
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದಾಗ ಆ ಜನಾಂಗಗಳು ಮಾಡುವ ಅಸಹ್ಯಗಳ ಪ್ರಕಾರ ಮಾಡುವದಕ್ಕೆ ನೀನು ಕಲಿಯ ಬಾರದು.
ಅರಸನಾದ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇಸೆರನನ್ನು ಎದುರುಗೊಳ್ಳಲು ದಮಸ್ಕಕ್ಕೆ ಹೋಗಿ ಅಲ್ಲಿ ಒಂದು ಬಲಿಪೀಠವನ್ನು ಕಂಡನು. ಆಗ ಅರಸ ನಾದ ಆಹಾಜನು ಆ ಬಲಿಪೀಠದ ರೂಪವನ್ನೂ ಅದರ ಎಲ್ಲಾ ಕೈ ಕೆಲಸದ ಪ್ರಕಾರ ಮಾದರಿಯನ್ನೂ ಯಾಜಕನಾದ ಊರೀಯನಿಗೆ ಕಳುಹಿಸಿದನು.
ಇದಲ್ಲದೆ ಅವನು ಬೆನ್ಹಿನ್ನೋಮ ಮಗನ ತಗ್ಗಿನಲ್ಲಿ ಧೂಪವನ್ನರ್ಪಿಸಿ ಕರ್ತನು ಇಸ್ರಾ ಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯರ ಅಸಹ್ಯಗಳ ಪ್ರಕಾರ ಬೆಂಕಿಯಲ್ಲಿ ತನ್ನ ಮಕ್ಕಳನ್ನು ಸುಟ್ಟನು.
ಇದ ಲ್ಲದೆ--ಯೆರೂಸಲೇಮಿನಲ್ಲಿ ನನ್ನ ಹೆಸರು ಯುಗ ಯುಗಕ್ಕೂ ಇರುವದೆಂದು ಕರ್ತನು ಹೇಳಿದ ಕರ್ತನ ಆಲಯದಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.
ಹೀಗೆಯೇ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ನಾಶ ಮಾಡಿದ ಜನಾಂಗಗಳಿಗಿಂತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಕೆಟ್ಟದ್ದನ್ನು ಮಾಡು ವದಕ್ಕೆ ತಪ್ಪಿಹೋಗುವಂತೆ ಮನಸ್ಸೆಯು ಮಾಡಿದನು.
ನಮ್ಮ ತಂದೆಗಳ ದಿವಸಗಳು ಮೊದಲುಗೊ ಂಡು ಈ ದಿವಸದ ವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಈ ದೇಶಗಳ ಅರಸುಗಳ ಕೈಗೆ ಒಪ್ಪಿಸಲ್ಪಟ್ಟು ನಮ್ಮ ಅಕ್ರಮಗಳಿಗೋಸ್ಕರ ನಾವೂ ನಮ್ಮ ಅರಸುಗಳೂ ನಮ್ಮ ಯಾಜಕರೂ ಕತ್ತಿಗೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ
ಏಳಿರಿ, ರಾತ್ರಿಯಲ್ಲಿ ಏರಿಹೋಗಿ ಅವಳ ಅರಮನೆಗಳನ್ನು ನಾಶಮಾಡೋಣ;
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಮರಗಳನ್ನು ಕಡಿಯಿರಿ; ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ; ವಿಚಾರಿಸಲ್ಪಡತಕ್ಕ ಪಟ್ಟಣವು ಇದೇ; ಅವಳಲ್ಲಿ ತುಂಬ ಬಲಾತ್ಕಾರ ಅದೆ.
ಹೀಗೆ ಹಗ್ಗಗಳಿಂದ ಯೆರೆವಿಾಯನನ್ನು ಎಳೆದು ಅವನನ್ನು ಕುಣಿಯೊಳಗಿಂದ ಎತ್ತಿದರು; ಆಮೇಲೆ ಯೆರೆವಿಾಯನು ಸೆರೆಮನೆಯ ಅಂಗಳದಲ್ಲಿ ಉಳಿದನು.
ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು;
ಆಮೇಲೆ ಆತನು ನನಗೆ --ಮನುಷ್ಯಪುತ್ರನೇ, ಈಗ ಉತ್ತರದ ಕಡೆಗೆ ನಿನ್ನ ಕಣ್ಣುಗಳನ್ನು ಎತ್ತು ಅಂದಾಗ ನಾನು ಉತ್ತರದ ಕಡೆಗೆ ಕಣ್ಣುಗಳನ್ನೆತ್ತಿದೆನು; ಇಗೋ, ಉತ್ತರದಲ್ಲಿ ಯಜ್ಞ ವೇದಿಯ ಬಾಗಿಲಲ್ಲಿ ಅಸೂಯೆ ವಿಗ್ರಹವು ಪ್ರವೇಶ ದಲ್ಲಿತ್ತು.
ನಾನೇ ಕರ್ತನೆಂದು ನೀವು ತಿಳಿದುಕೊಳ್ಳು ವಿರಿ; ನೀವು ನನ್ನ ನಿಯಮಗಳಲ್ಲಿ ನಡೆಯಲಿಲ್ಲ; ನನ್ನ ನ್ಯಾಯಗಳನ್ನು ಪಾಲಿಸಲಿಲ್ಲ; ಆದರೂ ನಿಮ್ಮ ಸುತ್ತಲಿರುವ ಅನ್ಯ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದೀರಿ.
ಇಗೋ ಇಸ್ರಾ ಯೇಲಿನ ಪ್ರಭುಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾನೆ.
ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ; ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ; ಪರಿಶುದ್ಧ ವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಭೇದವೆಣಿಸಲಿಲ್ಲ; ಶುದ್ಧಾಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ, ನನ್ನ ಸಬ್ಬತ್ತುಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದದರಿಂದ ನಾನು ಅವರಲ್ಲಿ ಅಪವಿತ್ರನಾದೆನು.
ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ.
ಇಲ್ಲವೆ ನಿನ್ನ ಹೆಸರಿನಲ್ಲಿ ನಮ್ಮ ಅರಸರಿಗೂ ಪ್ರಧಾನ ರಿಗೂ ತಂದೆಗಳಿಗೂ ದೇಶದ ಎಲ್ಲಾ ಜನರಿಗೂ ಮಾತ ನಾಡಿದ ನಿನ್ನ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡ ಲಿಲ್ಲ.
ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ.
ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ?
ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ,
ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ.