ಇದಲ್ಲದೆ ಹತ್ತು ತೊಟ್ಟಿಗಳನ್ನು ಮಾಡಿಸಿ ಅವುಗಳಲ್ಲಿ ದಹನಬಲಿಗೋಸ್ಕರ ಅರ್ಪಿಸು ವವುಗಳನ್ನು ತೊಳೆಯುವ ನಿಮಿತ್ತವಾಗಿ ಬಲಪಾರ್ಶ್ವ ದಲ್ಲಿ ಐದನ್ನೂ ಎಡಪಾರ್ಶ್ವದಲ್ಲಿ ಐದನ್ನೂ ಇರಿಸಿ ದನು. ಆದರೆ ಆ ಸಮುದ್ರವು ಯಾಜಕರಿಗೋಸ್ಕರ ತೊಳೆಯುವದಕ್ಕೆ ಇತ್ತು.
Cross references
ಆರೋನನನ್ನೂ ಅವನ ಕುಮಾರರನ್ನೂ ಸಭೆಯ ಗುಡಾರದ ಬಾಗಲಿನ ಬಳಿಗೆ ತಂದು ನೀರಿನಲ್ಲಿ ಅವರನ್ನು ತೊಳೆಯಬೇಕು.
ತೊಳೆದುಕೊಳ್ಳುವ ದಕ್ಕಾಗಿ ಹಿತ್ತಾಳೆಯಒಂದು ಗಂಗಾಳವನ್ನೂ ಅದಕ್ಕೆ ಹಿತ್ತಾಳೆಯ ಕಾಲುಗಳನ್ನು ಮಾಡಿ ಅದನ್ನು ಸಭೆಯ ಗುಡಾರಕ್ಕೂ ಯಜ್ಞವೇದಿಗೂ ಮಧ್ಯದಲ್ಲಿಟ್ಟು ಅದರಲ್ಲಿ ನೀರನ್ನು ಹೊಯ್ಯಬೇಕು.
ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು.
ಆದರೆ ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು; ಆಗ ಯಾಜಕನು ಅವೆಲ್ಲವುಗಳನ್ನು ತಂದು ಯಜ್ಞವೇದಿಯ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿಯ ಹಾಗೆಯೂ ಕರ್ತನಿಗೆ ಸುವಾಸನೆ ಯಾಗುವಂತೆಯೂ ಸುಡಬೇಕು.
ಹತ್ತು ತಾಮ್ರದ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು ನಾಲ್ವತ್ತು ಕೊಳಗ ಹಿಡಿಯಿತು; ಒಂದೊಂದು ತೊಟ್ಟಿಯು ನಾಲ್ಕು ಮೊಳವು; ಆ ಹತ್ತು ಆಧಾರ ಗಳಲ್ಲಿಯೂ ಒಂದೊಂದರ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು.
ಹೀಗೆಯೇ ಹೀರಾಮನು ತೊಟ್ಟಿ ಗಳನ್ನೂ ಸಲಿಕೆಗಳನ್ನೂ ಪಾತ್ರೆಗಳನ್ನೂ ಮಾಡಿದನು. ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನು ಮಾಡಿಸಿದ ಎಲ್ಲಾ ಕೆಲಸಗಳನ್ನು ಮಾಡಿ ತೀರಿಸಿದನು.
ಅವನು ಎರಕದ ಸಮುದ್ರವನ್ನು ಮಾಡಿಸಿದನು; ಅದು ಸುತ್ತಲಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳ, ಅದರ ಎತ್ತರ ಐದು ಮೊಳ, ಸುತ್ತಳತೆ ಮೂವತ್ತು ಮೊಳ ನೂಲಳತೆಯಾಗಿತ್ತು.
ನನ್ನ ಅಕ್ರಮದಿಂದ ನನ್ನನ್ನು ಪೂರ್ಣವಾಗಿ ತೊಳೆ; ನನ್ನ ಪಾಪದಿಂದ ನನ್ನನ್ನು ಶುದ್ಧಿಮಾಡು.
ಕೊಠಡಿಗಳೂ ಅವುಗಳ ಪ್ರವೇಶಗಳೂ ಬಾಗಲುಗಳ ಕಂಬಗಳ ಬಳಿಯಲ್ಲಿ, ದಹನ ಬಲಿಯನ್ನು ತೊಳೆ ಯುವಲ್ಲಿ ಇದ್ದವು;
ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.
ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.