ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.
Cross references
ಆದರೆ ಏಳನೆಯ ವರುಷವು ದೇಶಕ್ಕೆ ವಿಶ್ರಾಂತಿಗಾಗಿ ಸಬ್ಬತ್ತಾಗಿರುವದು, ಕರ್ತನಿಗಾಗಿ ಒಂದು ಸಬ್ಬತ್ತಾಗಿರುವದು. ನೀವು ನಿಮ್ಮ ಹೊಲವನ್ನು ಬಿತ್ತಬಾರದು ಇಲ್ಲವೆ ದ್ರಾಕ್ಷೇತೋಟ ವನ್ನು ಕತ್ತರಿಸಬಾರದು.
ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ವರೆಗೂ ಭೂಮಿ ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ತನ್ನ ಸಬ್ಬತ್ತುಗಳನ್ನು ಅನುಭವಿಸುವದು; ಆಗ ಭೂಮಿ ವಿಶ್ರಮಿಸಿಕೊಂಡು ತನ್ನ ಸಬ್ಬತ್ತುಗಳನ್ನು ಅನುಭವಿ ಸುವದು.
ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ.
ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು.
ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ.
ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ.
ಆಗ ಪ್ರವಾದಿಯಾದ ಹನನ್ಯನು ಆ ನೊಗವನ್ನು ಪ್ರವಾದಿಯಾದ ಯೆರೆವಿಾಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
ಆದದರಿಂದ ನನ್ನ ಸೇವಕನಾದ ಯಾಕೋ ಬನೇ, ಭಯಪಡಬೇಡ ಎಂದು ಕರ್ತನು ಅನ್ನುತ್ತಾನೆ; ಇಸ್ರಾಯೇಲೇ ಹೆದರಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಲ್ಲಿರುವನು; ಹೆದರಿಸುವವನಿಲ್ಲದೆ ಸೌಖ್ಯವಾಗಿರುವನು.
ಅವನ ಆಳಿಕೆಯ ಮೊದಲನೆಯ ವರುಷದಲ್ಲಿ ದಾನಿಯೇಲನಾದ ನಾನು ಕರ್ತನು ತನ್ನ ವಾಕ್ಯವನ್ನು ಪ್ರವಾದಿಯಾದ ಯೆರೆವಿಾಯನಿಗೆ ದಯಪಾಲಿಸಿದ ಹಾಗೆ ತಾನು ಯೆರೂಸಲೇಮಿಗೆ ಹಾಳು ಬೀಳುವಿಕೆಗಳಲ್ಲಿ ಎಪ್ಪತ್ತು ವರುಷಗಳನ್ನು ಸಂಪೂರ್ಣಮಾಡುವ ಹಾಗೆ ವರುಷಗಳ ಲೆಕ್ಕವನ್ನು ಪುಸ್ತಕದಿಂದ ತಿಳಿದುಕೊಂಡೆನು.
ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ.
ಆಗ ಕರ್ತನ ದೂತನು ಉತ್ತರಕೊಟ್ಟು ಹೀಗಂ ದನು--ಓ ಸೈನ್ಯಗಳ ಕರ್ತನೇ, ನೀನು ಯೆರೂಸಲೇ ಮನ್ನೂ ಯೆಹೂದದ ಪಟ್ಟಣಗಳನ್ನೂ ಎಷ್ಟರ ವರೆಗೆ ಕನಿಕರಿಸದೆ ಇರುವಿ? ಅವುಗಳ ಮೇಲೆ ಈ ಎಪ್ಪತ್ತು ವರುಷಗಳು ಸಿಟ್ಟು ಮಾಡಿದ್ದೀಯಲ್ಲವೋ ಅಂದನು.
ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.