ತುತೂರಿ ಊದುವವರೂ ಸಂಗೀತಗಾರರೂ ಕರ್ತನನ್ನು ಕೊಂಡಾ ಡುತ್ತಾ ಹೊಗಳುತ್ತಾ ಏಕವಾಗಿ ಒಂದೇ ಶಬ್ದ ಮಾಡಿ ದಾಗ ತುತೂರಿ ತಾಳ ಮೊದಲಾದ ಗೀತ ವಾದ್ಯಗಳಿಂದ ತಮ್ಮ ಶಬ್ದವನ್ನೆತ್ತಿ--ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇರುವದೆಂದೂ ಕರ್ತನನ್ನು ಕೀರ್ತಿಸುವಾಗ ಕರ್ತನ ಆಲಯವು ಮೇಘದಿಂದ ತುಂಬಲ್ಪಟ್ಟಿತು.ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
Cross references
ಅಲ್ಲಿ ನಾನು ಇಸ್ರಾಯೇಲ್ ಮಕ್ಕಳನ್ನು ಸಂಧಿಸುವೆನು. ಗುಡಾರವು ನನ್ನ ಮಹಿಮೆಯಿಂದ ಪವಿತ್ರವಾಗುವದು.
ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು.
ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ ಮೇಘವು ಕರ್ತನ ಮಂದಿರವನ್ನು ತುಂಬಿತ್ತು.
ಇದಲ್ಲದೆ ಕರ್ತನ ಮಂಜೂಷದ ಮುಂದೆ ಸೇವೆ ಮಾಡಲೂ ಇಸ್ರಾಯೇಲಿನ ದೇವರಾದ ಕರ್ತನನ್ನು ಸ್ಮರಿಸುವದಕ್ಕೂ ಕೊಂಡಾಡುವದಕ್ಕೂ ಹೊಗಳುವ ದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು.
ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು;ಆತನ ಕೃಪೆಯು ಯುಗಯುಗಕ್ಕೂ ಅವೆ.
ಸೊಲೊಮೋನನು ಪ್ರಾರ್ಥಿಸಿ ತೀರಿಸಿದಾಗ ಬೆಂಕಿಯು ಆಕಾಶದಿಂದ ಇಳಿದು ದಹನ ಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು.
ಮಹಿಮೆಯು ಆಲಯವನ್ನು ತುಂಬಿತು. ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿದ್ದರಿಂದ ಯಾಜಕರು ಕರ್ತನ ಮನೆಯಲ್ಲಿ ಹೋಗಲಾರದೆ ಇದ್ದರು.
ಇಸ್ರಾಯೇ ಲಿನ ಮಕ್ಕಳೆಲ್ಲರೂ ಬೆಂಕಿಯು ಇಳಿದದ್ದನ್ನು ಮನೆಯ ಮೇಲೆ ಇರುವ ಕರ್ತನ ಮಹಿಮೆಯನ್ನು ಕಂಡಾಗ ನೆಲಕ್ಕೆ ತಮ್ಮ ಮುಖಗಳನ್ನು ಬಾಗಿಸಿ ಆರಾಧಿಸಿ ಕರ್ತ ನನ್ನು ಕೊಂಡಾಡಿ--ಆತನು ಒಳ್ಳೆಯವನು, ಆತನ ಕೃಪೆಯು ಯುಗಯುಗಕ್ಕೂ ಇರುವದು ಎಂದು ಹೇಳಿ ದರು.
ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಲ್ಲುತ್ತಿದ್ದರು; ಹಾಗೆಯೇ ದಾವೀ ದನು ತಮ್ಮ ಸೇವೆಗಾಗಿ ಹೊಗಳುತ್ತಾ ಕರ್ತನ ಕೃಪೆಯು ಯುಗಯುಗಕ್ಕೂ ಇರುವದೆಂದು ಅರಸನಾದ ದಾವೀ ದನು ಆತನನ್ನು ಕೊಂಡಾಡುವದಕ್ಕೆ ಮಾಡಿಸಿದ ಕರ್ತನ ಗೀತವಾದ್ಯಗಳನ್ನು ಲೇವಿಯರು ಹಿಡುಕೊಂಡಿದ್ದರು. ಯಾಜಕರು ಅವರ ಮುಂದೆ ತುತೂರಿಗಳನ್ನು ಊದಿ ದರು; ಸಮಸ್ತ ಇಸ್ರಾಯೇಲ್ಯರು ನಿಂತಿದ್ದರು.
ಅವನು ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಸೈನ್ಯದ ಮುಂದೆ ಅವರು ಹೊರಡುವಾಗ ಪರಿಶುದ್ಧತ್ವದ ಪ್ರಭೆಯನ್ನು ಸ್ತುತಿಸುವದಕ್ಕೆ ಕರ್ತನನ್ನು ಕೊಂಡಾಡಿರಿ, ಯಾಕಂದರೆ ಆತನ ಕೃಪೆಯು ಯುಗ ಯುಗಕ್ಕೂ ಇರುವದೆಂದು ಹೇಳುವದಕ್ಕೆ ಕರ್ತ ನಿಗೆ ಸಂಗೀತಗಾರರನ್ನು ನೇಮಿಸಿದನು.
ಅವರು ಹಾಡುವದಕ್ಕೂ ಸ್ತುತಿಸುವದಕ್ಕೂ ಆರಂಭಿಸಿದಾಗಲೇ ಕರ್ತನು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯಾರ್ ಪರ್ವತಗಳ ಮಕ್ಕಳಿಗೆ ವಿರೋಧವಾಗಿ ಹೊಂಚಿಕೊಳ್ಳುವವರನ್ನು ಇಟ್ಟಿದ್ದ ರಿಂದ ಅವರು ಹೊಡೆಯಲ್ಪಟ್ಟಿದ್ದರು.
ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು.
ಯೆರೂಸಲೇಮಿನ ಗೋಡೆಯನ್ನು ಪ್ರತಿಷ್ಠೆ ಮಾಡುವಾಗ ಸ್ತುತಿಗಳಿಂದಲೂ ಹಾಡುವದರಿಂದಲೂ ತಾಳಗಳಿಂದಲೂ ವೀಣೆಗಳಿಂದಲೂ ಕಿನ್ನರಿಗಳಿಂದಲೂ ಪ್ರತಿಷ್ಠೆಯನ್ನು ಸಂತೋಷವಾಗಿ ಆಚರಿಸುವದಕ್ಕೆ ಲೇವಿ ಯರನ್ನು ಯೆರೂಸಲೇಮಿಗೆ ಬರಮಾಡುವ ನಿಮಿತ್ತವಾಗಿ ಅವರನ್ನು ಅವರ ಸಮಸ್ತ ಸ್ಥಳಗಳಲ್ಲಿ ಹುಡುಕಿದರು.
ನಿನ್ನಲ್ಲಿ ನಮ್ಮ ಪಿತೃಗಳು ಭರವಸವಿಟ್ಟರು; ಅವರು ಭರವಸವಿಟ್ಟದ್ದರಿಂದ ನೀನು ಅವರನ್ನು ತಪ್ಪಿ ಸಿದಿ.
ಹಾಡು ವವರು ಮುಂದಾಗಿಯೂ ಬಾರಿಸುವವರು ಹಿಂದಾ ಗಿಯೂ ಹೋದರು, ಅವರಲ್ಲಿ ದಮ್ಮಡಿ ಬಾರಿಸುವ ಕನ್ಯೆಯರು ಇದ್ದರು.
ಕೀರ್ತನೆಯನ್ನು ಎತ್ತಿರಿ; ದಮ್ಮಡಿಯನ್ನೂ ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ತನ್ನಿರಿ.
ಬನ್ನಿರಿ, ಕರ್ತನಿಗೆ ಉತ್ಸಾಹ ಧ್ವನಿಮಾಡುವಾ ನಮ್ಮ ರಕ್ಷಣೆಯ ಬಂಡೆಗೆ ಜಯಧ್ವನಿ ಮಾಡೋಣ.
ಸಮಸ್ತ ಭೂಮಿಯೇ, ಕರ್ತನಿಗೆ ಜಯಧ್ವನಿ ಮಾಡಿರಿ,
ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
ಕರ್ತನನ್ನು ಕೊಂಡಾಡಿರಿ, ಆತನು ಒಳ್ಳೆಯವನು; ಆತನ ಕರುಣೆಯು ಎಂದೆಂದಿಗೂ ಅದೆ.
ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ.
ಜಲ್ಲರಿಯ ದೊಡ್ಡ ಶಬ್ದದಿಂದ ಆತನನ್ನು ಸ್ತುತಿಸಿರಿ; ಉತ್ಸಾಹದ ತಾಳಗಳಿಂದ ಆತನನ್ನು ಸ್ತುತಿಸಿರಿ.ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.
ನಿನ್ನ ಕಾವಲುಗಾರರು ಸ್ವರವನ್ನೆತ್ತುವರು; ಆ ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು; ಕರ್ತನು ಚೀಯೋನನ್ನು ತಿರಿಗಿ ತರು ವಾಗ ಅವರು ಕಣ್ಣಲ್ಲಿ ಕಣ್ಣು ಇಟ್ಟು ನೋಡುವರು.
ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು.
ನಂಬಿದ್ದ ಸಮೂಹದವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು; ಇದಲ್ಲದೆ ಅವರಲ್ಲಿ ಯಾವನೂ ತನ್ನಗಿದ್ದ ಯಾವದೊಂದನ್ನೂ ತನ್ನ ಸ್ವಂತ ದ್ದೆಂದು ಹೇಳಲಿಲ್ಲ; ಆದರೆ ಎಲ್ಲವೂ ಅವರಿಗೆ ಹುದು ವಾಗಿತ್ತು.
ಹೀಗೆ ನೀವು ಏಕ ಮನಸ್ಸಿನಿಂದಲೂ ಒಂದೇ ಬಾಯಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ.
ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.